ʼಅಲ್ಲಾಡ್ಸು.. ಅಲ್ಲಾಡ್ಸು..ʼ ಸಿನಿಮಾ ಹಾಡಿನಂತೆ ಸಿದ್ದರಾಮಯ್ಯ ಸಿಎಂ ಕುರ್ಚಿ ಪರಿಸ್ಥಿತಿ: ಬೊಮ್ಮಾಯಿ ವ್ಯಂಗ್ಯ

Date:

  • ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಇರುತ್ತಾರಾ ಎಂಬುದು ಸಚಿವರಿಗೆ ಅನುಮಾನ
  • ಕಾಂಗ್ರೆಸ್‌ ಸೇಡಿನ ರಾಜಕಾರಣ ಆರಂಭಿಸಿದೆ: ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸೇಡಿನ ರಾಜಕಾರಣವನ್ನು ಕಾಂಗ್ರೆಸ್ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನು ಬೇಕೋ ಅದನ್ನು ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. ಆದರೆ, ಅವರಿಗೆ ಕಾನೂನು – ಸಂವಿಧಾನವೇ ತಂದೆ-ತಾಯಿ ಇದ್ದಂತೆ. ಅದನ್ನು ಬಿಟ್ಟು ಪೊಲೀಸರು ಏನೂ ಮಾಡಲು ಆಗಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಗಲಾಟೆ ಮಾಡುವ ಪರಿಪಾಠ ನಡೆದಿದೆ. ನಾವು ಕಾರ್ಯಕರ್ತರ ಜತೆಗೆ ಇರುತ್ತೇವೆ. ಯಾರೂ ಎದೆಗುಂದಬೇಕಿಲ್ಲ” ಎಂದರು.

ಸೋಲು ಗೆಲುವು ಸಾಮಾನ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯಲ್ಲಿ ಸೋಲು – ಗೆಲುವು ಸಾಮಾನ್ಯ. ಗೆದ್ದಾಗ ದೊಡ್ಡ ಮನುಷ್ಯರ ರೀತಿ ಇರಬೇಕು. ಸೋತಾಗ ಗಟ್ಟಿ ಮನುಷ್ಯರಾಗಿ ಇರಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಯಾರೂ ಎದೆಗುಂದಬೇಕಿಲ್ಲ. ಒಂದು ಚುನಾವಣೆಯಲ್ಲಿ ಸೋತರೆ, ಯಾವುದೇ ನಾಯಕರ ಭವಿಷ್ಯ ಅಥವಾ ಹಣೆಬರಹ ಬದಲಾಗಲ್ಲ. ಇಂದಿನ ಸೋಲು ನಾಳೆಯ ಯಶಸ್ಸಿನ ಮೆಟ್ಟಿಲು ಎಂದು ಎಲ್ಲರೂ ಭಾವಿಸೋಣ” ಎಂದು ಹೇಳಿದರು.

“ರಾಜಕಾರಣಿಗಳು, ಕೇವಲ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕಾರಣದಲ್ಲಿ ಎರಡು ರೀತಿ ಇದೆ. ಒಂದು ಅಧಿಕಾರಕ್ಕಾಗಿ, ಇನ್ನೊಂದು ಜನರಿಗಾಗಿ. ಅಧಿಕಾರಕ್ಕಾಗಿ ರಾಜಕೀಯ ಮಾಡಿದರೆ, ನಾನು ಏನು ಮಾಡಿದೆ, ನೀನು ಏನು ಮಾಡಿದೆ ಎಂಬ ಪ್ರತಿಷ್ಠೆ ಬರುತ್ತದೆ. ಅದೇ ಜನರಿಗಾಗಿ ರಾಜಕೀಯ ಮಾಡಿದರೆ, ಸೇವೆ ಒಂದೇ ಮುಖ್ಯವಾಗುತ್ತದೆ. ಬಾಗಲಕೋಟೆ, ಸಕ್ಕರೆ ನಾಡು. ಇಲ್ಲಿನ ಜನರು ಸಿಹಿ ರಸಕೊಡುವ ಕಬ್ಬಿನಂತೆ. ಆಂತರಿಕ ಸಮಸ್ಯೆ ಇರುತ್ತವೆ. ಅವುಗಳನ್ನು ಬದಿಗಿಟ್ಟು ಮುನ್ನಡೆಯೋಣ. ಯಾರೂ ಸೋಲಿಸುವ ಕೆಲಸ ಮಾಡಬಾರದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರನ್ನು ಅಪಹಾಸ್ಯ ಮಾಡಿದರೆ, ಪರಿಣಾಮ ಎದುರಿಸಬೇಕಾದೀತು

ಅಲ್ಲಾಡ್ಸು ಹಾಡಿನಂತಾದ ಸಿದ್ದು ಕುರ್ಚಿ

“ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಒಂದು ಗ್ಯಾರಂಟಿ ಕೂಡ ಸರಿಯಾಗಿ ಈಡೇರಿಸಲು ಆಗಿಲ್ಲ. ಸಿದ್ದರಾಮಯ್ಯ ಸಿಎಂ ಆದ ತಕ್ಷಣ ವಿಜಯಪುರದ ಸಚಿವರೊಬ್ಬರು, ಸಿದ್ದು ಐದು ವರ್ಷ ಸಿಎಂ ಎಂದು ಹೇಳಿದರು, ಹಾಗೆಯೆ ಮೈಸೂರು ಭಾಗದ ಸಚಿವರೊಬ್ಬರು ಹೇಳಿದರು. ಐದು ವರ್ಷ ಸಿದ್ದು ಸಿಎಂ ಆಗಿರೋದು ಅವರ ಸಚಿವ – ಶಾಸಕರಲ್ಲೇ ಸಂಶಯ ಬಂದಿದೆ. ಹೀಗಾಗಿ ಇದು 6ನೇ ಗ್ಯಾರಂಟಿಯಾಗಿ ಸಿದ್ದು ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತ ಹೊರಟಿದ್ದಾರೆ. ʼಅಲ್ಲಾಡ್ಸು.. ಅಲ್ಲಾಡ್ಸು..ʼ ಎಂಬ ಸಿನೆಮಾ ಹಾಡಿನಂತೆ, ಸಿದ್ದರಾಮಯ್ಯ ಅವರ ಸಿಎಂ ಕುರ್ಚಿಯ ಪರಿಸ್ಥಿತಿ” ಎಂದು ವ್ಯಂಗ್ಯವಾಡಿದರು.

ಸಂತ್ರಸ್ತರೊಂದಿಗೆ ಹೋರಾಟ

“ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರು, ಏಕರೂಪದ ದರ ಕೊಡಿ ಎಂದು 2013ರಿಂದ 2018ರ ವರೆಗೆ ಹೋರಾಟ ಮಾಡಿದರೂ ಕಾಂಗ್ರೆಸ್‌ನವರು ಸ್ಪಂದಿಸಲಿಲ್ಲ. ಕೃಷ್ಣೆಯ ಕಡೆಗೆ ನಡಿಗೆ ಮಾಡಿ, ಅಧಿಕಾರ ಅನುಭವಿಸಿ ಓಡಿ ಹೋದರು. ಒಂದು ಸಭೆಯನ್ನೂ ಸಂತ್ರಸ್ತರೊಂದಿಗೆ ಮಾಡಲಿಲ್ಲ. ನಾನು ಸಿಎಂ ಆದ ಬಳಿಕ ಮೂರು ಸಭೆ ನಡೆಸಿ, ಸಂತ್ರಸ್ತರಿಗೆ ಏಕರೂಪದ ದರ ಘೋಷಣೆ ಮಾಡಿ, ಪರಿಹಾರ ನೀಡಲು 5 ಸಾವಿರ ಕೋಟಿ ಮೀಸಲಿಟ್ಟಿದ್ದೆವು. ಈಗಿನ ಕಾಂಗ್ರೆಸ್ ಸರ್ಕಾರ, ಸಂತ್ರಸ್ತರಿಗೆ ಏಕರೂಪದ ದರ ಕೊಡಲೇಬೇಕು. ಅದು 25 ರಿಂದ 35 ಸಾವಿರ ಕೋಟಿ ರೂ ಆದರೂ ಸಂತ್ರಸ್ತರಿಗೆ ಕೊಡಬೇಕು. ಇಲ್ಲದಿದ್ದರೆ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಸಂತ್ರಸ್ತರೊಂದಿಗೆ ನಾವು ಹೋರಾಟಕ್ಕಿಳಿಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...