ಮೀನು ಹಿಡಿಯಲು ಹೋದ ಮಹಿಳೆ ವಿದ್ಯುತ್ ತಂತಿಗಳಿಗೆ ಬಲಿ

Date:

ಬಾಗೇಪಲ್ಲಿ: ಮೀನು ಹಿಡಿದು ಜೀವನ ಮಾಡುತ್ತಿದ್ದ ಬಡ ಕುಟುಂಬದ ಮಹಿಳೆ ವಿದ್ಯುತ್ ತಂತಿಗಳು ಸೋಕಿ ಕೆರೆಯಲ್ಲೇ ಮೃತಪಟ್ಟಿರುವ ಘಟನೆ ಚೇಳೂರು ತಾ. ದಿಗವನೆಟ್ಟಕುಂಟಪಲ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಾಪಲ ಮಾಬುಸಾಬ್ ಕುಟುಂಬದವರು ಸುಮಾರು ವರ್ಷಗಳಿಂದ ಸುತ್ತಮುತ್ತಲಿನ ಕೆರೆ ಕುಂಟೆಗಳಲ್ಲಿ ಮೀನುಗಳು ಹಿಡಿದು ಮಾರಾಟ ಮಾಡಿ ಬಡ ಕುಟುಂಬವನ್ನು ಪೋಷಣೆ ಮಾಡಿಕೊಂಡು ಬದುಕು ನಡೆಸಿದ್ದರು.
ಗ್ರಾಮದ ಊರುಮುಂದಿನ ಕೆರೆಯಲ್ಲಿ ಹಗಲಿನಲ್ಲಿ ಮೀನುಗಳಿಗೆ ಬಲೆಗಳು ಹಾಕಿ ರಾತ್ರಿ 08-30 ರ ಸಮಯದಲ್ಲಿ ಬಲೆಗಳಿಗೆ ಬಿದ್ದ ಮೀನುಗಳನ್ನು ಮನೆಗೆ ತಂದು ಬೆಳಿಗ್ಗೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.

ಗುರುವಾರ ರಾತ್ರಿ ಸಹಾ ಎಂದಿನಂತೆ ಕೆರೆಯಲ್ಲಿ ಬೋಟ್ ಇಳಿಸಿ ಮೀನುಗಳ ಬಲೆಗೆ ಹೋಗುತ್ತಿರುವಾಗ 11 ಕೆ.ವಿ. ತಂತಿಗಳು ಇರುವ ಪಕ್ಕದಲ್ಲಿ ಬೋಟ್‌ನಲ್ಲಿ ಕುಳಿತಿದ್ದ ಚಾಪಲ ಮಾಬುಸಾಬ್‌ಗೆ ಬುಜದ ಹಿಂದೆ ವಿದ್ಯುತ್ ತಂತಿ ಸೋಕಿ ಗಾಯವಾದರೆ ಅದೇ ತಂತಿ ಹಿಂದೆ ಕುಳಿತ್ತಿದ್ದ ಹೆಂಡತಿ ಆಶಾಬೀ (54) ಗೆ ವಿದ್ಯುತ್ ತಂತಿ ಸೋಕಿ ಕೆರೆಯಲ್ಲೇ ಬಿದ್ದು ಮೃತಪಟ್ಟಿರುತ್ತಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆಯಿಂದ ಪ್ರಾಣ ಪಾಯದಿಂದ ಗಾಯಗಳಿಂದ ಪಾರಾದ ಈ ವ್ಯಕ್ತಿ ಈ ವಿಚಾರವನ್ನು ಗ್ರಾಮದ ಜನರಿಗೆ ಹೇಳಿದಾಗ ಜನತೆ ಬಾಗೇಪಲ್ಲಿ ಅಗ್ನಿ ಶಾಮಕ ದಳದವರಿಂದ ಕೆರೆಯಲ್ಲಿ ಮೃತಿಸಿದ ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ಬಾಗೇಪಲ್ಲಿ ಸರಕಾರಿಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿಲಾಯಿತು ಈ ಕೆರೆ ಗ್ರಾ.ಪಂ.ಗೆ ಸೇರಿದ್ದು ಹರಾಜುನಲ್ಲಿ ಮುಜಾಹೀದ್ ಎಂಬುವರು ತೆಗೆದುಕೊಂಡಿದ್ದು ಅವರಿಂದ ಮಾಬುಸಾಬ್ ವರ್ಷಕ್ಕೆ 80 ಸಾವಿರ ನೀಡಿ ಮೀನುಗಳು ಹಿಡಿಯುತ್ತಿದ್ದನು.

ಬಡಕುಟುಂಬದ ಆಕ್ರಂದನ; ಗ್ರಾಮದ ಆಶಾಬೀ ರವರು ಬಡಕುಟುಂಬದವಳಾಗಿದ್ದು ಮಕ್ಕಳು ಮೊಮ್ಮಕ್ಕಳು ಮೃತ ದೇಹದ ಮೇಲೆ ರೋಧಿಸುತ್ತಿದ್ದರು.

ಇದನ್ನು ಓದಿದ್ದೀರಾ…? ಕೋಲಾರ |ಆದಿಮ ನಾಟಕೋತ್ಸವ ಸಂಭ್ರಮ

ಒತ್ತಾಯ; ಗ್ರಾಮದಲ್ಲಿ ಮೀನುಗಳು ಮಾರಾಟ ಮಾಡಿ ಜೀವನ ಮಾಡುವ ಇವರ ಕುಟುಂಬಕ್ಕೆ ಸರಕಾರದಿಂದ ಗ್ರಾ.ಪಂ.ಯಿಂದ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ಕೃಷಿ ಕೂಲಿ ಕಾರ್ಮಿಕರ ಪ್ರಾಂತ್ಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಜಹೀರ್‌ಬೇಗ್ ರವರು ಮನವಿ ಮಾಡಿ ಒತ್ತಾಯಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...