ಜಿ.ವಿ ಶ್ರೀ ರಾಮರೆಡ್ಡಿ ಬಡಾವಣೆಗೆ ತಹಶಿಲ್ದಾರ್ ಮನೀಷಾ ಎಸ್ ಪತ್ರಿ ಭೇಟಿ: ಮೂಲಭೂತ ಸೌಕರ್ಯ ಸಮಸ್ಯೆಗಳ ಪರಿಶೀಲನೆ

Date:

ಬಾಗೇಪಲ್ಲಿ : ಜಿ.ವಿ ಶ್ರೀ ರಾಮರೆಡ್ಡಿ ಬಡಾವಣೆಗೆ ತಾಲೂಕು ದಂಡಾಧಿಕಾರಿ ಮನೀಷಾ ಎಸ್ ಪತ್ರಿರವರು ಭೇಟಿ ನೀಡಿ ಮೂಲಭೂತ ಸೌಕರ್ಯ ಸಮಸ್ಯೆಗಳ ಪರಿಶೀಲನೆ.

ಬಾಗೇಪಲ್ಲಿ ತಾಲೂಕಿನ ತಿಮಾಕಲಪಲ್ಲಿ ಕ್ರಾಸ್ ಬಲಿ ಇರುವ ಜಿ.ವಿ ಶ್ರೀರಾಮರೆಡ್ಡಿ ಬಡಾವಣೆಗೆ ನಿವಾಸಿಗಳು ಹಾಗೂ ಸಿ ಪಿ ಐ ಎಂ ಮುಖಂಡರು ಸೇರಿ 20 ದಿನಗಳ ಹಿಂದೆ ಜಿ.ವಿ ಶ್ರೀರಾಮರೆಡ್ಡಿ ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಇಲ್ಲದೆ ಕಾರಣ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಆದರಿಂದ ಇಂದು ತಾಲೂಕು ದಂಡಾಧಿಕಾರಿ ಮನಿಷಾ ಎಸ್ ಪತ್ರಿ, ಇ ಓ ರಮೇಶ್, ಪುರಸಭೆ ಮುಖ್ಯ ಅಧಿಕಾರಿ ಶ್ರೀನಿವಾಸ್, ರವರು ಈ ಬಡಾವಣೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ,ವಿದ್ಯುತ್,ಕುಡಿಯುವ ನೀರಿನ, ಈ ಎಲ್ಲಾ ಸೌಲಭ್ಯಗಳು ಹಾಗೂ ಸಮಸ್ಯೆಗಳು ಪರಿಶೀಲಿಸಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ಮನಿಷಾ ಎಸ್ ಪತ್ರಿರವರು ಮಾತನಾಡಿ ಮೂಲಭೂತ ಸೌಕರ್ಯಗಳು ಏನು ಇಲ್ಲ ಹಾಗೂ ಏನು ಸಮಸ್ಯೆ ಆಗಿದೆ ಕುಲಂಕುಶವಾಗಿ ಪರಿಶೀಲನೆ ಮಾಡಿ ನೋಡಿದ್ದೇವೆ. ಈ ಬಡಾವಣೆಯಲ್ಲಿ ಸುಮಾರು ದಿನಗಳಿಂದ ಕೆಲವೊಂದು ಸಮಸ್ಯೆಗಳು ಇವೆ ಇಲ್ಲಿರುವ ರಾಜಕಾಲುವೆ ಅಲ್ಪಸ್ವಲ್ಪವಾಗಿದೆ ಇನ್ನು ಪೂರ್ಣ ಆಗಬೇಕಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಚರಂಡಿ, ರಸ್ತೆಗಳು ಇಲ್ಲ ಇವೆಲ್ಲ ಸಮಸ್ಯೆಗಳಿವೆ ಹಾಗೂ ಪುರಸಭೆ ಹಾಗೂ ಪಂಚಾಯಿತಿ ಯಾರದು ಜವಾಬ್ದಾರಿ ಎಂದು ಸ್ವಲ್ಪ ತೊಂದರೆಯಾಗಿತ್ತು ಸುಮಾರು ವರ್ಷಗಳಿಂದ ಹೀಗೆ ಉಳಿದಿದೆ ಇದರ ಸಲಹೆಗಳನ್ನು ಶಾಸಕರು ಹಾಗೂ ಮೇಲಾಧಿಕಾರಿಗಳ ಜೊತೆ ಮಾತನಾಡಿದಾಗ ಸಮಸ್ಯೆ ಏನು ಅಂತ ಗೊತ್ತಾಯ್ತು. ಇದಕ್ಕೂ ಪರಿಹಾರವೂ ಸಹ ಸಿಕ್ಕಿದೆ.ಇನ್ನೂ ಪಂಚಾಯಿತಿಯಿಂದ ರೆಸೋಲ್ಯೂಷನ್ ಪಾಸ್ ಮಾಡಿ ಪುರಸಭೆಗೆ ಕೊಟ್ಟಿದ್ದಾರೆ ಪುರಸಭೆಯವರು ರೆಸೋಲ್ಯೂಷನ್ ಪಾಸ್ ಮಾಡಿ ಸರ್ಕಾರಕ್ಕೆ ಕಳುಹಿಸಿದ್ದಾರೆ. ಸುಮಾರು ದಿನಗಳಿಂದ ಆಗದೆ. ಈ ಕೆಲಸ ಪಂಚಾಯಿತಿ,ಪುರಸಭೆ ವತಿಯಿಂದ ಈಗಾಗಲೇ ಸರ್ಕಾರಕ್ಕೆ ಕಳುಹಿಸಿದ್ದಾರೆ. ಈಗ ಸರ್ಕಾರದಲ್ಲಿ ನಿರ್ಧಾರ ಮಾಡಲಾಗುತ್ತದೆ. ಈ ಬಡಾವಣೆ ಪುರಸಭೆಗೆ ಹಸ್ತಾಂತರವಾದರೆ ಮೂಲಭೂತ ಸೌಕರ್ಯಗಳಾದ ರಸ್ತೆ ಚರಂಡಿ, ನೀರಿನ ಸೌಲಭ್ಯಗಳನ್ನು ಹಂತ ಹಂತವಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿಗೆ ಜೆಡಿಯು ಪಕ್ಷದಿಂದ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಸಂದರ್ಭದಲ್ಲಿ ಇಓ ರಮೇಶ್, ಪುರಸಭೆ ಮುಖ್ಯ ಅಧಿಕಾರಿ ಶ್ರೀನಿವಾಸ್, ಜಿವಿಎಸ್ ಬಡಾವಣೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಯಪ್ಪ ಕೆ, ಸಿಪಿಐಎಂ ಪಕ್ಷದ ಮುಖಂಡರಾದ ಮುನಿಸ್ವಾಮಿ, ಅಶ್ವಥ್ ನಾರಾಯಣ, ಜಿ ಕೃಷ್ಣಪ್ಪ,ಇತರೆ ಅಧಿಕಾರಿಗಳು ಹಾಗೂ ಬಡಾವಣೆ ನಿವಾಸಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...