ವಾಲ್ಮೀಕಿ ಸಮುದಾಯದವರು ಒಟ್ಟಾಗಿ ಸೇರಿ ವಾಲ್ಮೀಕಿ ಜಯಂತಿ ಆಚರಿಸೋಣ

Date:

ಚಿಂತಾಮಣಿ : ಎಲ್ಲಾ ವಾಲ್ಮೀಕಿ ಸಮುದಾಯದವರು ರಾಜಕೀಯವನ್ನು ಮೆರೆತು ಒಟ್ಟುಗೂಡಿ ಎಲ್ಲರೂ ವಾಲ್ಮೀಕಿ ಜಯಂತಿಯನ್ನು ಆಚರಿಸೋಣ ಎಂದು ವಾಲ್ಮೀಕಿ ಮುಖಂಡರಾದ ವೆಂಕಟೇಶ್,ಶಂಕರ್, ಮಾಡಿಕೆರೆ ಮಣಿಕಂಠ,ಆನಂದ್, ರವರು ಹೇಳಿದರು.

ಇದೇ ಅಕ್ಟೋಬರ್ 07 ರಂದು ಚಿಂತಾಮಣಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗಳು ಕರ್ನಾಟಕ ಸರ್ಕಾರವು ವಾಲ್ಮೀಕಿ ಜಯಂತಿಯನ್ನು ನಾಡಹಬ್ಬವಾಗಿ ಆಚರಿಸುತ್ತಿರುವುದರಿಂದ ಅವರೊಂದಿಗೆ ನಮ್ಮ ಎಲ್ಲಾ ಕುಲಬಾಂಧವರು ಭಿನ್ನಾಭಿಪ್ರಾಯಗಳನ್ನು ಬಿಟ್ಟು ಬಿಕ್ಕಟ್ಟು ಬಾರದ ಹಾಗೆ ಒಗ್ಗಟ್ಟಿನಿಂದ ಪಕ್ಷದಾರಿತವಲ್ಲದೆ ಈ ಮಹಾಪುರುಷನ ಜಯಂತಿಯ ಆಚರಿಸಬೇಕಾಗಿರುವುದರಿಂದ ಎಲ್ಲಾ ಕುಲಬಾಂಧವರು ಜೊತೆಗೆ ಚಿಂತಾಮಣಿ ತಾಲೂಕಿನ ಎಲ್ಲಾ ಸಮಸ್ತ ನಾಗರಿಕರು,ಸರ್ವ ಪಕ್ಷಗಳ ಮುಖಂಡರು,ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಮಹರ್ಷಿ ವಾಲ್ಮೀಕಿ ಅನುಗ್ರಹ ಪಡೆದು ಬಹಳ ವಿಜೃಂಭಣೆಯಿಂದ ಜಯಂತಿ ಆಚರಣೆ ಮಾಡಲು ಸಹಕರಿಸಬೇಕೆಂದು ಕೋರಿದರು.

ಇದನ್ನು ಓದಿದ್ದೀರಾ..? ಕಾಂಗ್ರೆಸ್ ಕಛೇರಿಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಅಕ್ಟೋಬರ್ 7ರಂದು ಬೆಳಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಿಂದ ಮೆರವಣಿಗೆ ಕಾರ್ಯಕ್ರಮ ಮಧ್ಯಾಹ್ನ 1:00ಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...