ನ. 26 ರಂದು ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾಲೂರಿನಲ್ಲಿ ಸಂವಿಧಾನ ರಥಸಂಚಲನ

Date:

ಮಾಲೂರು ತಾಲ್ಲೂಕು ಸಂವಿಧಾನ ರಥಸಂಚಲನ ಸಮಿತಿಯ ವತಿಯಿಂದ ನವೆಂಬರ್ 26 ರಂದು ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾಲೂರಿನಲ್ಲಿ ಸಂವಿಧಾನ ರಥಸಂಚಲನ ಮತ್ತು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಸ್ತುವಾರಿ ಸಮಿತಿಯ ಸದಸ್ಯರಾದ ಎಂ.ಶೇಷಪ್ಪ ಹಾಗೂ ಬಿ.ವಿ.ಸಂಪಂಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂವಿಧಾನದ ರಥಸಂಚಲನಾ ಜಾಥಾ ಕಾರ್ಯಕ್ರಮಕ್ಕೆ ಹೋಂಡಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಉರಿಲಿಂಗಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಮಹಿಳಾ ಹೋರಾಟಗಾರ್ತಿ,ಚಿಂತಕಿ, ಕಲ್ಬುರ್ಗಿಯ ಕೆ.ನೀಲಾ ಚಾಲನೆ ನೀಡಲಿದ್ದು,ಮೆರವಣಿಗೆಯು ಮಾಲೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಗೆ ಸರ್ಕಾರಿ ಬಾಲಕೀಯರ ಆಟದ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿದ್ದೀರಾ..? ವಿಶೇಷ ಚೇತನ ಮಕ್ಕಳನ್ನು ಗುರುತಿಸಿ ಅವರಿಗೆ ಅವಕಾಶ ಕೊಡಿ

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ದಲಿತ ಸಂಘಟನೆಗಳು,ಬುದ್ಧವಿಹಾರ,ಬಹುಜನ ಚಳುವಳಿ,ಕಾರ್ಮಿಕ ಸಂಘಟನೆಗಳು,ಮಹಿಳಾ ಸಂಘಟನೆಗಳು, ಮುಸಲ್ಮಾನ ಬಂಧುಗಳು,ಕ್ರೈಸ್ತ ಸಮುಧಾಯ,ಹಿಂದುಳಿದ ವರ್ಗಗಳು,ರೈತಪರ,ಕನ್ನಡಪರ, ಪ್ರಗತಿಪರ,ಪ್ರಜಾಪ್ರಭುತ್ವಪರ,ಜಾತ್ಯಾತೀತಪರ,ಒಟ್ಟಾರೆಯಾಗಿ ಸಂವಿಧಾನಪರ ಇರುವ ಸಮಾನಮನಸ್ಕರ ಸಂವಿಧಾನ ರಥಸಂಚಲನಾ ಸಮಿತಿಯು ಈ ಕಾರ್ಯಕ್ರಮವನ್ನು ಆಯೋಜಿಸಿದೆ.ತಾಲ್ಲೂಕಿನ ಬಹುತೇಕ ಹಳ್ಳಿಗಳಿಗೆ ಉಸ್ತುವಾರಿ ಸಮಿತಿಯ ಸದಸ್ಯರು ಈಗಾಗಲೆ ಬೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿದ್ದು,ಸುಮಾರು ಹತ್ತು ಸಾವಿರಕ್ಕೂ ಮೀರಿ ಜನ ಸೇರುವ ನಿರೀಕ್ಷೆ ಇದೆ. ತಾಲ್ಲೂಕಿನ ಪ್ರಜ್ಞಾವಂತ ನಾಗರೀಕರೆಲ್ಲರೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...