ಹಾಲು ಡೇರಿ ಕಾರ್ಯದರ್ಶಿಗಳು, ಸಿಬ್ಬಂದಿಗಳ ಬೇಡಿಕೆ ಈಡೇರಿಕೆ

Date:

ಕೋಲಾರ: ಪ್ರಾಥಮಿಕ ಹಾಲು ಸಂಘಗಳ ಸಿಬ್ಬಂದಿಯ ವಯೋನಿವೃತ್ತಿಗೆ 5 ಲಕ್ಷ ಸೇರಿದಂತೆ ನೌಕರರ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಲ್ಲಿಸಿದ್ದ ಮನವಿಯನ್ನು ಕೋಮುಲ್ ಆಡಳಿತ ಮಂಡಳಿಯು ಸ್ಪಂದಿಸಿ ಈಡೇರಿಸಲು ಒಪ್ಪಿಗೆ ಸೂಚಿಸಿದ್ದು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಒಕ್ಕೂಟ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಅಭಿನಂದನೆ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಆಡಳಿತ ಮಂಡಳಿಯ ಸಭೆಯಲ್ಲಿ ಸಿಬ್ಬಂದಿಯ ವಯೋನಿವೃತ್ತಿ 5 ಲಕ್ಷ , ಜೊತೆಗೆ ಏಕರೂಪ ತಂತ್ರಾಂಶವನ್ನು ( ಕಾಮನ್) ಸಾಫ್ಟವೇರ್ ಅಳವಡಿಸಲು ಸಿಬ್ಬಂದಿಗೆ ಪ್ರತಿ ಲೀಟರ್ ಗೆ 30 ಪೈಸೆ ಬದಲಿಗೆ 40 ಪೈಸೆ ಹೆಚ್ಚಳ ಮಾಡಲಾಗಿದೆ ಅಕಾಲಿಕ ಮರಣ ಹೊಂದಿದ ಸಿಬ್ಬಂದಿಗೆ 5 ಲಕ್ಷ ಕೊಡುವುದು ಉಳಿದಂತೆ ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಕ್ರಮ ವಹಿಸಲು ಒಕ್ಕೂಟದ ಆಡಳಿತ ಮಂಡಳಿ ಭರವಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? ಸ್ವತಂತ್ರ ಭಾರತಕ್ಕೆ ಮುಕ್ಕಾಲು ಶತಮಾನ ಕಳೆದಿದ್ದರೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದುರದೃಷ್ಟಕರ ಸಂಗತಿ

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶ್ ಗೌಡ, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಖಜಾಂಚಿ ವಕ್ಕಲೇರಿ ನಾಗರಾಜ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಿ.ತಿಮ್ಮೇಗೌಡ, ಉಪಾಧ್ಯಕ್ಷ ಗಂಗಾಪುರ ಬಾಬು ಪದಾಧಿಕಾರಿಗಳಾದ, ಮದನಹಳ್ಳಿ ರಮೇಶ್, ಪುರಹಳ್ಳಿ ದೇವರಾಜ್, ತೊಕಲಘಟ್ಟ ರವಿ, ಶ್ರೀರಂಗಪುರ ರವಿ, ಕೋಗಿಲೇರಿ ಸುಬ್ರಮಣಿ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...