ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ: ಕೇಂದ್ರ ಸರ್ಕಾರದ ಕ್ರಮಕ್ಕೆ ಸಿಪಿಐಎಂ ಖಂಡನೆ

Date:

ಬಾಗೇಪಲ್ಲಿ:-ಮನರೇಗಾ ಯೋಜನೆ ಹೆಸರನ್ನು ‘ವಿಬಿ ಜೀ ರಾಮ್ ಜೀ’ ಎಂದು ಬದಲಾವಣೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂ ಪಕ್ಷದ ವತಿಯಿಂದ ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಜಿ.ವಿ.ಶ್ರೀರಾಮ ರೆಡ್ಡಿ ಪುತಳಿ ಮುಂದೆ ಮಸೂದೆ ಪತ್ರಗಳನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಿದರು.
ಸಿಪಿಐಎಂ ಪಕ್ಷದ ಮುಖಂಡರು ಜಿ.ವಿ.ಶ್ರೀರಾಮ ರೆಡ್ಡಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಒಂದೆಡೆ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಂ. ಪಿ.ಮುನಿವೆಂಕಟಪ್ಪ ಮಾತನಾಡಿ’ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡುವ ಮೂಲಕ ರಾಜಕೀಯ ಮಾಡುತ್ತಿರುವುದು ಖಂಡನೀಯವಾಗಿದೆ.

ನರೇಗಾ ದುರ್ಬಲಗೊಳಿಸುವ ಮೂಲಕ ಮೋದಿ ಸರ್ಕಾರ ದೇಶಾದ್ಯಂತ ಕೋಟ್ಯಂತರ ರೈತರು, ಕಾರ್ಮಿಕರು ಮತ್ತು ಭೂಹೀನರ ಹಿತಾಸಕ್ತಿಗಳ ಮೇಲೆ ದಾಳಿ ಮಾಡಿದೆ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಹಾಗೂ ಬಡವರಿಗೆ ಅನುಕೂಲವಾಗಿದ್ದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಹೆಸರು ಬದಲಾವಣೆ ಮಾಡಲು ಪ್ರಯತ್ನ ನಡೆಸಿದೆ. ಹೆಸರು ಬದಲಾವಣೆಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಹೇಳಿದರು

ನರೇಗಾ ಯೋಜನೆಯು ಗ್ರಾಮೀಣ ಜನರಿಗೆ ಆರ್ಥಿಕ ಶಕ್ತಿಯನ್ನು ನೀಡಿತ್ತು. ಶೋಷಣೆ, ಸಂಕಷ್ಟ ಮತ್ತು ವಲಸೆಯನ್ನು ಕಡಿಮೆಗೊಳಿಸಿತ್ತು. ಮೂಲಸೌಕರ್ಯ ವೃದ್ಧಿಗೂ ನೆರವಾಗಿತ್ತು. ಇದೀಗ ಕೇಂದ್ರ ಸರ್ಕಾರ ಇದನ್ನೆಲ್ಲ ಮುರಿಯಲು ಮುಂದಾಗಿದೆ’ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ, ಬಡವರ ವಿರೋಧಿ

ಕೆಲಸಕ್ಕೆ ಮಿತಿ ಹೇರುವ ಮತ್ತು ಕೆಲಸವನ್ನು ನಿರಾಕರಿಸಲು ಹಲವು ಮಾರ್ಗಗಳನ್ನು ಸೃಷ್ಟಿಸುವ ಮೂಲಕ ‘ವಿಬಿ-ಜಿ ರಾಮ್‌ ಜಿ’ ಮಸೂದೆಯು ಗ್ರಾಮೀಣ ಬಡವರನ್ನು ದುರ್ಬಲಗೊಳಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಘುರಾಮ ರೆಡ್ಡಿ ಮಾತನಾಡಿ 2005ರಲ್ಲಿ ಜಾರಿಗೆ ಬಂದಿದ್ದ ಈ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಮುಖ್ಯವಾಗಿ ಬಡವರು ಮತ್ತು ಸಣ್ಣ ರೈತರಿಗೆ ಉದ್ಯೋಗ, ಉಪ ಜೀವನಕ್ಕೆ ಅನುಕೂಲವಾಗಿತ್ತು. ಬರಗಾಲದಂತಹ ಸಂದರ್ಭದಲ್ಲಿ ಮಧ್ಯಮ ವರ್ಗದ ರೈತರು ಕೂಡ ಯೋಜನೆ ಫಲಾನುಭವಿಗಳಾಗಿ ಅನುಕೂಲ ಪಡೆಯುತ್ತಿದ್ದರು. ಇನ್ನು ಮುಂದೆ ಕೇಂದ್ರ ಸರ್ಕಾರದ ಮುಲಾಜಿಗೊಳಪಡುವ ರಾಜ್ಯಗಳಿಗೆ ಮಾತ್ರ ಯೋಜನೆ ದೊರೆಯುತ್ತದೆ’ ಎಂದರು.

ಕೇಂದ್ರದ ಹೊಸ ಕಾನೂನು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಂಪೂರ್ಣವಾಗಿ ಹಾಳುಗಡೆವಲಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹೆಸರನ್ನು ತೆಗೆದು ಹಾಕುವ ಮೂಲಕ, ಅವರ ಆಶಯಗಳನ್ನು ನಿರ್ಣಾಮ ಮಾಡುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಮಹಿಳಾ ಕಾಲೇಜು, ಕೋಲಾರಮ್ಮ ದೇಗುಲದ ಜಾಗಕ್ಕೆ ಖಾತೆ: ಕೊತ್ತೂರು ಮಂಜುನಾಥ್‌

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಚನ್ನರಾಯಪ್ಪ,ದೇವಿಕುಂಟೆ ಶ್ರೀನಿವಾಸ್, ಜಿ.ಕೃಷ್ಣಪ್ಪ,ವಾಲ್ಮೀಕಿ ಅಶ್ವತ್ಥಪ್ಪ,ಬಿಳ್ಳೂರು ನಾಗರಾಜು, ಡಿ.ಟಿ.ಮುನಿಸ್ವಾಮಿ ಮುನಿಯಪ್ಪ,ಸೋಮಶೇಖರ ಹಾಗೂ ಇತರೆ ಮುಖಂಡರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...