ಕೋಲಾರ: ಸಮೀಕ್ಷಾ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ ಶವವಾಗಿ ಪತ್ತೆಯಾಗಿದ್ದು, ಕೋಲಾರದ ಮಹಾಲಕ್ಷ್ಮಿ ಬಡಾವಣೆಯಲ್ಲಿನ ನಿವಾಸಕ್ಕೆ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಫೈರೋಜ್, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೈಲಾಂಡಹಳ್ಳಿ ಮುರಳಿ, ಸಮೀಕ್ಷಾ ಕಾರ್ಯಕ್ಕೆ ತೆರಳಿದ ಶಿಕ್ಷಕಿ ಶವವಾಗಿ ಪತ್ತೆಯಾಗಿರುವುದು ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಸ್ಥರು ಸಾಕಷ್ಟು ನೋವಿನಲ್ಲಿದ್ದು, ಅವರು ಏನೂ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ ಶಾಸಕರು ಪ್ರವಾಸಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ನಾವು ಭೇಟಿ ನೀಡಿ ಸಾಂತ್ವನ ತಿಳಿಸಿದ್ದು, ಸರಕಾರ ಕುಟುಂಬದ ಜತೆಗಿದೆ. ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದಾಗಿ ಹೇಳಿದರು.
ಇದನ್ನು ಓದಿದ್ದೀರಾ..?ಎಸ್ಟಿಗೆ ಬಲಿಷ್ಠ ಜಾತಿಗಳ ಸೇರ್ಪಡೆ ವಾಲ್ಮೀಕಿ ನಾಯಕ ಸಂಘದಿಂದ ಬೃಹತ್ ಪ್ರತಿಭಟನೆ
ಈ ಸಂದರ್ಭದಲ್ಲಿ ಮುಖಂಡರಾದ ನದೀಂ ಬೇಗ್, ವಿರೇಂದ್ರ ಪಾಟೀಲ್ ಹಾಗೂ ಜಗನ್ ಮುಂತಾದವರಿದ್ದರು.




