ರಾಜ್ಯ ‘ಯುವ ಆಯೋಗ’ ಸ್ಥಾಪನೆಗೆ ಯುವ ಸಂಘಟನೆಗಳ ಒಕ್ಕೂಟ ಒತ್ತಾಯ

Date:

ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕು. ಅದಕ್ಕಾಗಿ, ಯುವ ಆಯೋಗದ ಸ್ಥಾಪನೆಗೆ ಶುಕ್ರವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಬೇಕು ಎಂದು ‘ರಾಜ್ಯವ್ಯಾಪಿ ಯುವ ಸಂಘಟನೆಗಳ ಒಕ್ಕೂಟ’ ಆಗ್ರಹಿಸಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ಸಭೆಯಲ್ಲಿ ವಿವಿಧ ಸಂಘಟನೆಗಳ ಯುವ ಮುಖಂಡರು ‘ಯುವ ಆಯೋಗ’ದ ರಚನೆಗಾಗಿ ಸರ್ಕಾಋವನ್ನು ಒತ್ತಾಯಿಸಿದ್ದಾರೆ. ರಾಜ್ಯ ಯುವ ಆಯೋಗದ ಸ್ಥಾಪನೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ನಿರ್ಣಾಯಕ ಹೆಜ್ಜೆ ಇಡುವ ಸಮಯ ಬಂದಿದೆ. ಕರ್ನಾಟಕದ ಯುವಜನತೆ ಇಂದು ಒಂದು ಮಹತ್ವದ ತಿರುವಿನಲ್ಲಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ದೊಡ್ಡ ಪಾಲನ್ನು ಹೊಂದಿರುವ ಯುವಜನರು ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಪ್ರತಿನಿಧಿತ್ವದಂತಹ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವಜನರ ಸಮಸ್ಯೆಗಳಿಗೆ ಸಮಗ್ರ ಹಾಗೂ ವ್ಯವಸ್ಥಾತ್ಮಕ ಪರಿಹಾರ ಒದಗಿಸಲು ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆ ಅತ್ಯಾವಶ್ಯಕವಾಗಿದೆ” ಎಂದು ಒಕ್ಕೂಟ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ಯುವಜನ ಆಯೋಗ ಸ್ಥಾಪಿಸಬೇಕೆಂದು 2018ರಿಂದಲೂ ಅನೇಕ ಸಂಘ ಸಂಸ್ಥೆಗಳು ಸಂಘಟನೆಗಳು ಬೇಡಿಕೆ ಇಟ್ಟಿವೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಯುವ ಆಯೋಗ ಸ್ಥಾಪಿಸುವ ಭರವಸೆ ನೀಡಿತ್ತು. ಆದರೆ, ಇನ್ನೂ ಆ ಭರವಸೆ ಈಡೇರದಿರುವುದು ಯುವ ಸಮುದಾಯದಲ್ಲಿ ನಿರಾಶೆಯನ್ನು ಉಂಟುಮಾಡಿದೆ” ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.

“2 ಕೋಟಿಗೂ ಅಧಿಕ ಯುವಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಯುವಜನ ಹಕ್ಕುಗಳ ರಕ್ಷಣೆಗಾಗಿ ಸ್ವಾಯತ್ತ ವೇದಿಕೆ ಇಲ್ಲದಿರುವುದು ಆಡಳಿತಾತ್ಮಕ ಶೂನ್ಯವಾಗಿದೆ ಯುವಜನ ಹಕ್ಕುಗಳ ರಕ್ಷಣೆ,ದೂರುಗಳ ಪಾರದರ್ಶಕ ಪರಿಹಾರ ಶಿಕ್ಷಣ ಮತ್ತು ಉದ್ಯಮನೀತಿಗಳ ಶಿಫಾರಸ್ಸುಮಾನಸಿಕ ಆರೋಗ್ಯ ರಕ್ಷಣೆ,ಮಾದಕವಸ್ತು ವಿರೋದಿಕಾರ್ಯಯೋಜನೆ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮಗಳ ಅಭಿವೃದ್ಧಿಗೆ ಯುವ ಆಯೋಗದ ಅಗತ್ಯತೆವಿದೆ” ಎಂದು ಹೇಳಿವೆ.

ಸಭೆಯಲ್ಲಿ ಮೂರ್ತಿ ಭೀಮರಾವ್ ಡಾ.ನಸೀಮ್ ಅಹ್ಮದ್ ಸೋಲಿಡಾರಿಟಿ ಯೂತ್ ಮೂಮೆಂಟ್, ಅಶ್ಫಾಕ್ ಉಸ್ತಾದ್ ಸೆರಾ, ಸೈಫ್ – ಯುವ ಜನಾಧಿಕಾರ, ಜನಾರ್ಧನ ಕೆಸರಗದ್ದೆ – ಸಾಮಾಜಿಕ ಕಾರ್ಯಕರ್ತರು, ಅರಾತ್ರಿಕ – ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್, ಡಾ.ಹಕೀಮ್ – ಸಾಮಾಜಿಕ ಕಾರ್ಯಕರ್ತರು, ಮುಹಮ್ಮದ್ ಹಯ್ಯಾನ್ ಸುಹೈಲ್ ಮಸೂಲ್ದಾರ್ -ಕೆಎಸ್ ಡಬ್ಲ್ಯು ಎ ಮುಹಮ್ಮದ್ ಪೀರ್ – ಎಸ್ ಐಒ ಮಾಝ್ ಸಲ್ಮಾನ್ ಮನಿಯಾರ್ – ಸೋಲಿಡಾರಿಟಿ ಯೂತ್ ಮೂವ್ಮೆಂಟ್, ಸುಹೇಲ್ ಅಹ್ಮದ್ ನಸೀರುದ್ದೀನ್ ಮುಹಮ್ಮದ್ ಇಸ್ಮಾಯಿಲ್ – ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ, ಝಬಿ ಅಲಿ ಅಸಾದುಲ್ಲಾ ಖಾನ್ ಝಕಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...