ಮತ ಕಳ್ಳತನ ಬಿಜೆಪಿ ಆಯೋಗ ಶಾಮೀಲು: ಶಾಸಕ ಕೊತ್ತೂರು ಮಂಜುನಾಥ್ ಆರೋಪ

Date:

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ 80 ರೂಪಾಯಿ ಕೊಟ್ಟು 6000 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಇದನ್ನು ಓದಿದ್ದೀರಾ..? ಕಾರ್ಮಿಕರು ಜೀತದಾಳುಗಳಾಗಿದ್ದಾರೆ ದುಡಿಯುವ ವರ್ಗ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕಾಗಿದೆ: ಮೀನಾಕ್ಷಿ ಸುಂದರಂ

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್,ಕೂಡಾ ಅಧ್ಯಕ್ಷ ಹನೀಫ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...