ಗದಗ | ಆಗಸ್ಟ್15 ರಂದು 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭ

Date:

  • ರೋಣ ತಾಲೂಕಿನ ಹತ್ತು ಗ್ರಾಮ ಪಂಚಾಯತ್‌ ಗಳಲ್ಲಿ ಶಿಶುಪಾಲನ ಕೇಂದ್ರ ಕಾರ್ಯಾರಂಭ
  • ರಾಜ್ಯ ಸರ್ಕಾರ ಜಾರಿಗೊಳಿಸಿದ ʼಕೂಸಿನ ಮನೆʼ ಮಹತ್ವದ ಯೋಜನೆ ಅನುಷ್ಠಾನ

ರೋಣ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗೆ 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ ಎಂದು ರೋಣ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಎ.ಎನ್ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉದ್ಘಾಟನಾ ಹೊಸ್ತಿಲಲ್ಲಿರುವ ಶಿಶುಪಾಲನ ಕೇಂದ್ರಗಳನ್ನು ಪರಿಶೀಲಿಸಿ ಮಾತನಾಡಿ, “ರಾಜ್ಯ ಸರ್ಕಾರವು ಕೂಸಿನ ಮನೆ (ಶಿಶುಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವುದು ಎಲ್ಲಾ ಗ್ರಾಮ ಪಂಚಾಯತಿಗಳ ಪಿಡಿಓ ಕರ್ತವ್ಯ” ಎಂದರು.

“ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರ ಶಿಶುಗಳ 06 ತಿಂಗಳಿಂದ 03 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ತನ್ನ ಮಡಿಲಿಗೆ ಹಾಕಿಕೊಂಡಿದೆ. ತಾಲೂಕಿನ 10 ಗ್ರಾಮ ಗ್ರಾಮ ಪಂಚಾಯತಿಗಳಾದ ಹೊಸಳ್ಳಿ, ಕುರಹಟ್ಟಿ, ಅಬ್ಬಿಗೇರಿ, ಯಾವಗಲ್, ಕೌಜಗೇರಿ, ಬೆಳವಣಕಿ, ಹೊಳೆಮಣ್ಣೂರು, ಹೊಳೆಆಲೂರು, ಸವಡಿ, ಜಕ್ಕಲಿ ಗ್ರಾಮ ಪಂಚಾಯತ್‌ ಗಳಲ್ಲಿ ಆಗಸ್ಟ್ 15 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಉದ್ಘಾಟನೆ ಆಗಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಐಇಸಿ ಸಂಯೋಜಕ ವೀರಭದ್ರಪ್ಪ ಸಜ್ಜನ, ತಾ.ಪಂ. ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಹಾಗೂ ಪಿಡಿಓ, ಬಿಎಫ್ ಟಿ, ಜಿಕೆಎಮ್ ಗಳು ಇದ್ದರು.

ಶಿಶುಪಾಲನ ಕೇಂದ್ರದ ಮುಖ್ಯ ಉದ್ದೇಶ:

ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ.

ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ. ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ, ಇದರಿಂದ ಮಕ್ಕಳು ಅಪೌಷ್ಠಿಕತೆಗೆ ಒಳಗಾಗಬಹುದಾಗಿದೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ. ಈ ಸಮಸ್ಯೆಗಳ ನಿವಾರಣೆಗೆ ಸರಕಾರ ಈ ಯೋಜನೆ ಆರಂಭಿಸಿದೆ. ಹಳ್ಳಿಗಳ ಮಹಿಳೆಯರು ತಮ್ಮ ಮಕ್ಕಳ ಕುರಿತು ಚಿಂತಿಸಿ, ಮಾನಸಿಕವಾಗಿ ಕುಗ್ಗದೇ ಈ ಯೋಜನೆಯ ಸದುಪಯೋಗಪಡೆದುಕೊಂಡು ನಿಶ್ಚಿಂತೆಯಿಂದ ಕೂಸಿನ ಮನೆಯಲ್ಲಿ ತಮ್ಮ 06 ತಿಂಗಳಿಂದ 03 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...