ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಸೌಹಾರ್ದ ಸಾಮರಸ್ಯಕ್ಕೆ ಜಿಲ್ಲಾ ಮಟ್ಟದ ಸಮಾವೇಶ

Date:

ಬಾಗೇಪಲ್ಲಿ:-ದೇಶದಲ್ಲಿ ಕಾಂಗ್ರೆಸ್, ಬಿಜೆಪಿ ಅಧಿಕಾರ ಉಳಿಸಲು ದಲಿತರ, ಹಿಂದುಳಿದ, ಅಲ್ಪಸಂಖ್ಯಾತ ಜನರ ನಡುವೆ ಕೋಮುದ್ವೇಷ ಹರಡಿ, ವಿಭಜನೆ ಮಾಡುತ್ತಿವೆ. ಇದರ ವಿರುದ್ಧ ಜನ ಎಚ್ಚೆತ್ತುಕೊಳ್ಳಬೇಕು ಎಂದು ಸಿಪಿಎಂ ಮುಖಂಡ ಡಾ.ಅನಿಲ್‍ಕುಮಾರ್ ಹೇಳಿದರು. ಪಟ್ಟಣದಲ್ಲಿ ಸಿಪಿಐಎಂ ನ ಸುಂದರಯ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮುಸ್ಲಿಂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಸೌಹಾರ್ದ ಸಾಮರಸ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಹಿಂದುತ್ವದ ಹೆಸರಿನಲ್ಲಿ, ಆಮಿಷ, ಹಣ ಹಂಚಿಕೆ ಮೂಲಕ ಕಾಂಗ್ರೆಸ್, ಬಿಜೆಪಿ ಅಧಿಕಾರ ಪಡೆದು ನಂತರ ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ, ಇಂದಿಗೂ ಕೆಳವರ್ಗದ ಜನರಿಗೆ ನಿವೇಶನ, ಮನೆ ಇಲ್ಲ. ಅರಣ್ಯಭೂಮಿಗೆ ಸಾಗುವಳಿ ಚೀಟಿ ನೀಡಿಲ್ಲ. ಆರೋಗ್ಯ, ಶಿಕ್ಷಣ, ಉದ್ಯೋಗ ಸಿಗುತ್ತಿಲ್ಲ. ಹಿಂದುತ್ವದ ಹೆಸರಿನಲ್ಲಿ ಜಾತಿ, ಧರ್ಮಗಳ ನಡುವೆ ಕೋಮುದ್ವೇಷ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಅಶಾಂತಿ ಸೃಷ್ಟಿಸಿದವರು ತಪ್ಪಿಸಿಕೊಳ್ಳುತ್ತಾರೆ. ಕೂಲಿ, ಕಾರ್ಮಿಕರು ಬಲಿಯಾಗಿ ಜೈಲಿಗೆ ಹೋಗುತ್ತಾರೆ. ಅನೇಕ ಕುಟುಂಬಗಳು ಬಲಿಪಶು ಆಗಿವೆ. ಅಲ್ಪಸಂಖ್ಯಾತರು ಎಚ್ಚೆತ್ತುಕೊಳ್ಳಬೇಕು ಎಂದರು.

ಅಲ್ಪಸಂಖ್ಯಾತರು ಕೂಲಿಕೆಲಸ ಮಾಡುವ ಶ್ರಮಜೀವಿಗಳು. ಸರ್ಕಾರಗಳು ಸಮುದಾಯಗಳ ಏಳಿಗೆಗೆ ಕೋಟ್ಯಂತರ ಹಣ ಜಾರಿ ಮಾಡಲಾಗಿದೆ ಎಂದು ಜಾಹೀರಾತುಗಳಲ್ಲಿ ಪ್ರಕಟ ಮಾಡುತ್ತದೆ. ಆದರೆ ಇಂದಿಗೂ ಸಹ ಕಟ್ಟಕಡೆಯ ಪ್ರಜೆಗೆ ಸೌಲಭ್ಯ ಸಿಕ್ಕಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಹಿಂದುತ್ವದ ಮೂಲಕ ಜನರನ್ನು ಹುಬ್ಬೇರಿಸುವಂತೆ ಮಾಡಿದೆ. ಅಧಿಕಾರಕ್ಕೆ ಬರುವ ಮುನ್ನ ವಿದೇಶದಲ್ಲಿನ ಕಪ್ಪು ಹಣ ತಂದು ಖಾತೆಗೆ ₹15 ಲಕ್ಷ ಹಾಕುತ್ತೇನೆ. 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆ ಎಂದು ನರೇಂದ್ರಮೋದಿ ಭರವಸೆ ನೀಡಿದರು. ಆದರೆ ನರೇಂದ್ರಮೋದಿ ಪ್ರಧಾನಮಂತ್ರಿ ಆದ ನಂತರ ₹130 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅಲ್ಪಸಂಖ್ಯಾತರ, ದಲಿತರ, ಹಿಂದುಳಿದವರ ಮೇಲೆ ದಾಳಿ, ಹಲ್ಲೆ, ಹತ್ಯೆಗಳು ಹೆಚ್ಚಾಗಿವೆ. ಹಿಂದುತ್ವದ ಹೆಸರಿನಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುತ್ತಿವೆ. ಅಲ್ಪಸಂಖ್ಯಾತರು ಹಕ್ಕು ಪಡೆಯಲು ಸಂಘಟಿತರಾಗಬೇಕು ಎಂದರು.

ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕೋಟ್ಯಂತರ ಹಣ ವ್ಯಯ ಮಾಡಲಾಗಿದೆ ಎಂದು ಬಿಜೆಪಿ, ಕಾಂಗ್ರೆಸ್ ಸುಳ್ಳು ಹೇಳಿಕೊಂಡಿದೆ. ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ ಎಂದರು. ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಸಿಪಿಎಂ ಹೋರಾಟ ಮಾಡುತ್ತಿದೆ. ಭೂಮಿ, ಮನೆ, ನಿವೇಶನ ಕಲ್ಪಿಸಲು ಸಂಘಟಿತರಾಗಬೇಕು. ಸಂಘಟಿತರಾಗಿ ಹೋರಾಟಗಳ ಮೂಲಕ ಹಕ್ಕುಗಳನ್ನು ಪಡೆಯಬೇಕು ಎಂದರು.

ಇದನ್ನು ಓದಿದ್ದೀರಾ..? ನಷ್ಟ ಆದಂತಹ ರೈತರ ಬೆಳೆಗಳಿಗೆ ಪರಿಹಾರಕ್ಕೆ ಒತ್ತಾಯ

ಅಲ್ಪಸಂಖ್ಯಾತರ ಮುಖಂಡ ಷಫೀವುಲ್ಲಾ, ರಶೀದ್‍ಸಾಬ್, ಮೊಹಿದ್ದೀನ್, ಜಿ.ಮುಸ್ತಾಫ, ಇಮ್ರಾನ್, ರಫೀಕ್ ಅಹಮದ್, ನೆಟ್ಟುಕುಂಟಪಲ್ಲಿ ಜಹೀಗ್‌ಬೇಗ್, ಡಾ.ಮೌಲಾಷರೀಫ್, ಚಿಂತಾಮಣಿ ಬಾಬಾಜಾನ್, ಮೆಹಬೂಬ್, ರಫೀ, ಬಿ.ಎಚ್.ರಫೀಕ್, ಬಿ.ಎಚ್.ಸಾದಿಕ್, ತಬ್ರೇಜ್, ದಿಲಾನ್, ಮುಸ್ತಾಫ, ಸಿದ್ದಗಂಗಪ್ಪ, ಎಂ.ಎನ್.ರಘುರಾಮರೆಡ್ಡಿ, ಬಿಳ್ಳೂರು ನಾಗರಾಜ್, ಅಶ್ವತ್ಥಪ್ಪ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಹರೀಶ್, ಸೋಮಶೇಖರ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...