ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ:ತಹಸಿಲ್ದಾರ್ ಸುದರ್ಶನ್ ಯಾದವ್

Date:

ಚಿಂತಾಮಣಿ:ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಸಹಕರಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್ ರವರು ಕೋರಿದರು.

ಚಿಂತಾಮಣಿ ತಾಲೂಕು ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಅಂಗವಾಗಿ ಕನ್ನಡಪರ ಸಂಘಟನೆಗಳಿಗೆ ಕರೆಯಲಾಗಿದ್ದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದವರು ಕನ್ನಡ ರಾಜ್ಯೋತ್ಸವ ದಿನದಂದು ಬೆಳಗ್ಗೆ ಪ್ರವಾಸಿ ಮಂದಿರದಿಂದ ಭವ್ಯ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಲಾಗುವುದು ನಂತರ ಝಾನ್ಸಿ ರಾಣಿ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ,ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಹಾಗೂ ಗಣ್ಯರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವದರ ಮೂಲಕ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಇನ್ನು ಈ ವೇಳೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾತನಾಡಿ ನಗರ ಭಾಗದ ಹಲವು ಅಂಗಡಿ ಮಳಿಗೆಗಳ ಮೇಲೆ ಕನ್ನಡವನ್ನು ಬಳಸುತ್ತಿಲ್ಲ ಹೆಚ್ಚಾಗಿ ಆಂಗ್ಲ ಭಾಷೆಯನ್ನು ಬಳಸುತ್ತಿದ್ದಾರೆ,ಕನ್ನಡ ಭಾಷೆ ಶೇಕಡ 60ರಷ್ಟು ಬಳಸದೆ ಇರುವ ಅಂಗಡಿ ಮಾಲೀಕರ ವಿರುದ್ಧ ನಗರ ಸಭೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಅಂಗಡಿ ಪರವಾನಿಗೆಯನ್ನು ರದ್ದುಗೊಳಿಸಬೇಕು ಆಗ್ರಹಿಸಿದಲ್ಲದೆ ನಗರಸಭೆಯಿಂದ ಅಂಗಡಿ ಮಾಲೀಕರು ಪರವಾನಿಗೆ ಪಡೆಯುವ ವೇಳೆ ನಗರಸಭೆ ಅಧಿಕಾರಿಗಳು ಕನ್ನಡವನ್ನು ಬಳಿಸದೇ ಇರುವ ಅಂಗಡಿಗಳಿಗೆ ಪರವಾನಿಗೆ ನೀಡಬಾರದು ಎಂದು ಹೇಳಿದಾಗ ತಾಲೂಕು ದಂಡಾಧಿಕಾರಿಗಳು ನಗರಸಭೆಗೆ ಇದರ ಬಗ್ಗೆ ಕಟ್ಟುನಿಟ್ಟಿನ ಆದೇಶ ಮಾಡುತ್ತೇನೆ ಎಂದು ಹೇಳಿದ ಅವರು ಅಂಗಡಿ ಪರವಾನಿಗೆ ಪಡೆಯುವವರು ತಮ್ಮ ಅಂಗಡಿಗಳ ಮೇಲೆ ಶೇಕಡ 60ರಷ್ಟು ಕನ್ನಡ ಭಾಷೆಯನ್ನು ಬಳಸಿ ಕನ್ನಡ ಭಾಷೆಯನ್ನು ಉಳಿಸಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಷ್ಟೇ ಅಲ್ಲದೆ ಸಭೆಯಲ್ಲಿ ಭಾಗವಹಿಸಿದ್ದ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ನಗರ ಭಾಗದ ಹಲವು ಶಾಲೆಗಳ ನಾಮಫಲಕಗಳ ಮೇಲೆ ಕನ್ನಡ ಭಾಷೆಯನ್ನು ಬಳಸದೆ ನಿರ್ಲಕ್ಷ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಿಕ್ಷಣ ಇಲಾಖೆ ಶಾಲೆ ನಾಮಫಲಕಗಳ ಮೇಲೆ ಕನ್ನಡ ಬಳಸದೇ ಇರುವ ಶಾಲೆಗಳ ಕ್ರಮ ವಹಿಸಬೇಕೆಂದು ವಿವರಿಸಿದರು.

ಇದನ್ನು ಓದಿದ್ದೀರಾ..? ಪಾಲಾರ್ ಡ್ಯಾಮ್ ಪಿಲ್ಲರ್ ಬಿರುಕು ಬಿದ್ದ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ರವಿ ಭೇಟಿ ನೀಡಿ ಪರಿಶೀಲನೆ

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್,ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಆರ್ ಅಶೋಕ್ ಕುಮಾರ್,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾದೇವಿ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...