ಬಾಗೆಪಲ್ಲಿ | ಮರೀಚಿಕೆಯಾದ ಮಾರುಕಟ್ಟೆ ಸ್ವಚ್ಛತೆ, ಮೂಲಭೂತ ಸೌಲಭ್ಯಗಳಿಗಾಗಿ ಪರದಾಟ

Date:

ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.

ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ ಜತೆಗೆ ಮಳೆ ಬಂದರೆ ಇಡೀ ಪ್ರಾಂಗಣವೇ ಕೆಸರುಗದ್ದೆಯಾಗಿ ಪರಿಣಮಿಸುತ್ತದೆ. ಹಾಗಾಗಿ ಮಾರುಕಟ್ಟೆಗೆ ಬರುವ ರೈತರು ವಿವಿಧ ರೋಗಗಳಿಗೆ ತುತ್ತಾಗುವ ಆತಂಕ ಎದುರಿಸುತ್ತಿದ್ದಾರೆ.

ಬಯಲು ಶೌಚಕ್ಕಿಲ್ಲ ಕಡಿವಾಣ, ಕುಡಿಯುವ ನೀರಿನ ಸಮಸ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕದಿಂದ ದೂರದೂರುಗಳಿಂದ ಮಾರುಕಟ್ಟೆಗೆ ಬಂದವರಿಗೆ ಕುಡಿಯುವ ನೀರು ಲಭ್ಯವಿಲ್ಲ.‌ ಜೊತೆಗೆ ಮೂತ್ರ ವಿಸರ್ಜನೆಗೂ ಬಯಲು ಶೌಚವನ್ನೆ ಅವಲಂಬಿಸುವ ದುಸ್ಥಿತಿ ಎದುರಾಗಿದೆ. ಹೀಗೆ ರೈತರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ಹತ್ತು ಹಲವಾರು ಸಮಸ್ಯೆಗಳು ಪ್ರತಿ ನಿತ್ಯ ಸರ್ವೆ ಸಾಮಾನ್ಯವಾಗಿದೆ.

ಕೂಲಿ ಕಾರ್ಮಿಕರು, ಮಂಡಿ ಮಾಲೀಕರು ಹಾನಿಯಾದ ಹಾಗೂ ಕೊಳೆತ ಟೊಮೆಟೊ, ಹಾಗೂ ತರಕಾರಿಗಳನ್ನು ಕಸದ ಬುಟ್ಟಿಗೆ ಹಾಕದೇ, ರಸ್ತೆಯಲ್ಲಿ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಪ್ರಾಂಗಣದಲ್ಲಿ ಸ್ವಚ್ಛತೆಗೆ ಲಕ್ಷಾಂತರ ಹಣ ನೀಡಲಾಗುತ್ತಿದೆ. ಆದರೆ ಸ್ವಚ್ಛತೆ ಮರೀಚಿಕೆ ಆಗಿದೆ. ಇದರಿಂದ ರಸ್ತೆಯೆಲ್ಲಾ ಕೊಳೆತ ಟೊಮೆಟೊ, ತರಕಾರಿಗಳು ರಾಶಿಗಟ್ಟಲೇ ಇದ್ದು ಕೊಳೆತ ದುರ್ನಾತ ಬೀರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಸಾಂಕ್ರಾಮಿಕ ರೋಗ ಭೀತಿ

ಮಾರುಕಟ್ಟೆಗೆ ಬರುವ ರೈತರು ಮತ್ತು ವರ್ತಕರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಹಾಗೂ ತ್ಯಾಜ್ಯದ ರಾಶಿಗಳಿಂದಾಗಿ ಸೊಳ್ಳೆಗಳ ಉಗಸ್ಥಾನಗಳಂತಾಗಿ ಸಾಂಕ್ರಾಮಿಕ ರೋಗಗಳ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ.ಏಕೆಂದರೆ
ಕಾಲಕಾಲಕ್ಕೆ ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದೆ.

ರೈತ ಮುಖಂಡರ ಆಕ್ರೋಶ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಎಚ್.ಎನ್ ಗೋವಿಂದರೆಡ್ಡಿ ಮಾತನಾಡಿ, ನಿತ್ಯವೂ ಸಾವಿರಾರು ರೈತರು, ವರ್ತಕರು ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುತ್ತಿರುತ್ತಾರೆ. ಅವರಿಗೆ ಕುಡಿಯಲೂ ನೀರಿಲ್ಲದಂತಹ ದುಸ್ಥಿತಿ ಎದುರಾಗಿದೆ. ಮಾರುಕಟ್ಟೆಗೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಹರಾಜು ಪ್ರಕ್ರಿಯೆ ಬಗ್ಗೆ ಗಮನ ನೀಡಬೇಕು. ಕೂಡಲೇ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರು, ಶೌಚಾಲಯಗಳನ್ನು ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ರೈತರು ವಿಶ್ರಮಿಸಲು ರೈತರ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸಬೇಕು.‌ ದಲ್ಲಾಳಿಗಳಿಗೆ ಕಡಿವಾಣ ಹಾಕಬೇಕಿದೆ. ಹಾಗೆಯೆ ಮಾರುಕಟ್ಟೆಯ ನಿರ್ವಹಣೆ ತೀರಾ ಹದಗೆಟ್ಟಿದ್ದು, ಕೂಡಲೇ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ನಮ್ಮ ರೈತ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುವುದು ಎಂದು ಎಚ್ಚರಿಸಿದರು.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...