ʼಶರಾವತಿ ಪಂಪ್ಡ್ ಸ್ಟೋರೇಜ್ʼ: ಪರಿಸರವಾದಿಗಳು ವಿರೋಧಿಸುತ್ತಿರುವುದೇಕೆ?

Date:

ಶಿವಮೊಗ್ಗ ಜಿಲ್ಲೆಯ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ರಾಜ್ಯ ಸರ್ಕಾರ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಗೆ ಮುಂದಾಗಿದೆ. ಈ ಯೋಜನೆಯಿಂದ ರಾಜ್ಯ ಸರ್ಕಾರವು 2000 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಿದೆ.‌ ಇದಕ್ಕಾಗಿ ಈಗಾಗಲೇ ಟೆಂಡರ್ ಸಹ ಕರೆದು ಕೆಲಸ ನಿರ್ವಹಿಸಲು ಗುತ್ತಿಗೆ ನೀಡಿದೆ.‌ ಇದರ ಬೆನ್ನಲ್ಲೇ ಈ ಯೋಜನೆಗೆ ಸ್ಥಳೀಯ ಹಾಗೂ ಪರಿಸರವಾದಿಗಳ ತೀವ್ರ ವಿರೋಧ ವ್ಯಕ್ತವಾಗಿದೆ. ಅಸಲಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆ‌ ಎಂದರೇನು? ಇದರದ ಉಪಯೋಗ, ಸಾಧಕ, ಭಾದಕಗಳೇನು? ಸ್ಥಳೀಯ ಹಾಗೂ ಪರಿಸರವಾದಿಗಳ ವಿರೋಧ ಏಕೆ? ಈ ಬಗ್ಗೆ ತಜ್ಞರು ಏನೆನ್ನುತ್ತಾರೆ? ಎನ್ನುವುದನ್ನು ಅವಲೋಕಿಸುವುದು ಮುಖ್ಯವಾಗುತ್ತದೆ.

ಶರಾವತಿ ನದಿಗೆ ಲಿಂಗನಮಕ್ಕಿಯಲ್ಲಿ ಅಣೆಕಟ್ಟು ನಿರ್ಮಿಸಲಾಗಿದೆ. ಇಲ್ಲಿ ನಾಲ್ಕು ವಿದ್ಯುತ್​ಗಾರಗಳಿಂದ 1469.20 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಈ ನೀರು ಗೇರುಸೊಪ್ಪ ಅಣೆಕಟ್ಟೆಗೆ ಹೋಗುತ್ತದೆ. ಅಲ್ಲಿಯೂ 240 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಿ, ಅಲ್ಲಿಂದ ಶರಾವತಿ ಮುಂದೆ ಸಾಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೂಲಕ ಅರಬ್ಬಿ ಸಮುದ್ರ ಸೇರುತ್ತದೆ.

ಈಗ ಯೋಜಿಸಿರುವ ಶರಾವತಿ ಪಂಪ್ಡ್​ ಸ್ಟೋರೇಜ್ ಯೋಜನೆಯಂತೆ, ಗೇರುಸೊಪ್ಪ ಅಣೆಕಟ್ಟಿನಲ್ಲಿ ಸಂಗ್ರಹವಾಗುವ ನೀರನ್ನು ಮತ್ತೆ ಗುರುತ್ವಾಕರ್ಷಣೆಗೆ ವಿರುದ್ಧವಾಗಿ ವಿದ್ಯುತ್ ಬಳಸಿಕೊಂಡು ತಲಕಳಲೆ ಅಣೆಕಟ್ಟೆಗೆ ತರಲಾಗುತ್ತದೆ. ಹಾಗೇ ಎತ್ತಿ ತಂದ ನೀರಿನಿಂದ ಮತ್ತೆ 2000 ಮೆಗಾ ವ್ಯಾಟ್ ವಿದ್ಯುತ್ತನ್ನು ಉತ್ಪಾದಿಸುವುದು ಯೋಜನೆಯ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಾವತಿ ಪಂಪ್ಡ್‌ ಸ್ಟೋರೇಜ್‌ ಎನ್ನುವುದು ಸುಮಾರು 10500 ಕೋಟಿ ಯೋಜನಾ ವೆಚ್ಚದ ಬೃಹತ್‌ ಯೋಜನೆಯಾಗಿದೆ. ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಅರಣ್ಯ ಭೂಮಿಯನ್ನೊಳಗೊಂಡ ಸುಮಾರು 19.982 ಹೆಕ್ಟೇರ್ (ಭೂಮಿಯ ಒಳಗೆ), 34.173 ಹೆಕ್ಟೇರ್ (ಭೂಮಿಯ ಮೇಲ್ಮೈ) ಸೇರಿದಂತೆ ಒಟ್ಟು 54.155 ಹೆಕ್ಟೇರ್‌ ಅರಣ್ಯ ಭೂಪ್ರದೇಶವನ್ನೊಳಗೊಂಡಿದೆ. 0.1 ಹೆಕ್ಟೇರ್ (ಭೂಮಿಯ ಒಳಗೆ), 88.508 ಹೆಕ್ಟೇರ್ (ಭೂಮಿಯ ಹೊರಗೆ) ಸೇರಿದಂತೆ ಒಟ್ಟು 88.608 ಹೆಕ್ಟೇರ್ ಅರಣ್ಯೇತರ ಭೂಮಿ ಯೋಜನೆಗೆ ಬೇಕಾಗಿದೆ. ಅಲ್ಲಿಗೆ ಒಟ್ಟು 20082 ಹೆಕ್ಟೇರ್ (ಭೂಮಿಯ ಒಳಗೆ), 122.681 (ಭೂಮಿಯ ಹೊರಗೆ) ಭೂಪ್ರದೇಶ ಬೇಕಾಗಿದೆ.

ಸಾಗರ ತಾಲೂಕಿನ ತಳಕಳಲೆ ಗ್ರಾಮದಿಂದ 3.63 ಹೆಕ್ಟೇರ್‌ ಭೂ ಪ್ರದೇಶ ಯೋಜನೆಗೆ ಒಳಗೊಳ್ಳಲಿದೆ. ಆ ಪೈಕಿ ಸರ್ಕಾರಿ ಶಾಲೆ-1, ಮನೆಗಳು-8, ದನದ ಕೊಟ್ಟಿಗೆ-7, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿ- 0.404 ಹೆಕ್ಟೇರ್ ಭೂ ಭಾಗ- ಮನೆಗಳು-4, ಮಳಿಗೆ-3, ದೇವಾಲಯ ತಡೆಗೋಡೆ-2, ಬೆಗುಡಿಗ್ರಾಮ- 20.497 ಹೆಕ್ಟೇರ್ – ಸರ್ಕಾರಿ ಅಂಗನವಾಡಿ-1, ಮನೆಗಳು-6, ದನದ ಕೊಟ್ಟಿಗೆ-4, ಬಾವಿ-1, ದೇವಾಲಯ-1 ಸೇರಿದಂತೆ ಒಟ್ಟು ಎರಡು ಜಿಲ್ಲೆಗಳಿಂದ 24.31 ಹೆಕ್ಟೇರ್ ಭೂ ಭಾಗ ಯೋಜನೆಯ ಭಾಗವಾಗಲಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ವಿಭಾಗದ 745 ಮರಗಳು, ಶಿವಮೊಗ್ಗ ವನ್ಯಜೀವಿ ವಲಯದ 1518 ಮರಗಳು, ಉತ್ತರ ಕನ್ನಡದ ಹೊನ್ನಾವರ ವಿಭಾಗದ 13756 ಮರಗಳು ಕಟಾವಾಗಲಿವೆ.

1002355087

ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಯನ್ನು ಕಾರ್ಯಗತಗೊಳಿಸಲು ಡಿಸೆಂಬರ್ 2023ರಲ್ಲಿ ನೀಡಲಾದ ಹೊಸ TOR ಪ್ರಕಾರ EIA ಅಧ್ಯಯನಗಳು ಪೂರ್ಣಗೊಂಡಿದೆ. ಇದರ ವರದಿ ಅಂತಿಮಗೊಳಿಸಲಾಗಿದೆ. ಪರಿಸರ ಅನುಮತಿಯನ್ನು (EC) MoEF & CC ಯಿಂದಪಡೆಯ ಬೇಕಾಗಿರುವುದು ಬಾಕಿ ಇದೆ. 2025ರ ಜೂನ್‌ 26ರಂದು ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (NBWL) ಸ್ಥಾಯಿ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ತಾತ್ಕಾಲಿಕ ಅನುಮತಿ ನೀಡಲಾಗಿದೆ. ಯೋಜನೆಯನ್ನು ಶರಾವತಿ ಕಣಿವೆ ಪ್ರದೇಶದಲ್ಲಿ ಸ್ಥಾಪಿಸಲಾಗಿದ್ದು, ಯೋಜನೆಯ ಕೆಳಮಟ್ಟದಲ್ಲಿ ಗೇರುಸೊಪ್ಪ ಹಾಗೂ ಮೇಲ್ಪಟ್ಟದಲ್ಲಿ ತಳಕಳಲೆ ಜಲಾಶಯಗಳು ಅಸ್ತಿತ್ವದಲ್ಲಿ ಇವೆ. ಎರಡೂ ಜಲಾಶಯವನ್ನು ಏಳು ಕಿಲೋಮೀಟರ್ ಸುರಂಗ ಮಾರ್ಗದ ಮೂಲಕ ಜೋಡಿಸಿ ನೀರು ಹರಿಬಿಟ್ಟು ವಿದ್ಯುತ್ ಉತ್ಪಾದನೆಗೆ ಕಾರ್ಯನಿರ್ವಹಿಸಲಾಗುವುದು ಎಂದು ಯೋಜನೆಯ ರೂಪುರೇಷೆಗಳು ತಿಳಿಸುತ್ತಿವೆ.

ಈ ಯೋಜನೆ ಪಶ್ಚಿಮ ಘಟ್ಟ ವಲಯದಲ್ಲಿ ಬರುತ್ತದೆ. ಹೆಚ್ಚುವರಿಯಾಗಿ ಅರಣ್ಯ ಭೂಮಿಯನ್ನು ಪಡೆಯಲಾಗುತ್ತದೆ. ಪರಿಸರ ಸೂಕ್ಷ್ಮವಲಯವಾಗಿರುವ ಈ ಪ್ರದೇಶ ಅತ್ಯಂತ ಹಳೆಯದಾದ ಮತ್ತು ಇತರೆ ಭಾಗದಲ್ಲಿ ಸಿಗದಂತಹ ಪ್ರಭೇದದ ಸಸ್ಯಗಳು ಇಲ್ಲಿವೆ. ಇದಲ್ಲದೇ ಇದು ಅವನತಿಯಲ್ಲಿ ಇರುವ ಸಿಂಗಳೀಕಗಳ ಆವಾಸ ಸ್ಥಾನ ಕೂಡ. ಇನ್ನು ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯದಿಂದ ಭೂಕುಸಿತ ದುರಂತಗಳು ನಡೆದಿದೆ. ಇದಲ್ಲದೇ ಅಭಿವೃದ್ಧಿ ಕಾರ್ಯದಿಂದ ನದಿಯ ದಿಕ್ಕು ಸಹ ಬದಲಾಗಿದೆ. ಹಲವು ಜೀವ ವೈವಿಧ್ಯ ಹೊಂದಿರುವ ಈ ಪ್ರದೇಶದಲ್ಲಿ ಅಭಿವೃದ್ಧಿಗೆ ಮುಂದಾದರೆ, ಜೀವ ಸಂಕುಲಕ್ಕೆ ಆಪತ್ತು ಎದುರಾಗಲಿದೆ ಎನ್ನುವುದು ಪರಿಸರವಾದಿಗಳ ಆತಂಕ.

ಈಗಾಗಲೇ ಶರಾವತಿ ಜಲವಿದ್ಯುತ್ ಯೋಜನೆಯಿಂದ ಸಾವಿರಾರು ಜನ ತಮ್ಮ ನೆಲ ಕಳೆದುಕೊಂಡು ಸೂಕ್ತ ಪರಿಹಾರ, ಉದ್ಯೋಗದ ಭರವಸೆಯೂ ಸಮರ್ಪಕವಾಗಿ ಈಡೇರಿಲ್ಲ. ಇನ್ನೂ ಸುರಂಗ ಮಾರ್ಗ ಮಾಡುವುದರಿಂದ ಭೂಕುಸಿತದ ಆತಂಕವಿದ್ದು ಪರಿಸರಕ್ಕೆ ದೊಡ್ಡ ಹಾನಿಯಾಗುವ ಸಾಧ್ಯತೆಗಳು ಇವೆ. ಹೀಗೆ ಹತ್ತು ಹಲವು ಕಾರಣಗಳಿಂದ ಈ ಯೋಜನೆಗೆ ಪರಿಸರವಾದಿಗಳು ಹಾಗೂ ಸ್ಥಳೀಯ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಯ ಮೊದಲ ಹಂತದ ಹಣ ಸಹ ಬಿಡುಗಡೆಯಾಗಿದ್ದು, ಸಾರ್ವಜನಿಕ ಅಹವಾಲು ಸ್ವೀಕಾರದ ನಂತರ ಸಂಪೂರ್ಣವಾಗಿ ಅನುಷ್ಠಾನಗೊಳ್ಳುವ ಸಾಧ್ಯತೆಗಳಿವೆ.

ಹೊನ್ನಾವರ ತಾಲೂಕಿನ ಸೂರ್ಯನ ಬೆಳಕನ್ನೇ ಕಾಣದ ನೆರಳನ್ನೇ ಹೀರಿ ಬದುಕುವ ಕತ್ತಲೆ ಕಾನು ಎಂದೇ ಕರೆಯಲ್ಪಡುವ ಕಾಡು ಈ ಯೋಜನೆಯಿಂದ ಅಪಾಯಕ್ಕೆ ಸಿಲುಕಲಿದೆ. ಮನುಷ್ಯನ ಉಗಮಕ್ಕೂ ಮೊದಲೇ ಇಲ್ಲಿ ಸಸ್ಯಗಳು ಬೆಳೆದುನಿಂತಿದ್ದವು ಎನ್ನಲಾಗುತ್ತದೆ. ಮನುಷ್ಯ ಕಾಲೇ ಇಡದ ಜಾಗಗಳು ಸಹ ಇಲ್ಲಿವೆ. ಇಂತಹ ಸ್ಥಳಗಳು ನಾಶವಾದರೆ ಮತ್ತೆ ಸೃಷ್ಟಿಯಾಗುವುದಿಲ್ಲ. ಇನ್ನು ಸಿಂಹದ ಬಾಲದ ಅಪರೂಪದ ಸಿಂಗಳೀಕಗಳು ಇಲ್ಲಿದ್ದು, ಅವುಗಳ ಆವಾಸ ಸ್ಥಾನ ನಾಶದಿಂದ ಅವನತಿಯಾಗುವ ಭೀತಿ ಇದೆ.

ಇದನ್ನೂ ಓದಿ: ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

ಈ ಯೋಜನೆಯ ಪರ ವಿರೋಧದ ಬಗ್ಗೆ ಸಲ್ಲಿಸಲು ಅಹವಾಲು ಸಭೆಯಲ್ಲಿ ಸಲ್ಲಿಕೆಯಾದ ಉತ್ತರ ಕನ್ನಡ ಜಿಲ್ಲೆಯ 6000 ಹಾಗೂ ಶಿವಮೊಗ್ಗ ಜಿಲ್ಲೆಯ 4000 ಅರ್ಜಿಗಳಲ್ಲಿ ಯಾವ ಅರ್ಜಿಯೂ ಯೋಜನೆಯ ಪರವಾಗಿಲ್ಲ. ಹೀಗಿದ್ದರೂ ಜನರ ವಿರೋಧದ ನಡುವೆ ಈ ಯೋಜನೆಯ ಅಗತ್ಯವೇನು ಎಂಬುದು ಸದ್ಯದ ಪ್ರಶ್ನೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಪರಿಸರವಾದಿಗಳು ಹಾಗೂ ಸ್ಥಳೀಯರು ಆಂತಕಕ್ಕೆ ಒಳಗಾಗುವುದು ಬೇಡ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾಗರ ತಾಲೂಕಿನ ತಳಕಳಲೆ ಡ್ಯಾಂ ಹಾಗೂ ಉತ್ತರ ಕನ್ನಡದ ಗೇರುಸೊಪ್ಪ ಜಲಾಶಯಗಳನ್ನು ಬಳಸಿ‌ಕೊಳ್ಳಲಾಗುತ್ತಿದೆ. ಇದರಿಂದ ಹೊಸ ಅಣೆಕಟ್ಟು ನಿರ್ಮಾಣ ಮಾಡುತ್ತಿಲ್ಲ. ಇದರಿಂದ ಯಾವುದೇ ಪ್ರದೇಶ ಮುಳುಗಡೆ ಆಗುವುದಿಲ್ಲ ಎಂದು ಕೆಪಿಸಿಎಲ್​ ಸ್ಪಷ್ಟೀಕರಣ ನೀಡಿದೆ. ಆದರೂ ಸ್ಥಳೀಯರ ಹಾಗೂ ಪರಿಸರವಾದಿಗಳ ಆತಂಕ ತಗ್ಗಿಲ್ಲ. ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗುವುದೋ; ಅಥವಾ ಪರಿಸರವಾದಿಗಳ, ಸ್ಥಳೀಯ ಸಾಮಾನ್ಯ ಜನರ ವಿರೋಧಕ್ಕೆ ಮಣಿದು ಯೋಜನೆಯನ್ನು ಕೈಬಿಡುವುದೋ ಅಥವಾ ಪರ್ಯಾಯ ಯೋಜನೆಯನ್ನೇನಾದರೂ ತರಲಿದೆಯೇ ಎಂದು ಕಾದುನೋಡಬೇಕಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...