ಕೋಲಾರ: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಕೋಲಾರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ತಾಲೂಕಿನ ಸೀತಿಹೊಸೂರು ಗ್ರಾಮದ ಮುರಳಿಗೌಡ ಎನ್ ಅವರನ್ನು ಶನಿವಾರ ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಸಂಘಟನೆ, ಹೋರಾಟದಲ್ಲಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಹಾಗೂ ಕೋಲಾರ ಜಿಲ್ಲೆಯ ಪಕ್ಷದ ಮುಖಂಡರುಗಳ ಶಿಫಾರಸ್ಸಿನೊಂದಿಗೆ ಈ ನೇಮಕಾತಿ ಮಾಡಲಾಗಿದ್ದು ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಹಾಗೂ ಕಿಸಾನ್ ಕಾಂಗ್ರೆಸ್ ಮೂಲಕ ರೈತರನ್ನು ಪಕ್ಷದಲ್ಲಿ ಸಂಘಟಿಸಲು ಶ್ರಮಿಸಬೇಕು ಎಂದು ಈ ಮೂಲಕ ಸೂಚಿಸಲಾಗಿದೆ.
ಇದನ್ನು ಓದಿದ್ದೀರಾ..? ಅಕ್ರಮವಾಗಿ ಒಂಟೆ ಸಾಗಾಣಿಕೆ-ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೋಲಾರ ಜಿಲ್ಲೆಯ ಮುಖಂಡರುಗಳ ಸಹಕಾರ ದೊಂದಿಗೆ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವಂತೆ ಡಿ.ಕೆ ಶಿವಕುಮಾರ್ ಆದೇಶದಂತೆ ಕಿಸಾನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸಚಿನ್ ಮೀಗಾ ಅನುಮೋದನೆ ನೀಡಿದ್ದಾರೆ.





