ಬಾಗೇಪಲ್ಲಿ:ವಿಶ್ವದಾದ್ಯಂತ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ,ದೌರ್ಜನ್ಯ,ಕಿರುಕುಳ,ಮಾನಸಿಕ ಹಿಂಸೆ, ಕೌಟುಂಬಿಕ ಕಲಹ ತಡೆಯಬೇಕು ಎಂದು ದೇವಿ ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿದರು. ಪಟ್ಟಣದ ತಹಶಿಲ್ದಾರ್ ಮನೀಷಾ ಎನ್ ಪತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾರೆಯಾಗಿ ಜನಸಾಮಾನ್ಯರ ಬದುಕಿಗೆ ಕೊಳ್ಳಿಯಿಟ್ಟು ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡುವ ಮೂಲಕ ಡಿಸೆಂಬರ್ 10 ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯ ಮೂಲಕ ಮಹಿಳೆ ಮತ್ತು ಮಕ್ಕಳ ಮೇಲಾಗುವ ಹಿಂಸೆ ನಿರ್ಮೂಲನೆಗೆ ಒತ್ತಾಯಿಸಿ ಕೆಳಕಂಡ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಗಾಂಧಿನಗರ, ಗದ್ದೆಕಣ್ಣೂರು ರಸ್ತೆ ಒತ್ತುವರಿ ಕ್ರಮಕ್ಕೆ ಸ್ಥಳೀಯರ ಒತ್ತಾಯ
ಈ ಸಂದರ್ಭದಲ್ಲಿ ಜ್ಯೋತಿ,ಅನಿತಾ,ಪಾರ್ವತಮ್ಮ, ಜನವಾದಿ ಮಹಿಳಾ ಸಂಘಟನೆ ತಾಲ್ಲೂಕು ಮುಖಂಡರು, ಬಿ.ಎಚ್. ರಫೀಕ್ , ಡಿ ಅಶ್ವಥ್ ನಾರಾಯಣ ಹಾಜರಿದ್ದರು




