ಇಳುವರಿ ಕುಸಿತ: ಕಾಳು ಮೆಣಸು ಬೆಲೆ ಭಾರೀ ಏರಿಕೆ!

Date:

ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ಬಿಸಿಲು, ರೋಗಬಾಧೆ ಕಾರಣದಿಂದಾಗಿ ಕಾಳು ಮೆಣಸಿನ ಇಳುವರಿ ಕಡಿಮೆಯಾಗುತ್ತಿದೆ. ಇಳುವರಿ ಕಡಿಮೆಯಾದಂತೆ ಬೆಲೆ ಏರಿಕೆಯಾಗುತ್ತಿದೆ. ಇದೀಗ, ಕಾಳು ಮೆಣಸು ದರವು ಒಂದು ಕೆ.ಜಿ.ಗೆ 1,000 ರೂ. ಗಡಿ ದಾಟುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಕಾಳು ಮೆಣಸು ದರವು ಕಳೆದ ಎರಡು ವರ್ಷಗಳಲ್ಲಿ ಸುಮಾರು 40%ರಷ್ಟು ಏರಿಕೆಯಾಗಿದೆ. ಎರಡು ವರ್ಷಗಳ ಹಿಂದೆ, ಕಾಳು ಮೆಣಸು ಬೆಲೆ ಕೆ.ಜಿ.ಗೆ 400 ರೂ. ಇತ್ತು. ಈ ವರ್ಷದ ಆರಂಭದಲ್ಲಿ 700 ರೂ.ಗೆ ಏರಿಕೆಯಾಗಿತ್ತು. ಇದೀಗ, ಮತ್ತೆ ಬೆಲೆ ಏರಿಕೆಯಾಗಲಿದ್ದು, 900 ರಿಂದ 1,100 ರೂ.ವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

“ಕಾಳು ಮೆಣಸನ್ನು ಹೇರಳವಾಗಿ ಬೆಳೆಯುವ ವಿಯೆಟ್ನಾಂ ಮತ್ತು ಬ್ರೆಜಿಲ್‌ನಲ್ಲಿಯೂ ಇಳುವರಿ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಕಾಳು ಮೆಣಸು ಬೆಳೆಯುವ ಕೊಡಗು, ಜಿಕ್ಕಮಗಳೂರು ಜಿಲ್ಲೆಯಲ್ಲಿ ಇಳಿವರಿ ಕುಸಿದಿದೆ. ಜೊತೆಗೆ, ಸೋಂಕು, ರೋಗಗಳಿಂದ ಕಾಳು ಮೆಣಸಿನ ಬಳ್ಳಿಗಳು ನಾಶವಾಗುತ್ತಿವೆ. ಹೀಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಬಿಕ್ಕಟ್ಟು ಎದುರಾಗಿದೆ. ಬೇಡಿಕೆಯ ಒತ್ತಡ ಜಾಸ್ತಿಯಾಗಿದೆ. ಆದರೆ, ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ಕರ್ನಾಟಕದಲ್ಲಿ ಕಾಳು ಮೆಣಸು ಬೆಲೆಯು 1,000 ರೂ. ಗಡಿ ದಾಟುವ ಸಾಧ್ಯತೆಗಳಿವೆ” ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಸಿಗೆ ಬಿಸಿಲಿನಿಂದಾಗಿ ಕಾಳು ಮೆಣಸು ಬಳ್ಳಿಗಳು ಹೂವು ಬಿಡುವುದು ವಿಳಂಬವಾಯಿತು. ಹೂವು ಬಿಡುವ ವೇಳೆಗೆ ಅಕಾಲಿಕ ಮಳೆ ಸುರಿಯಿತು. ಮಳೆಯಿಂದಾಗಿ ಹೂವುಗಳೆಲ್ಲವೂ ಉದುರಿಹೋಗಿವೆ. ಇದು, ಕಾಳು ಮೆಣಸು ಉತ್ಪಾದನೆ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಕರ್ನಾಟಕ ಸ್ಪೈಸ್ ಅಸೋಸಿಯೇಷನ್​ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...