ಇಂಜಿನಿಯರಿಂಗ್ ಕಾಲೇಜ್ ಕಾಮಗಾರಿ ಕೆಲಸ ನೋಡಿ ಮಾಜಿ ಶಾಸಕರಿಗೆ ಹೊಟ್ಟೆ ಉರಿಯುತ್ತದೆ

Date:

ಚಿಂತಾಮಣಿ: ಅಭಿವೃದ್ಧಿ ಕೆಲಸಗಳಿಗೆ ಕಿರಿ ಕಿರಿ ಮಾಡುವುದು ಅಡ್ಡಿಪಡಿಸುವುದು ಅವರದೇ ಆದಂತಹ ರೀತಿಯಲ್ಲಿ ವ್ಯಾಕರಣ ಮಾಡುವಂತಹದು ಅಭಿವೃದ್ಧಿ ಕೆಲಸಗಳು ಪರ್ಸೆಂಟೇಜ್ ಗಾಗಿ ಮಾಡುವುದಾಗಿ ನನ್ನ ಮೇಲೆ ಹೇಳುವದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ರವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಂದು ಚಿಂತಾಮಣಿ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಕ್ಕು ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀವು 10 ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದೀರಲ್ಲ,ಅಂದು ತಾವೆಲ್ಲ ಪರ್ಸೆಂಟೇಜ್ ಗಿನ ಅಭಿವೃದ್ಧಿ ಕೆಲಸಗಳು ಮಾಡಿದ್ದು,ನಮ್ಮ ಕುಟುಂಬ ಶಾಸಕ ಸ್ಥಾನವನ್ನು 1950 ರಿಂದ ನೋಡಿಕೊಂಡು ಬರುತ್ತಿದೆ,ನೆನ್ನೆ ಮೊನ್ನೆ ಬೆಂಗಳೂರಿಂದ ಬಂದವರು ನೀವು ನಿಮ್ಮಿಂದ ಯಾವ ರೀತಿ ಆಡಳಿತ ಮಾಡಬೇಕು ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಬೇಕೆಂದು ನಿಮ್ಮಿಂದ ಕಲಿಯುವ ಅವಶ್ಯಕತೆ ನನಗಿಲ್ಲ ಎಂದು ಮಾಜಿ ಶಾಸಕರ ವಿರುದ್ಧ ಗುಡಿದರು.

ಮಾಜಿ ಶಾಸಕರು ಬೆಂಗಳೂರು ಕಡೆಯಿಂದ ಚಿಂತಾಮಣಿಗೆ ಬರುವಾಗ ಇಂಜಿನಿಯರಿಂಗ್ ಕಾಲೇಜ್ ಅವರ ಕಣ್ಣಿಗೆ ಕಾಣಿಸುತ್ತದೆ,ಅದು ನೋಡಿದಾಗ ಅವರ ಹೊಟ್ಟೆ ಉರಿದು ಏನೆಲ್ಲಾ ಹೇಳುತ್ತಾರೆ,ನಾನು ಮಾಡುತ್ತಿರುವ ಕೆಲಸಗಳು ನೀವು ಮಾಡಿದ್ರೆ ಯಾರು ಬೇಡ ಅಂತ ಹೇಳುತ್ತಿದ್ರಾ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸ್ತೇನಹಳ್ಳಿ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಎಕರೆಯಲ್ಲಿ 250 ಮಾವಿನ ಗಿಡಗಳನ್ನು ನೆಟ್ಟು ಕೆಲ ಒಂದು ಮಾವಿನ ಗಿಡಕ್ಕೆ 25ಸಾವಿರ ಹಣವನ್ನು ಕೆಐಡಿಬಿಐಯಿಂದ ಪಡೆದವರು ಅವರ ಸಹಚರರೇ ಹೊರತು ನಾವಲ್ಲವೆಂಬುದನ್ನು ಮೊದಲು ತಿಳಿಯಬೇಕು.ಕೈಗಾರಿಕಾ ಪ್ರದೇಶದ ಅಧಿಸೂಚನೆಯಾದ ಮೇಲೆ ಕೆಲ ಅಧಿಕಾರಿಗಳೊಂದಿಗೆ ಶಾಮೀಲಾಗಿ ಅವರ ಕಣ್ಣ ಕೆಳಗೆ ನಡೆದಿರುವ ಅವ್ಯವಹಾರವಾಗಿದ್ದು ಅದನ್ನು ಅವರು ಮಾತನಾಡುವುದಿಲ್ಲವೆಂದರು.

ಮಾತನಾಡಿದ ಸಚಿವರ ದೊಡ್ಡ ಸಾಮರ್ಥ್ಯದಲ್ಲಿ ಶಾಶ್ವತವಾಗಿ ನೀರು ಹರಿಯುವಂತೆ ಮಾಡುವ ಸಲುವಾಗಿ ಹೆಚ್.ಎನ್ ವ್ಯಾಲಿ 120 ಕೆರೆ,ಕೆ.ಸಿವ್ಯಾಲಿ 50ಕ್ಕೂ ಹೆಚ್ಚು ಕೆರೆಗಳಿಗೆ ನೀರು ಒದಗಿಸುವ ಶಾಶ್ವತ ಪ್ರಯತ್ನವನ್ನು ಮಾಡಲಾಗುತ್ತಿದೆಯೆಂದರು.

ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವನೀರಿನ ಘಟಕಗಳನ್ನು ವಿವಿಧ ಯೋಜನೆಗಳ ಮೂಲಕ ಒದಗಿಸಲಾಗುತ್ತಿದ್ದು ಇದರಿಂದ ಶುದ್ದಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೂ ಒದಗಿಸುವ ತಾಲ್ಲೂಕ ನ್ನಾಗಿಸುವುದು ನನ್ನ ಧೈಯವಾಗಿದೆಯೆಂದರು.

ನಾನು ಶಾಸಕನಾಗಿ ಮಂತ್ರಿಯಾಗಿಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆಯನ್ನು ನೀಡುತ್ತಿದ್ದು ಕೇವಲ ಮಾತಿನ ಮೂಲಕ ಹೇಳುತ್ತಿಲ್ಲ ಬದಲಾಗಿ ಕಾರ್ಯ ರೂಪದಲ್ಲಿ ತಾವು ನೋಡಬಹುದಾಗಿದೆಯೆಂದು ನುಡಿದರು.

ಈ ಸಂದರ್ಭದಲ್ಲಿ ಸುಮಾರು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ..? ವಿರೋಧಿಗಳಿಗೆ ವಿದ್ಯಾಭ್ಯಾಸದ ಕೊರತೆಯಿಂದ ಇಲ್ಲಸಲ್ಲದ ಮಾತನಾಡುತ್ತಾರೆ

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್,ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ್,ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಸಚಿವರ ಬೆಂಬಲಿಗರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...