ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

Date:

ಬಾಗೇಪಲ್ಲಿ : ಜನಸ್ಪಂದನ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಸ್ಥಳದಲ್ಲೇ ವಿತರಣೆ ಯಾವುದೇ ಮಧ್ಯವರ್ತಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ

ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಈ ಜನಸ್ಪಂದನ ಕಾರ್ಯಕ್ರಮ ಮಾಡಲಾಗುತ್ತಿದೆ ಹಾಗೂ ಬಡವರಿಗೋಸ್ಕರ ಮಾಡುತ್ತಿರುವ ಈ ಕಾರ್ಯಕ್ರಮಕ್ಕೆ ಜನರು ಸ್ಪಂದಿಸಬೇಕು ವಿವಿಧ ಇಲಾಖೆಗಳಿಂದ ಸರ್ಕಾರಿ ಸೌಲಭ್ಯಗಳು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಿಳಿಸಿದರು.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಜನಸ್ಪಂದನ ಕಾರ್ಯಕ್ರಮ ಹಾಗೂ ಸರ್ಕಾರದಿಂದ ವಿವಿಧ ಇಲಾಖೆ ಯೋಜನೆಯಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಸೌಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಬಾಗೆಪಲ್ಲಿ ತಾಲೂಕಿನ ಬಿಳ್ಳೂರು ಸರ್ಕಾರಿ ಪ್ರೌಢಶಾಲಾ ಆವರಣ ಹಮ್ಮಿಕೊಳ್ಳಲಾಗಿತ್ತು. ಈ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿ ಅವರು ಮಾತನಾಡಿ ಪ್ರತಿಯೊಂದು ಪಂಚಾಯತಿ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಹಾಗೂ ತಾವುಸಹ ಈ ಕಾರ್ಯಕ್ರಮಕ್ಕೆ ಸ್ಪಂದಿಸಬೇಕು ಜನರು ಸರ್ಕಾರಿ ಕಚೇರಿಗಳನ್ನು ಅಳದಾಡುವುದರ ಬದಲು ಸ್ಥಳದಲ್ಲೇ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಇನ್ನೂ ಕಂದಾಯ ಇಲಾಖೆಯಿಂದ ನೂರು ಜನರಿಗೆ ಪಿಂಚಣಿ ಸೌಲಭ್ಯ, 45 ಹಕ್ಕುಪತ್ರಗಳು, ಸಾಗುವಳಿ ಚೀಟಿಗಳ ಖಾತೆ 10, ಸ್ಮಶಾನಗಳಿಗೆ ಜಾಗ, ನೂರು ಜನರಿಗೆ ಜಮೀನಿನ ಪೋಡಿ, ಬರಿ ಕಂದಾಯ ಇಲಾಖೆಯಿಂದ ಮಾತ್ರ 490 ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ, ಜನರ ಮನೆಯ ಬಳಿ ಬಂದು ಕೆಲಸ ಮಾಡಲಾಗುತ್ತದೆ. ಹಾಗೂ ತಾಲೂಕು ಪಂಚಾಯಿತಿಯಿಂದ 300 ಜನ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳು , ಇನ್ನು ಆರೋಗ್ಯ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಇನ್ನು ಅನೇಕ ಇಲಾಖೆಗಳು ನಿಮಗೋಸ್ಕರ ಇವತ್ತು ಸೌಲಭ್ಯಗಳು ವಿತರಿಸಲಾಗುತ್ತಿದೆ. ಬಡವರಿಗೋಸ್ಕರ ಬಡವರಿಗಾಗಿ ಈ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಲ್ಲರೂ ಇಂತಹ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ತಾಲೂಕು ದಂಡಾಧಿಕಾರಿ ಮನೀಷಾ ಎಸ್ ಪತ್ರಿ ಮಾತನಾಡಿ ಪ್ರತಿಯೊಬ್ಬರು ಜನಸ್ಪಂದನ ಕಾರ್ಯಕ್ರಮದ ವಿಶೇಷತೆ ಏನು ಎಂಬುದು ತಿಳಿಯಬೇಕು ಇದು ಯಾವುದೇ ರಾಜಕೀಯ ಉದ್ದೇಶದಿಂದ ಅಲ್ಲ ಕರ್ನಾಟಕ ಸರ್ಕಾರದ ವತಿಯಿಂದ ಮಾಡಲಾಗುತ್ತಿರುವ ಒಂದು ಕಾರ್ಯಕ್ರಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಮಾಡಲಾಗುತ್ತಿದೆ ವಿವಿಧ ಜನರಿಗೆ ಸರ್ಕಾರಿ ಸೌಲತ್ತುಗಳನ್ನು ವಿತರಿಸಲು ಜನಸ್ಪಂದನವನ್ನು ಮಾಡಲಾಗುತ್ತಿದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ ಮಹಿಳೆಯರಿಗೆ ಶ್ರೀಮಂತವನ್ನು ಮಾಡಲಾಯಿತು.

ಇದನ್ನು ಓದಿದ್ದೀರಾ..? ಕೋಲಾರ ಜಿಲ್ಲೆ ಬಂದ್ ಬಹುತೇಕ ಯಶಸ್ವಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ಎನ್. ಮನೀಷಾ ಮಹೇಶ್ ಪತ್ರಿ, ಇಒ ಜಿ.ವಿ.ರಮೇಶ್, ಡಾ,, ಸಿ.ಎನ್. ಸತ್ಯನಾರಾಯಣರೆಡ್ಡಿ, ಶಿಶುಅಭಿವೃದ್ದಿ ಇಲಾಖೆಯ ರಾಮಚಂದ್ರ, ಬಿ.ಇ.ಒ. ವೆಂಕಟೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶಿವಪ್ಪ, ಪಶುವೖದ್ಯಾದಿಕಾರಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆಯ ಲಲಿತ, ಕೃಷಿ ಇಲಾಖೆಯ ಶ್ರೀನಿವಾಸ್, ಬೆಸ್ಕಾಂ ಇಲಾಖೆಯ ಸೋಮಶೇಖರ್, ಶ್ರೀನಿವಾಸ್, ಅರಣ್ಯ ಇಲಾಖೆಯ ವಾಸುದೇವಮೂರ್ತಿ, ಆಹಾರ ಇಲಾಖೆಯ ಪುಷ್ಪಾ, ರೇಷ್ಮೆ ಇಲಾಖೆಯ ಸುರೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನಿರ್ಮಲಮ್ಮ, ಪಿ.ಡಿ.ಒ. ಭಾಗ್ಯಮ್ಮ, ಮುಖಂಡರಾದ ಪಿ. ಮಂಜುನಾಥರೆಡ್ಡಿ, ಕೆ.ಕೆ. ವೆಂಕಟೇಶ್, ಕೆ.ಸಿ. ಚಂದ್ರಶೇಖರರೆಡ್ಡಿ, ಬಿ.ವಿ. ವೆಂಕಟರವಣ, ಪ್ರಸನ್ನಕುಮಾರ್, ರಾಮಲಿಂಗಾರೆಡ್ಡಿ, ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...