ಚಿಕ್ಕಬಳ್ಳಾಪುರ ಜಿಲ್ಲಾ ರಕ್ಷಣಾಧಿಕಾರಿಗಳ ತಂಡ ಇಂದು ಶಿಡ್ಲಘಟ್ಟ ನಗರದ ಅಂಜನಿ ಬಡಾವಣೆಯ ವಾರ್ಡ್ ನಂಬರ್ ಒಂದರಲ್ಲಿ ಮಂಜುನಾಥ್ ಎಂಬುವವರ ಜಾಗದಲ್ಲಿ ಶಿಡ್ಲಘಟ್ಟ ತಾಲೂಕಿನ 43 ವರ್ಷದ ವೆಂಕಟ ರಾಜಪ್ಪ ಎಂಬುವವರು ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದು ಆತನ ಮೇಲೆ ದಾಳಿ ನಡೆಸಿ ಖಾಲಿ ಮತ್ತು ಗ್ಯಾಸ್ ತುಂಬಿದ 24 ಸಿಲೆಂಡರ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ತಂಡ ಯಶಸ್ವಿಯಾಗಿದೆ.
ದಾಳಿಯಲ್ಲಿ ಒಂದು ಆಟೋವನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.
ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ಜೋರಾಗಿ ನಡೆಯುತ್ತಿದೆ.
ಇದನ್ನು ಓದಿದ್ದೀರಾ..? ನರಸಾಪುರದಲ್ಲಿ ಅಂಬೇಡ್ಕರ್ ವೃತ್ತ ಹೆಸರಿಡಲು ಕನ್ನಡ ಸೇನೆ ಒತ್ತಾಯ
ಇದರ ಬಗ್ಗೆ ಇಲ್ಲಿನ ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಗ್ಯಾಸ್ ರೀಫಿಲ್ಲಿಂಗ್ ದಂದೆ ನಡೆಸುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.





