ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ: ‘ಕಿಲ್ಲರ್‌ ಕಾಂಗ್ರೆಸ್‌’ ಪೋಸ್ಟರ್‌ ಹಿಡಿದು ಶೋಭಾ ಕರಂದ್ಲಾಜೆ ಕಿಡಿ

Date:

ರಾಜ್ಯದಲ್ಲಿ ಮಹಿಳೆರಿಗೆ ರಕ್ಷಣೆ ಇಲ್ಲವಾಗಿದೆ. ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿ, ಆದರೆ, ಮಹಿಳಾ ರಕ್ಷಣೆ ನಿಮ್ಮ ಆದ್ಯತೆಯಾಗಿರಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಮಹಿಳೆಯರ ಕೊಲೆ, ಬಾಲಕಿಯರ ಮೇಲಿನ ಅತ್ಯಾಚಾರ ನಿರಂತರವಾಗಿ ನಡೆಯುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ 1800ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ದೌರ್ಜನ್ಯ ಆಗಿದೆ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಬಲೂನ್ ಮಾರಾಟಕ್ಕೆ ಬಂದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಆಗಿದೆ. ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ನಡೆಯಿತು. ಸರಕಾರ ಬಂದೊಡನೆ, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗ ಬೆಳಗಾವಿ ನಗರದಲ್ಲೇ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ನನ್ಯ ನಡೆದಿತ್ತು” ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಉಪನ್ಯಾಸಕರು, ಅತಿಥಿ ಉಪನ್ಯಾಸಕರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮೂಡಬಿದಿರೆಯ ಉಪನ್ಯಾಸಕರು ಬೆಂಗಳೂರಿಗೆ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡುತ್ತಾರೆ. ಮಲತಂದೆ ತನ್ನ ಮಗಳ ಮೇಲೆ ಮಾಡುತ್ತಾನೆ. ಕೆಲಸ ಹುಡುಕಿಕೊಂಡು ಬಂದ ಬಿಹಾರದ ಕುಟುಂಬ, ಒಡಿಶಾದ ಕುಟುಂಬದ ಮಕ್ಕಳು ಓಡಾಡುತ್ತಿದ್ದರೆ ಅವರನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡುತ್ತಿದ್ದಾರೆ. ಕರ್ನಾಟಕ, ಬೆಂಗಳೂರಿನಲ್ಲಿ ಈ ಧೈರ್ಯ ಹೇಗೆ ಬಂತು? ಇದಕ್ಕೆಲ್ಲ ಸರಕಾರ ಸತ್ತಿರುವುದೇ ಇದಕ್ಕೆ ಕಾರಣ” ಎಂದು ವಿಶ್ಲೇಷಿಸಿದರು.

“ಗೃಹ ಸಚಿವರು ಏನು ಕೆಲಸ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ? ರಾಜ್ಯದ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಭೆ ನಡೆಸುತ್ತಾರೋ ಎಂಬುದೂ ಗೊತ್ತಿಲ್ಲ. ಗೃಹ ಸಚಿವರು ವಿವಿಧ ಜಿಲ್ಲೆಗಳಲ್ಲಿ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳ ಸಭೆ ನಡೆಸಬೇಕು; ಕಾನೂನು- ಸುವ್ಯವಸ್ಥೆಯ ಪರಿಶೀಲನೆ ಮಾಡಬೇಕು. ಆದರೆ, ಇವರು ಬೆಂಗಳೂರು ಬಿಟ್ಟು ಹೊರಟರೆ ತುಮಕೂರು” ಎಂಬಂತಿದೆ ಎಂದು ಆಕ್ಷೇಪಿಸಿದರು.

“ಮುಖ್ಯಮಂತ್ರಿಗಳು ಕಾರ್ಯಕ್ರಮದ ಶಿಲಾನ್ಯಾಸಕ್ಕೆ ಹೆಲಿಕಾಪ್ಟರ್‌ನಲ್ಲೇ ಹೋಗುತ್ತಿದ್ದು, ಅವರಿಗೆ ಭೂಮಿಯಲ್ಲಿ ಏನು ನಡೆಯುತ್ತದೆ ಎಂದು ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಅವರ ರಾಜಕಾರಣ ಬೆಂಗಳೂರಿಗೆ ಮತ್ತು ವಿಧಾನಸೌಧದ ಸುತ್ತ ತಿರುಗುತ್ತಿದೆ. ಬೇಗ ಸಿಎಂ ಆಗಬೇಕೆಂಬುದು ಬಿಟ್ಟರೆ ತಲೆಯಲ್ಲಿ ಇನ್ನೇನೂ ಇಲ್ಲ” ಎಂದು ಟೀಕಿಸಿದರು.

ದುಡ್ಡು ಕೈ ಸೇರಿದರಷ್ಟೇ ವರ್ಗಾವಣೆ

“ಪೊಲೀಸರ ಟೋಪಿ ಬದಲಿಸಿದೆ. ಅವರ ಕೈಗಳನ್ನು ಶಕ್ತಿಯುತವಾಗಿ ಮಾಡುವ ಕಡೆ ಗಮನಿಸಿಲ್ಲ. ದುಡ್ಡು ಕೊಡದೆ ವರ್ಗಾವಣೆ ಆಗುವುದಿಲ್ಲ. ವರ್ಗಾವಣೆಗೆ ಯಾವ ಪೊಲೀಸ್ ಠಾಣೆ ಎಂಬುದಕ್ಕೆ ನಿಗದಿತ ಮೊತ್ತ ಇದೆ. ದುಡ್ಡು ಕೈ ಸೇರಿದರಷ್ಟೇ ವರ್ಗಾವಣೆ” ಎಂದು ಆರೋಪಿಸಿದರು.

“ಎರಡೂವರೆ ವರ್ಷಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿ ಸಮೀಕ್ಷೆಗೆ ಒತ್ತಡಪೂರ್ವಕವಾಗಿ ಕಳಿಸಿದ್ದು, ಅಲ್ಲಿ ಆರಕ್ಕಿಂತ ಹೆಚ್ಚು ಜನ ಸತ್ತಿದ್ದಾರೆ. 15ಕ್ಕೂ ಹೆಚ್ಚು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಮೊದಲ ಬಾರಿಗೆ ಗುತ್ತಿಗೆದಾರರು ಕರ್ನಾಟಕದಲ್ಲಿ ದಯಾಮರಣ ಕೊಡಿ ಎಂದು ಪತ್ರ ಬರೆದಿದ್ದಾರೆ. ಇವರು ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರ ಪ್ರಾಣಕ್ಕೆ ಗ್ಯಾರಂಟಿ ಕೊಡುವವರು ಯಾರು” ಎಂದು ಕೇಳಿದರು.

ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಹೇಮಲತಾ ನಾಯಕ್ ಅವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...