ಕೋಲಾರ: ರಾಜ್ಯ ಸರ್ಕಾರದ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಾಲಾ ಶಿಕ್ಷಕಿ ಅಖ್ತರ್ ಬೇಗಂ ಸಾವನ್ನಪ್ಪಿದ ಹಿನ್ನಲೆಯಲ್ಲಿ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿನ ನಿವಾಸಕ್ಕೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಕೊತ್ತೂರು ಮಂಜುನಾಥ್ ಸಮೀಕ್ಷಾ ಕಾರ್ಯಕ್ಕೆ ತೆರಳಿದ ಶಿಕ್ಷಕಿ ಶವವಾಗಿ ಪತ್ತೆಯಾಗಿರುವುದು ನೋವಿನ ಸಂಗತಿಯಾಗಿದೆ ಇಂತಹ ಘಟನೆ ನಡೆಯಬಾರದಿತ್ತು ಮೃತರ ಕುಟುಂಬಸ್ಥರು ನೋವಿನಲ್ಲಿದ್ದು, ಸರಕಾರ ಕುಟುಂಬದ ಜತೆಗಿದೆ ಪೋಲೀಸ್ ಇಲಾಖೆಯಿಂದ ಪೂರ್ಣಪ್ರಮಾಣದಲ್ಲಿ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದಾಗಿ ಅವರಿಗೆ ಯಾರೇ ತೊಂದರೆ ಕೊಟ್ಟದ್ದರು ಶಿಕ್ಷೆಗೆ ಒಳಪಡಿಸಲಾಗುತ್ತದೆ ಇದರಲ್ಲಿ ಯಾರನ್ನು ಬಿಡುವ ಪ್ರಶ್ನೆ ಇಲ್ಲ ಎಂದರು.
ಘಟನೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರಿಗೆ ಮಾಹಿತಿ ನೀಡಲಾಗಿದೆ ಸರ್ಕಾರವು ಕುಟುಂಬದೊಂದಿಗೆ ಇದೆ ಅವರ ಮನೆಯಲ್ಲಿ ಒಬ್ಬರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ಕೊಡಲು ಮೊದಲ ಆಧ್ಯತೆ ನೀಡಲಾಗುವುದು ಜೊತೆಗೆ ಸಮೀಕ್ಷೆ ಕಾರ್ಯದಲ್ಲಿ ಮರಣ ಹೊಂದಿದದ್ದರಿಂದ ಪರಿಹಾರ ಧನ ಸಹ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಇದನ್ನು ಓದಿದ್ದೀರಾ..? ಮುಂದೆ ನಿರ್ಮಾಣವಾಗುವ ಮಿಸೈಲ್ ಗೆ ಅಬ್ದುಲ್ ಕಲಾಂ ಹೆಸರಿಡಿ
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಫೈರೋಜ್, ಸದಸ್ಯ ಅಮರನಾಥ್, ಕ್ಷೇತ್ರ ಶಿಕ್ಷಾಧಿಕಾರಿ ಮಧುಮಾಲತಿ ಪಡುವಣೆ, ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ಸಿ ಕೇಂದ್ರ ರಾಧಮ್ಮ, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಕೋಮುಲ್ ನಿರ್ದೇಶಕ ಷಂಷೀರ್, ಬಾಲು ಸಾಧೀಕ್, ನದೀಂ ಮುಂತಾದವರಿದ್ದರು.





