ಬಾಗೇಪಲ್ಲಿ ತಾಲ್ಲೂಕಿನಲ್ಲಿ ‌ ಮೂರು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಅನುಮತಿ

Date:

ಬಾಗೇಪಲ್ಲಿ :-ತಾಲ್ಲೂಕಿನಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ಪಾತಪಾಳ್ಯ ಹಾಗೂ ಚಾಕವೇಲು ಶಾಲೆಗಳು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಮನವಿ ಮಾಡಿರುವ ಕಾರಣ ಮೂರು ಶಾಲೆಗಳಿಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ.

ಸರ್ಕಾರದಿಂದ ಮೂರು ಶಾಲೆಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಪದವಿಪೂರ್ವ ಕಾಲೇಜು
ಪ್ರಾಂಶುಪಾಲರಾದ ನಂಜಿರೆಡ್ಡಿ,ಉಪ ಪ್ರಾಂಶುಪಾಲರಾದ ವೆಂಕಟೇಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್ ಅವರು ಪಟ್ಟಣದ ಶಾಸಕ ಗೃಹ ಕಛೇರಿಯಲ್ಲಿ ಶಾಸಕರಿಗೆ ಸನ್ಮಾನಿಸಿದರು

ತದನಂತರ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳು
ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯ್ಕೆಗೆ ಸಂತಸ ತಂದಿದೆ. ಈ ಶಾಲೆಗಳ ಮುಖ್ಯ ಉದ್ದೇಶ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸುವುದು. ಹಣಕಾಸಿನ ನೆರವು ಪ್ರತಿ ಶಾಲಗೆ ಅಂದಾಜು ₹ 4 ಕೋಟಿ ವೆಚ್ಚ ಮಾಡಲಾಗುವುದು.

ಮೂಲಸೌಕರ್ಯ ಶಾಲಾ ಕಟ್ಟಡ, ಪ್ರಯೋಗಾಲಯಗಳು, ಗ್ರಂಥಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲಾಗುವುದು. ಶೈಕ್ಷಣಿಕ ಹಂತ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿ ತನಕ ಒಂದೇ ಶಾಲೆಯಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.

ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳಿಗೆ ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಸರಕಾರಿ ಶಾಲೆಗಳಲ್ಲಿದಾಖಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರಕಾರ ಮೈಸೂರು ಜಿಲ್ಲೆಯಲ್ಲಿಹೊಸದಾಗಿ 3 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್ ) ತೆರೆಯಲು ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಕಾರಿ ಶಾಲೆಗಳ ಕಡೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವ ಜತೆಗೆ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿಸಿಗುವ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲಿಯೂ ನೀಡಬೇಕೆಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ.

ಇಲ್ಲಿಎಲ್ ಕೆಜಿಯಿಂದ 12ನೇ ತರಗತಿವರೆಗೂ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿಮಕ್ಕಳು ವ್ಯಾಸಂಗ ಮಾಡಬಹುದು. ಕೆಪಿಎಸ್ ಶಾಲೆಯಲ್ಲಿಮಕ್ಕಳ ಬೋಧನೆಗೆ ಸುಸಜ್ಜಿತ ಕೊಠಡಿಗಳು, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್ , ಉತ್ತಮ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ವಿಶಾಲ ಆಟದ ಮೈದಾನ, ಶೌಚಗೃಹ ಒದಗಿಸಲಾಗಿರುತ್ತದೆ.

ಇದನ್ನು ಓದಿದ್ದೀರಾ..? ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

‘‘ಪ್ರತಿ ಕೆಪಿಎಸ್ ಶಾಲೆಯಲ್ಲಿ 30 ಮಕ್ಕಳು ಪ್ರವೇಶಾತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಅರ್ಜಿಗಳು ಬಂದರೆ ಲಾಟರಿ ಮೂಲಕ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸಾರ್ವಜನಿಕರು ಪೋಷಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...