ರಿಂಗ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಚರ್ಚೆ-25 ವರ್ಷದ ದೃಷ್ಟಿಕೋನ‌ ಇಟ್ಟುಕೊಂಡು ನಿರ್ಮಿಸಿ: ಕೊತ್ತೂರು ಮಂಜುನಾಥ್

Date:

ಕೋಲಾರ: ನಗರದ‌ ಹೊರವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣ ಸಂಬಂಧ‌ ರೂಪುರೇಷೆ‌ ಕುರಿತು ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಗುರುವಾರ ಚರ್ಚೆ‌ ನಡೆಯಿತು. ನಗರದ ಲೋಕೋಪಯೋಗಿ ‌ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ರಿಂಗ್ ರೋಡ್ ವ್ಯಾಪ್ತಿ, ‌ಭೂಸ್ವಾಧೀನ,‌ ಅಡೆತಡೆಗಳ ಬಗ್ಗೆ ‌ಮಾಹಿತಿ‌ ನೀಡಿದರು. ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ₹ 2.8 ‌ಕೋಟಿ ವೆಚ್ಚದಲ್ಲಿ ಟೆಂಡರ್‌ ಕರೆಯಲು ಸಿದ್ಧತೆ ನಡೆಯುತ್ತಿರುವುದಾಗಿ ತಿಳಿಸಿದರು.

ಶಾಸಕ ಕೊತ್ತೂರು ಮಂಜುನಾಥ್ ‌ಮಾತನಾಡಿ,‌‌ ಮುಂದಿನ 25 ವರ್ಷಗಳ‌ ದೃಷ್ಟಿಕೋನ ಗಮನದಲ್ಲಿಟ್ಟುಕೊಂಡು ರಿಂಗ್ ರಸ್ತೆ‌ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.‌ ಇವತ್ತಿನ ಸಂಚಾರ ದಟ್ಟಣೆ,‌ ಮುಂದೆ ಉಂಟಾಗಬಹುದಾದ ದಟ್ಟಣೆ ಗಮನದಲ್ಲಿ ಇಟ್ಟುಕೊಳ್ಳಬೇಕು. ನಾಲ್ಕು‌ ಪಥ ರಸ್ತೆ ಮಾಡಬೇಕು. ಮತ್ತೆ ನಾಲ್ಕು ಪಥ ವಿಸ್ತರಣೆಗೆ ಜಾಗ ಇರಬೇಕು ಎಂದರು.

ರಿಂಗ್ ರಸ್ತೆ ನಿರ್ಮಾಣ ಸಂಬಂಧ ಮೊದಲು ಸ್ಯಾಟಿಲೈಟ್ ಮ್ಯಾಪ್‌ ಮಾಡಿ ಬಳಿಕ ಚರ್ಚಿಸೋಣ. ಆಮೇಲೆ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸೋಣ‌‌ ಎಂದು ತಿಳಿಸಿದರು. ಚೆನ್ನೈ-ಬೆಂಗಳೂರು ಕಾರಿಡಾರ್, ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ ಹೆದ್ದಾರಿಗೆ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರದಿಂದ ಭೂಸ್ವಾಧೀನಕ್ಕೆ‌ ಹಣ ಕೊಡಿಸುವ ಜವಾಬ್ದಾರಿ ‌ನಮ್ಮದು. ಈ ಸಂಬಂಧ ರೈತರ‌ ಜೊತೆ ಸಭೆ‌ ಕೂಡ ನಡೆಸೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ,‌‌ ನಗರ ಬೆಳೆಯುತ್ತಿರುವ ವಿಚಾರ, ಅಭಿವೃದ್ಧಿ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ರಿಂಗ್ ರಸ್ತೆ ನಿರ್ಮಾಣ‌ ಮಾಡಬೇಕು. ಕೋಲಾರ ಭಾಗಕ್ಕೆ ಕೈಗಾರಿಕೆಗಳು ಹೆಚ್ಚು ಬರುತ್ತಿವೆ, ಬಿಲ್ಡರ್ಸ್ ಬರುತ್ತಿದ್ದಾರೆ. ಚೆನ್ನೈ-ಬೆಂಗಳೂರು ಕಾರಿಡಾರ್ ಉದ್ಘಾಟನೆ ‌ಆದರೆ‌ ಇನ್ನೂ ಹೆಚ್ಚು ವಾಹನ ಹಾಗೂ ಜನರು ಬರುತ್ತಾರೆ ಎಂದು ಹೇಳಿದರು.

2050ರಲ್ಲಿನ ದೃಷ್ಟಿಕೋನ ‌ಇಟ್ಟುಕೊಂಡು‌ ನಿರ್ಮಾಣ ಮಾಡಬೇಕು‌. ವೇಮಗಲ್‌ ಕೈಗಾರಿಕೆ ಪ್ರದೇಶದವರೆಗೆ ರಿಂಗ್ ರಸ್ತೆ ಸಂಪರ್ಕ ‌ಇರಬೇಕು.‌ ಈ ಕಡೆ ವಡಗೂರುವರೆಗೆ‌ ವಿಸ್ತರಿಸಬೇಕು. ಮುಂದಿನ ವರ್ಷಗಳಲ್ಲಿ ಈ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ‌ಆಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್‌ ಮಾತನಾಡಿ, ರಿಂಗ್ ‌ರಸ್ತೆ ವ್ಯಾಪ್ತಿಯ ರೇಡಿಯಸ್ 60 ಕಿ.ಮೀ ಇರಲಿದೆ. ಇನ್ನೂ ಹೆಚ್ಚು ವಿಸ್ತರಣೆ ಕಷ್ಟ. ಈ ಸಂಬಂಧ‌‌ ಇನ್ನಷ್ಟು ಚರ್ಚೆ ಆಗಬೇಕಿದೆ ಎಂದು‌ ಹೇಳಿದರು. ಡಿಪಿಆರ್ ಸಿದ್ಧಪಡಿಸಲು‌ ಟೆಂಡರ್ ‌ಕರೆಯಲು ಸರ್ಕಾರ ₹ 2.8 ‌ಕೋಟಿ ನೀಡಲಿದೆ ಎಂದರು.

ಲೋಕೋಪಯೋಗಿ‌ ಇಲಾಖೆಯ ಅಧಿಕಾರಿಗಳು ಮಾತನಾಡಿ,‌‌ ಮುಂಬರುವ ವರ್ಷಗಳ ಸಂಚಾರ ದಟ್ಟಣೆ ಗಮನದಲ್ಲಿ ಇಟ್ಟುಕೊಂಡೇ‌ ರಿಂಗ್ ರಸ್ತೆ ನಿರ್ಮಾಣ‌ ಮಾಡುತ್ತೇವೆ. ಬೇಗನೇ ಆದರೆ ಕಡಿಮೆ ವೆಚ್ಚ ತಗಲುತ್ತದೆ. ತಡವಾದರೆ ವೆಚ್ಚ ಹೆಚ್ಚಳವಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 190 ಪ್ರಕರಣ ಇತ್ಯರ್ಥ: ನ್ಯಾ ನೇರಳೆ ವೀರಭದ್ರಯ್ಯ ಭವಾನಿ

ಕೋಮುಲ್‌ ನಿರ್ದೇಶಕ ಚಂಜಿಮಲೆ ಜೆ.ರಮೇಶ್, ವೇಮಗಲ್ ನರಸಾಪುರ ಯೋಜನಾ ‌ಪ್ರಾಧಿಕಾರ ಅಧ್ಯಕ್ಷ ಉರಟಾಗ್ರಹಾರ ಚೌಡರೆಡ್ಡಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ‌ ಮುರಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ರಾಮಮೂರ್ತಿ, ನಿವೃತ್ತ ಅಧಿಕಾರಿ ಮಂಜುನಾಥ್ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...