ಬೃಹತ್ ಸಾಲದ ಕಾರಣವನ್ನು ಪ್ರಧಾನಿ ಮೋದಿ ತಿಳಿಸುವರೇ: ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು

Date:

1947ರಿಂದ 2014ರವರೆಗೆ ಭಾರತದ ಸಾಲ – 54 ಲಕ್ಷ ಕೋಟಿ ರೂ. ಆದರೆ, 2014ರಿಂದ 2025ರವರೆಗೆ 200.16 ಲಕ್ಷ ಕೋಟಿಗೆ ಏರಿದೆ. ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿದೆ ಬಿಜೆಪಿಯ ಕೇಂದ್ರ ಸರ್ಕಾರ. ಪಾವತಿಸುತ್ತಿರುವ ಬಡ್ಡಿ 12.76 ಲಕ್ಷ ಕೋಟಿ ರೂ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

“ಸ್ವತಂತ್ರಾನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದೆ. ಬೃಹತ್ ಡ್ಯಾಮ್ ಗಳನ್ನು, ಬೃಹತ್ ಕೈಗಾರಿಕೆಗಳನ್ನು, ವಿಸ್ತಾರದ ರೈಲ್ವೆ ವ್ಯವಸ್ಥೆಯನ್ನು, ಏಮ್ಸ್ ನಂತಹ ಸುಸಜ್ಜಿತ ಆಸ್ಪತ್ರೆಗಳನ್ನು, ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ, ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ, ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ” ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“67ವರ್ಷಗಳಲ್ಲಿನ ಇಷ್ಟೆಲ್ಲ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು, ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು? ಮೋದಿಯವರ ಅಮೃತ ಕಾಲದಲ್ಲಿ ಆಗಿರುವುದು ವಿಕಸಿತ ಭಾರತವಲ್ಲ, ವಿಕಸಿತ ಸಾಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ?
ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ” ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...