ಕೆಜಿಎಫ್: ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಕೆ ಜಿ ಎಫ್ ಶಾಖೆಯ ಅಧ್ಯಕ್ಷರಾದ ದೇವರಹಳ್ಳಿ ಎಂ ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ನೇತೃತ್ವದಲ್ಲಿ ಸರ್ಕಾರಿ ಮಾದರಿಗಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗಕ್ಕೆ ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಕಿರು ಕಾಣಿಕೆ ನೀಡಿ ಸಂಕ್ರಾಂತಿ ಹಬ್ಬದ ಶುಭ ಕೋರಿದರು.
ಈ ವೇಳೆ ಅಧ್ಯಕ್ಷರಾದ ದೇವೆರಹಳ್ಳಿ ನಾರಾಯಣಸ್ವಾಮಿ ಮಾತನಾಡಿ, ಕೆಜಿಎಫ್ ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಂಕ್ರಾಂತಿ ಹಬ್ಬದ ಶುಭಹಾರೈಸಿ 2026 ಹೊಸ ವರ್ಷದ ಕ್ಯಾಲೆಂಡರನ್ನು ಜೊತೆಗೆ ಕಿರು ಕಾಣಿಕೆಯನ್ನು ನೀಡಿ ಶುಭ ಹಾರೈಸಲಾಗುತ್ತಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷರಾದ ತಾವು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ನೌಕರರಿಗೆ ತಮ್ಮ ಹಕ್ಕುಗಳು ದೊರೆಯಲು ಹಾಗೂ ಸದಾ ಅವರ ಬೆನ್ನಿಗೆ ನಿಂತು ಶೈಕ್ಷಣಿಕ ಕ್ಷೇತ್ರವನ್ನು ಬಲವರ್ಧನೆಗೊಳಿಸಲು ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು: ಸಂಸದ ಎಂ.ಮಲ್ಲೇಶ್ ಬಾಬು
ಈ ಸಂದರ್ಭದಲ್ಲಿ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ಕೆ ವಿ ಆನಂದ್ ಹಾಗೂ ಅನೇಕ ಶಿಕ್ಷಕರು ಕ್ಯಾಸಂಬಳ್ಳಿ ಸಿಬ್ಬಂದಿ ವರ್ಗ ಮತ್ತು ಸ್ಥಳೀಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.





