ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ: ಕೊತ್ತೂರು ಮಂಜುನಾಥ್

Date:

ಕೋಲಾರ: ದಾಸಶ್ರೇಷ್ಠ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಲ್ಲಾ ಜಾತಿ ಜನಾಂಗಗಳಿಗೆ ಬೇಕಾದವರು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಕಾರಂಜಿಕಟ್ಟೆಯಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವದ ಪ್ರಯುಕ್ತ ಪಲ್ಲಕ್ಕಿಗೆ ಚಾಲನೆ ಹಾಗೂ ಕುರುಬರ ಪವಾಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನಕದಾಸರ ಆದರ್ಶಗಳನ್ನು ಅವರ ತತ್ವಗಳನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಮಾನವತೆಯನ್ನು ಸಾರಿದ ಕನಕದಾಸರ ವಚನಗಳೇ ನಮ್ಮ ಬದುಕಿಗೆ ದಾರಿದೀಪವಾಗಬೇಕು ಎಂದರು.

ಇದನ್ನು ಓದಿದ್ದೀರಾ…? ಮೀನು ಹಿಡಿಯಲು ಹೋದ ಮಹಿಳೆ ವಿದ್ಯುತ್ ತಂತಿಗಳಿಗೆ ಬಲಿ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಕುರುಬ ಸಂಘದ ಮಾಜಿ ಅಧ್ಯಕ್ಷ ರಾಜಣ್ಣ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕುರಿಗಳ ರಮೇಶ್, ಮುನಿನಾರಾಯಣಪ್ಪ, ಆನಂದ್ ಕುಮಾರ್, ಮಂಜುನಾಥ್, ಪ್ರಕಾಶ್, ಗಾಯಿತ್ತಿ, ಮುನಿಯಪ್ಪ, ಪಾಲ್ಗುಣ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...