ಸುಜಾತಾ ಭಟ್‌ಗೆ ತಕ್ಷಣ ರಕ್ಷಣೆ ಒದಗಿಸಿ: ಸರ್ಕಾರಕ್ಕೆ ಮಹಿಳಾ ಆಯೋಗ ಒತ್ತಾಯ

Date:

ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಹಿನ್ನೆಲೆಯಲ್ಲಿ, ಅನನ್ಯಾ ಭಟ್ ನಾಪತ್ತೆ ಪ್ರಕರಣದ ದೂರುದಾರರಾದ ಸುಜಾತಾ ಭಟ್ ಅವರಿಗೆ ಮಾಧ್ಯಮಗಳಿಂದ ಉಂಟಾಗುತ್ತಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗವು, ಎಸ್‌ಐಟಿಗೆ ಪತ್ರ ಬರೆದು ತಕ್ಷಣ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದೆ.

ಸಮೂಹ ಮಾಧ್ಯಮಗಳ ವರದಿಗಳ ಆಧಾರದ ಮೇಲೆ ಆಯೋಗವು ಈ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು ವಾರಗಳಿಂದ ಸುಜಾತಾ ಭಟ್ ಅವರನ್ನು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ ಹೇಳಿಕೆ ನೀಡಲು ಪೀಡಿಸುತ್ತಿದ್ದಾರೆ ಎಂದು ಆಯೋಗ ಗಮನಿಸಿದೆ. ಅಲ್ಲದೆ, ಅವರನ್ನು ತೇಜೋವಧೆ ಮಾಡಿ ಹೀಯಾಳಿಸುವುದು, ತಡ ರಾತ್ರಿಯಲ್ಲಿ ಮನೆಗೆ ನುಗ್ಗಿ ವಿಡಿಯೋ ಚಿತ್ರೀಕರಣ ಮಾಡುವುದು, ಕಾರಿನಲ್ಲಿ ಕೂರಿಸಿಕೊಂಡು ವೈರುಧ್ಯಗಳಿಂದ ಕೂಡಿದ ಹೇಳಿಕೆಗಳನ್ನು ಪಡೆಯುವುದು ಮತ್ತು ಮಾನಸಿಕವಾಗಿ ಕುಗ್ಗಿಸುವ ವರದಿಗಳನ್ನು ಪ್ರಸಾರ ಮಾಡುವುದು ಇತ್ಯಾದಿ ಘಟನೆಗಳು ನಡೆದಿರುವುದನ್ನು ಆಯೋಗ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರು ಮತ್ತು ದೂರುದಾರರು ನಿರ್ಭೀತಿಯಿಂದ ಮಾಹಿತಿ ನೀಡುವಂತೆ ಮಾಡುವುದು ಅಗತ್ಯ ಎಂದು ಆಯೋಗ ಹೇಳಿದೆ. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಟ್ಟು ಅವರಿಗೆ ರಕ್ಷಣೆ ನೀಡುವಂತೆ ಕೋರಲಾಗಿದೆ. ಸುಜಾತಾ ಭಟ್ ಅವರು ಮಾಧ್ಯಮಗಳ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗುವ ಸಂಭವವಿದೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.

ಈ ಸದರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು, ಸರ್ಕಾರಕ್ಕೆ ಕೂಡಲೇ ವಿಶೇಷ ತನಿಖಾ ತಂಡದ ಮೂಲಕ ಸುಜಾತಾ ಭಟ್ ಅವರಿಗೆ ಭದ್ರತೆ ಒದಗಿಸಿ, ನಿರ್ಭೀತಿಯಿಂದ ಅಹವಾಲು ಸಲ್ಲಿಸುವ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಆದೇಶಿಸಿದೆ. ಅಲ್ಲದೆ, ಕೈಗೊಂಡ ಕ್ರಮದ ವರದಿಯನ್ನು ತುರ್ತಾಗಿ ಆಯೋಗಕ್ಕೆ ಕಳುಹಿಸಿಕೊಡುವಂತೆ ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...