ಬೇತಮಂಗಲ: ಇಲ್ಲಿನ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಇದೇ ತಿಂಗಳ 23 ಭಾನುವಾರ ರಂದು ಡಾ. ಬಿಆರ್ ಅಂಬೇಡ್ಕರ್ ಸಮತಾ ದಳ ಸಂಘಟನೆಯಿಂದ ಪಿ ಎಸ್ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಹಮ್ಮಿಕೊಂಡಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ ತಿಳಿಸಿದರು.
ಪಟ್ಟಣದಲ್ಲಿ ಪತ್ರಿಕ ಹೇಳಿಕೆ ನೀಡಿದ ಅವರು, ನವಂಬರ್ 23 ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆವರೆಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಕೆಜಿಎಫ್ ಹಾಗೂ ವಿವಿಧ ತಾಲೂಕುಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನುರಿತ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.
ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡ ರೋಗಿಗಳಿಗೆ ಯಾವುದೇ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ತಕ್ಷಣ ಪಿಇಎಸ್ ಮೆಡಿಕಲ್ ಆಸ್ಪತ್ರೆ ಮೂಲಕವೇ ಚಿಕಿತ್ಸೆ ನೀಡಲಾಗುವುದು ಇದಕ್ಕೆ ತಪಾಸಣೆ ನಡೆದ ಎರಡು ದಿನಗಳಲ್ಲಿ ದಿನಾಂಕ ನಿಗದಿಪಡಿಸಿ ವಾಹನಗಳ ವ್ಯವಸ್ಥೆ ಮಾಡಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಪ್ರತಿಯೊಬ್ಬರಿಗೂ ಆರೋಗ್ಯವೇ ಬಹುಮುಖ್ಯವಾಗಿದ್ದು, ಇಂತಹ ಶಿಭಿರಗಳಿಂದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ, ಬಡ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ ಎಂಬ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದೇವೆ ಎಂದರು.
ಇದನ್ನು ಓದಿದ್ದೀರಾ..? ಕೋಲಾರ | ಜಿಲ್ಲೆಯ ಆರು ಸ್ಥಳದಲ್ಲಿ ಲೋಕಾಯುಕ್ತ ದಾಳಿ
ಈ ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಸಮತಾದಳ ಸಂಘಟನೆಯ ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ, ಕೆಜಿಎಫ್ ತಾಲೂಕು ಅಧ್ಯಕ್ಷ ಕವರಗಾನಹಳ್ಳಿ ಬಾಲ ಸುಭ್ರಮಣಿ, ಬಂಗಾರಪೇಟೆ ತಾಲೂಕು ಅಧ್ಯಕ್ಷ ಬಾರ್ಲಿ ಮುನಿವೆಂಕಟಸ್ವಾಮಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.





