ಅಡುಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

Date:

ಬಾಗೇಪಲ್ಲಿ:-ಅಡುಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸುವ ಅಗತ್ಯವಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಕೋಲಾರ ಬಿ.ಎಸ್.ಸುರೇಶ್ ಬಾಬು ಹೇಳಿದರು.

ತಾಲ್ಲೂಕು ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರು, ಅಸಂಘಟಿ
ಸಂಘದಿಂದ ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಗಿರಿಜಾ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ‘ಅಡುಗೆ ಕಾರ್ಮಿಕರ ಕರ್ನಾಟಕ ರಾಜ್ಯ ಆದೇಶ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 76 ವರ್ಷಗಳು ಕಳೆದರೂ ಅಡುಗೆ ಕಾರ್ಮಿಕರ ಬದುಕು ಶೋಚನೀಯವಾಗಿದೆ.
ಅಡುಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ರಾಜ್ಯದಲ್ಲಿ ಹೋಟೆಲ್‌, ಕಲ್ಯಾಣ ಮಂಟಪ ಮತ್ತಿತರೆಡೆ 10 ಲಕ್ಷಕ್ಕೂ ಹೆಚ್ಚು ಅಡುಗೆ ಕೆಲಸಗಾರರು, ಸಹಾಯಕರು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದಿಂದ ಸೌಲಭ್ಯ ವಂಚಿತರಾಗಿದ್ದಾರೆ. 15 ವರ್ಷದಿಂದ ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕರ ಕ್ಷೇಮಾಭಿವೃದ್ಧಿ ಯೂನಿಯನ್‌ ನಡೆಸಿದ ಹೋರಾಟದ ಫಲವಾಗಿ ಈ ವರ್ಗದ ಕಾರ್ಮಿಕರಿಗೆ ಅಸಂಘಟಿತ ಕಾರ್ಮಿಕರ ಸ್ಥಾನಮಾನ ನೀಡಿ ಸರ್ಕಾರ ಜೂನ್‌ 6ರಂದು ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಅಡುಗೆ ಕೆಲಸ ಮಾಡುವವರು ಒಗ್ಗಟ್ಟಾಗಿ ಸಂಘಟನೆಯ ಮೂಲಕ ತಮ್ಮ ನ್ಯಾಯಯುತ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದು ಪ್ರತಿಪಾದಿಸಿದರು.

ಅಡಿಗೆ ಕಾರ್ಮಿಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾದ, ಅಸಂಖ್ಯಾತ ಜನರಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಹಸಿವನ್ನು ನೀಗಿಸುವ ಅಡುಗೆ ಕೆಲಸದವರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರ ಮಕ್ಕಳ ವಿದ್ಯಾಭ್ಯಾಸ, ಚಿಕಿತ್ಸಾ ವೆಚ್ಚ, ಅಪಘಾತ ಪರಿಹಾರ ಮತ್ತು ಪಿಂಚಣಿ ಸೌಲಭ್ಯಗಳು ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದರು.
ಸಂಘಟನೆಯಿಂದ ಮಾತ್ರ ನಾವು ಹಕ್ಕುಗಳನ್ನು ಪಡೆಯಲು, ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಗಳು ಗಮನಹರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಘಟನೆಯನ್ನು ಬಲಗೊಳಿಸುತ್ತಿದ್ದು, ಎಲ್ಲ ಜಿಲ್ಲೆಗಳಲ್ಲಿ ಶಾಖೆಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಅಸಂಘಟಿತ ಕಾರ್ಮಿಕರ ಸ್ಥಾನಮಾನವನ್ನು ಅಡುಗೆ ಕೆಲಸಗಾರರಿಗೂ ಘೋಷಿಸಿದ್ದು, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವತಿಯಿಂದ ಸರ್ಕಾರದ ಗುರುತಿನ ಚೀಟಿ ವಿತರಿಸಲಾಗುವುದು .

ಎಲ್ಲಾ ಅಡಿಗೆ ಕಾರ್ಮಿಕರು ಕಡ್ಡಾಯವಾಗಿ ಪಡೆಯಬೇಕು,ಸರ್ಕಾರದ ಗುರುತಿನ ಚೀಟಿ ಪಡೆಯುದರಿಂದ ರಾಜ್ಯ ಸರ್ಕಾರದಿಂದ ಅಪಘಾತ ಮರಣ ಹೊಂದಿದರೆ 1ಲಕ್ಷ,ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದರೆ 1 ಲಕ್ಷ, ಸಹಜವಾಗಿ ಮರಣಹೊಂದಿದರೆ ಅಂತ್ಯಕ್ರಿಯೆ ವೆಚ್ಚಕ್ಕಾಗಿ 10,000 ಸಾವಿರ ಸಹಾಯ ಧನ ನೀಡಲಾಗುತ್ತದೆ ಎಂದು ಹೇಳಿದರು.ಮುಂದಿನ ವರ್ಷದಲ್ಲಿ ಕೋಲಾರದಲ್ಲಿ ಅಡಿಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರ ರಾಜ್ಯ ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಳ್ಳಲು ಮನವಿ ಮಾಡಿದರು. ಅಂದು ಸರ್ಕಾರದ ವತಿಯಿಂದ ಅಡಿಗೆ ಕಾರ್ಮಿಕರ ಗುರ್ತಿನ ಚೀಟಿ ನೀಡಲಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ರಾತ್ರಿ ಭೇಟಿ

ಈ ಸಂದರ್ಭದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಬಾಗೇಪಲ್ಲಿ ತಾಲ್ಲೂಕು ಅಸಂಘಟಿತ ಅಡಿಗೆ ಕೆಲಸಗಾರರು ಹಾಗೂ ಸಹಾಯಕ ಕಾರ್ಮಿಕರ ಟ್ರಸ್ಟ್ ಸಂಸ್ಥಾಪಕರು ಹಾಗೂ ಅಧ್ಯಕ್ಷ ದೇವರೆಡ್ಡಿಪಲ್ಲಿ ಡಿ.ಎನ್.ಶಿವಾರೆಡ್ಡಿ,ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜ್,ಶಿವಪ್ಪ ಉಪಾಧ್ಯಕ್ಷ, ನರಸಿಂಹಪ್ಪ ಖಜಾಂಚಿ, ಬೂದಲಿಪಲ್ಲಿ ಚೌಡರೆಡ್ಡಿ, ನಾಗಪ್ಪ ,ಮಂಜುನಾಥ್, ರವಿಚಂದ್ರರೆಡ್ಡಿ,ಶಂಕರಪ್ಪ, ಆನಂದ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...