ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಶ್ರೀರಾಮ ಸೇನೆ ಮುಖಂಡನ ಬಂಧನ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ಸ್ಮಶಾನವೊಂದರಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಮಾಚಾರ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಶ್ರೀರಾಮ ಸೇನೆಯ ಮುಖಂಡನೆಂದು ತಿಳಿದುಬಂದಿದೆ.

ಆರೋಪಿ, ಶೀರಾಮ ಸೇನೆಯ ಮುಖಂಡ ಮಂಗಳೂರು ಮೂಲದ ಪ್ರಸಾದ್ ಅತ್ತಾವರ ಎಂದು ಹೇಳಲಾಗಿದೆ. ಆರೋಪಿಯ ಮೊಬೈಲ್‌ನಲ್ಲಿ ವಾಮಾಚಾರದ ವಿಡಿಯೋ ದೊರೆತಿದೆ. ಆರೋಪಿಗಳು ಬೆಂಗಳೂರಿನ ಆಶೋಕ ನಗರ ಸ್ಮಶಾನದಲ್ಲಿರುವ ಕಾಳಿಕಾಂಬ ಗುಡಿಯಲ್ಲಿ ವಾಮಾಚಾರ ಮಾಡಿದ್ದಾರೆ. ಕುರಿಯನ್ನು ಬಲಿಕೊಟ್ಟು, ಅದರ ರಕ್ತವನ್ನು ಸ್ನೇಹಮತಿ ಕೃಷ್ಣ ಮತ್ತು ಗಂಗರಾಜು ಅವರ ಫೋಟೋಗೆ ಲೇಪಿಸಿ ದೇವರ ವಿಗ್ರಹಕ್ಕೆ ನೇತುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ, ಮಂಗಳೂರಿನ ಬಿಜೈ ಬಳಿಯ ಸಲೂನ್ ಒಂದರ ಮೇಲೆ ಶ್ರೀರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ ಹಲವರು ದಾಳಿ ನಡೆಸಿದ್ದರು. ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ದಾಂಧಲೆ ನಡೆಸಿದ್ದರು. ಸಲೂನ್ ಮಾಲೀಕ ಬರ್ಕೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿ ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು. ವಿಚಾರಣೆ ವೇಳೆ, ಆತನ ಮೊಬೈಲ್‌ಅನ್ನು ಪರಿಶೀಲಿಸಿದಾಗ ವಾಮಾಚಾರ ಮಾಡಿರುವ ವಿಡಿಯೋ ಪತ್ತೆಯಾಗಿದೆ.

ವಿಡಿಯೋದಲ್ಲಿ, ಸ್ಮಶಾನದ ಗುಡಿಯ ಮುಂದೆ, ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ಲೇಪಿಸಿದ್ದಾರೆ. ಅಲ್ಲದೆ, ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಹಾಗೂ ಸುಮಾ ಆಚಾರ್ಯ ಹೆಸರುಗಳಿರುವ ಚೀಟಿಗಳನ್ನು ಹಾರದಂತೆ ಜೋಡಿಸಿ, ದೇವರ ವಿಗ್ರಹದ ಕೊರಳಿಗೆ ಹಾಕಿರುವುದು ಕಂಡು ಬಂದಿದೆ.

ಜೊತೆಗೆ, ಹಲವಾರು ಸರಣಿ ಪ್ರಾಣಿ ಬಲಿ ಕೊಟ್ಟಿರುವ ವಿಡಿಯೋಗಳು ಆತನ ಮೊಬೈಲ್‌ನಲ್ಲಿ ದೊರೆತಿವೆ. ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...