ರಾಯಚೂರು | ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ

Date:

  • ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ
  • ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ

ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ರಾಜ್ಯಾದ್ಯಂತ ಎರಡು ದಿನ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಕೂಸ್ ರಾಜ್ಯ ಮುಖಂಡ ಗುರುರಾಜ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ದಿವಸದ ಅಂಗವಾಗಿ ರೈತರ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ , ಪೌಷ್ಟಿಕಾಂಶದ ಕೊರತೆ ನೀಗಿಸುವುದಕ್ಕಾಗಿ ಅನುಕೂಲಕರ ದರದಲ್ಲಿ ಪಡಿತರದಲ್ಲಿ ಆಯಾಯ ಪ್ರದೇಶಕ್ಕೆ ಅನುಗುಣವಾಗಿ ಅಕ್ಕಿಯೊಂದಿಗೆ ರಾಗಿ ಅಥವಾ ಜೋಳ ಮತ್ತು 1 ಕೆ.ಜಿ. ತೊಗರಿಬೇಳೆ, 1 ಕೆ.ಜಿ. ಎಣ್ಣೆ ಅನುಕೂಲಕರ ದರದಲ್ಲಿ ಕೊಡಬೇಕೆಂದು ಒತ್ತಾಯಿಸಿ ಆಗಸ್ಟ್ 14 ಮತ್ತು 15 ರಂದು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಮಾಹಿತಿ ನೀಡಿದ್ದರು.

“ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆ ದೊರೆತರೆ ಕಾರ್ಮಿಕರಿಗೆ ಪೌಷ್ಟಿಕ ಆಹಾರ ಸಿಗುತ್ತದೆ. ಉದ್ಯೋಗ ಖಾತ್ರಿಯಲ್ಲಿ 90 ದಿವಸಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ‌ಸಾಮಾಜಿಕ ಭದ್ರತೆಗಾಗಿ BOCW ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕೆಂದು ಒತ್ತಾಯಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ

“ಅಪೌಷ್ಟಿಕತೆ ನೀಗಿಸುವ ಆಹಾರ ಭದ್ರತೆ ಮತ್ತು ಆರೋಗ್ಯ ಶಿಕ್ಷಣವು ಸಾಮಾಜಿಕ ಭದ್ರತೆ ನೀಡುವ ಯೋಜನೆಗಳಾಗಿದ್ದು, ರೈತರ ಮತ್ತು ಕಾರ್ಮಿಕ‌ರಿಗೆ ಏಕಕಾಲಕ್ಕೆ ಪ್ರಯೋಜನೆ ಆಗಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...