ಕೋಲಾರ: ದಾಸಶ್ರೇಷ್ಠ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಲ್ಲಾ ಜಾತಿ ಜನಾಂಗಗಳಿಗೆ ಬೇಕಾದವರು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ನಗರದ ಕಾರಂಜಿಕಟ್ಟೆಯಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವದ ಪ್ರಯುಕ್ತ ಪಲ್ಲಕ್ಕಿಗೆ ಚಾಲನೆ ಹಾಗೂ ಕುರುಬರ ಪವಾಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನಕದಾಸರ ಆದರ್ಶಗಳನ್ನು ಅವರ ತತ್ವಗಳನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಮಾನವತೆಯನ್ನು ಸಾರಿದ ಕನಕದಾಸರ ವಚನಗಳೇ ನಮ್ಮ ಬದುಕಿಗೆ ದಾರಿದೀಪವಾಗಬೇಕು ಎಂದರು.
ಇದನ್ನು ಓದಿದ್ದೀರಾ…? ಮೀನು ಹಿಡಿಯಲು ಹೋದ ಮಹಿಳೆ ವಿದ್ಯುತ್ ತಂತಿಗಳಿಗೆ ಬಲಿ
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಕುರುಬ ಸಂಘದ ಮಾಜಿ ಅಧ್ಯಕ್ಷ ರಾಜಣ್ಣ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕುರಿಗಳ ರಮೇಶ್, ಮುನಿನಾರಾಯಣಪ್ಪ, ಆನಂದ್ ಕುಮಾರ್, ಮಂಜುನಾಥ್, ಪ್ರಕಾಶ್, ಗಾಯಿತ್ತಿ, ಮುನಿಯಪ್ಪ, ಪಾಲ್ಗುಣ ಮುಂತಾದವರು ಇದ್ದರು.





