ನನ್ನ ಹೊಟ್ಟೆ ಉರಿಸಲು ಅಭಿವೃದ್ಧಿ ಕಾರ್ಯ ಮಾಡಲು ಸಚಿವ ಸುಧಾಕರ್ ಮುಂದಾಗಿರುವುದು ಒಳ್ಳೆಯ ಸಂಗತಿ:ಜೆಕೆ

Date:

ಸಚಿವ ಡಾ.ಎಂ.ಸಿ ಸುಧಾಕರ್ ಕ್ಷೇತ್ರದ ಅಭಿವೃದ್ಧಿ,ಜನತೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಒಳಿತಾಗಿ ಇಂಜಿನಿಯರಿಂಗ್ ಕಾಲೇಜು ಮಾಡಿದಂತಿಲ್ಲ,ಬದಲಾಗಿ ನನ್ನ ಹೊಟ್ಟೆ ಉರಿಯಾಗಲೆಂದು ಮಾಡಿದ್ದಾರೆಂದು ಹೇಳಿರುವುದು ಸಂತೋಷವಾಗಿದೆ.ನನ್ನ ಭಯದಿಂದಲಾದರೂ ಸಾವಿರಾರು ಕೋಟಿ ರೂ.ಅನುದಾನ ತಂದು ಅಭಿವೃದ್ಧಿಪಡಿಸುತ್ತಿರುವುದು ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.

ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಜೆಡಿಎಸ್‌ ಪಕ್ಷದಿಂದ ಹಮ್ಮಿಕೊಂಡಿದ್ದ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಉದ್ಘಾಟನೆ ಮಾಡಿ ಮಾತನಾಡಿ ಡಿಸೆಂಬರ್ ನಂತರ ಮುಂದಿನ ವರ್ಷದಲ್ಲಿ ಸಾಲು ಸಾಲು ಚುನಾವಣೆಗಳು ಬರಲಿದ್ದು ಕಾರ್ಯಕರ್ತರನ್ನು ಗ್ರಾಮ ಪಂಚಾಯಿತಿ,ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ,ಹಾಗೂ ನಗರಸಭೆ,ಎಪಿಎಂಸಿ,ಹಾಲು ಉತ್ಪಾದಕರ ಸಂಘ, ಸೊಸೈಟಿಗಳು ಸೇರಿದಂತೆ ಹಲವು ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದು ನಿಷ್ಟಾವಂತ ಕಾರ್ಯಕರ್ತರನ್ನು ಗೆಲ್ಲಿಸಿ ಅವರಿಗೂ ಅಧಿಕಾರವನ್ನು ಹಂಚಬೇಕಾಗಿದೆ ಇದರೊಂದಿಗೆ ಗೆದ್ದ ನಾವು ಅಲ್ಲಿಗೆ ನಿಲ್ಲಬಾರದು ಪಕ್ಷದ ಮುಂಬರುವ 50 ವರ್ಷಗಳ ನಿರಂತರ ಗೆಲುವು ಸಾಧಿಸುವಂತಹ ಕಾರ್ಯವನ್ನು ಮಾಡಬೇಕೆಂದರು.

ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷಗಳು ಕಳೆಯುತ್ತಿರುವ ಹಿನ್ನಲೆಯಲ್ಲಿ,ನವೆಂಬರ್ 29 ರಂದು ಚೆಂತಾಮಣಿ ನಗರದಲ್ಲಿ ಬೃಹತ್ ಜೆಡಿಎಸ್ ಕಾರ್ಯಕರ್ತರ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು,ಆ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಾಮಣಿಯಲ್ಲಿ ಜೆಕೆ ಕೃಷ್ಣಾರೆಡ್ಡಿ ಇರುವುದರಿಂದ ಸಾವಿರಾರು ಕೋಟಿ ಹಣ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಇಲ್ಲವೆಂದರೆ ಸಚಿವರು ಬೆಂಗಳೂರಿನಲ್ಲಿ ನಿದ್ದೆಗೆ ಜಾರುತ್ತಿದ್ದರೆಂದರು.

ಸಚಿವರು ಮತ್ತಷ್ಟು ಹಣವನ್ನು ತಂದು ಅಭಿವೃದ್ಧಿ ಕೆಲಸವನ್ನು ಮಾಡಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಮಾಡಲೆಂದರು.ಮಸ್ತೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಒಂದು ಮರಕ್ಕೆ 24 ಸಾವಿರ ಪರಿಹಾರವನ್ನು ಒದಗಿಸುತ್ತಿದ್ದು ಆದರೆ ಈಗ ಅದು 10 ಸಾವಿರ ರೂಪಾಯಿಗಳಿಗೂ ಕಡಿಮೆ ಪರಿಹಾರವನ್ನು ನೀಡಿ ರೈತರಿಗೆ ಅನ್ಯಾಯ ಮಾಡುತ್ತಿರುವುದು ನಾನಲ್ಲ ನೀವೆಂದು ಸಚಿವರ ವಿರುದ್ಧ ಕಿಡಿಕಾಡಿದರು.

ಸಚಿವ ಡಾ.ಎಂ.ಸಿ ಸುಧಾಕರ್ ರವರು ನನ್ನ ಹೊಟ್ಟೆ ಉರಿಸಲೆಂದು ಇಂಜನೀಯರಿಂಗ್ ಕಾಲೇಜು ತಂದಿದ್ದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದಾಗಿ ತಿಳಿಸಿದ್ದು, ಸಚಿವರಿಗೆ ಕ್ಷೇತ್ರದ ಅಭಿವೃದ್ಧಿ,ಜನತೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಒಳಿತಾಗಿ ಇಂಜನೀಯರಿಂಗ್ ಕಾಲೇಜು ತಂದಿಲ್ಲ.ಬದಲಾಗಿ ಚಿಂತಾಮಣಿಯಲ್ಲಿ ಜೆಕೆ ಕೃಷ್ಣಾರೆಡ್ಡಿರವರು ಇದ್ದಾರೆ ಎಂಬ ಭಯದಿಂದ ಇಂಜನೀಯರಿಂಗ್ ಕಾಲೇಜು ಹಾಗೂ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಗರಸಭಾ ಸದಸ್ಯ ಆಗ್ರಹಾರ ಮುರಳಿ ಮಾತನಾಡಿ ಕಾರ್ಯತಂತ್ರವನ್ನು ರೂಪಿಸುವುದೇ ಬೇರೆ ಕಾರ್ಯಕರ್ತರ ಪಡೆಯನ್ನು ಹೊಂದಿರುವುದೇ ಬೇರೆಯಾಗಿದ್ದು ಕಳೆದ 20 ವರ್ಷಗಳಿಂದ ಚುನಾವಣಾ ಚಾಣುಕ್ಯನಂತಾಗಿದ್ದ ಪ್ರಶಾಂತ್
ಭೂಷನ್ ಬಿಹಾರದ ಚುನಾವಣೆಯಲ್ಲಿ ತಮ್ಮ ಸ್ವಂತ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಿಲ್ಲವೆಂದರು.ಮುಂಬರುವ ಚುನಾವಣೆಗಳಿಗೂ ಮೊದಲು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಸಿದ್ಧವಾಗಿದ್ದು,ಸತ್ತವರು.ಊರು ಬಿಟ್ಟಿರುವ ಮತ್ತು ಎರಡು ಕಡೆ ವೋಟ್ ಇರುವವರನ್ನು ಡಿಲಿಟ್ ಮಾಡುತ್ತಿದ್ದು ಅಂತಹ ಸಂದರ್ಭದಲ್ಲಿ ಕಾರ್ಯಕರ್ತರು ಇವೆಲ್ಲವನ್ನು ಗಮನಿಸಬೇಕು ಎಂದರು.

ಇದನ್ನು ಓದಿದ್ದೀರಾ..? ಮೈದಾನ ಸಿದ್ಧಪಡಿಸಿ ಕೊಡುವ ಭರವಸೆ ನೀಡಿದ ಡಿಸಿಪಿ ಡಿ.ದೇವರಾಜ್‌

ಚಿಕ್ಕಬಳ್ಳಾಪುರ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ,ಗೌರಿಬಿದನೂರು ನರಸಿಂಹಮೂರ್ತಿ,ಸೀಕಲ್ ಶ್ರೀನಿವಾಸಗೌಡ ಮಾತನಾಡಿದರು.ರಾಜ್ಯ ಯುವ ಘಟಕದ ಉಪಾಧ್ಯಕ್ಷ ಸಂತೇಕಲ್ಲಹಳ್ಳಿ ಪ್ರಭಾಕರ್,ಚಿಂತಾಮಣಿ ತಾಲೂಕು ಜೆಡಿಎಸ್ ಅಧ್ಯಕ್ಷ ದಿನ್ನಮಿಂದಹಳ್ಳಿ ಬೈರಾರೆಡ್ಡಿ, ಅಬ್ದುಗುಂಡು ಶ್ರೀನಿವಾಸರೆಡ್ಡಿ,ದೊಡ್ಡಬೊಮ್ಮನಹಳ್ಳಿ ವೆಂಕಟರೆಡ್ಡಿ,ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗುಡೇ ಶ್ರೀನಿವಾಸರೆಡ್ಡಿ,ದೇವಳಂ ಶಂಕರ್,ಟಮೋಟ್ ಗೌಸ್, ಅಲ್ಲಾಬಕಾಷ್,ಮಂಜುನಾಥ್,ವೆಂಕಟರವಣಪ್ಪ,ಶ್ರೀನಿವಾಸರೆಡ್ಡಿ, ಪ್ರಕಾಶ್.ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಮಾದಮಂಗಲ ಅಂಜಿ,ಅಬ್ದುಲ್ ಸಮದ್,ಅಲ್ಲಾಬಕಾಶ್,ಜಮೀಲ್ ಪಾಷಾ,ಶಫಿ,ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...