ಕೊಪ್ಪಳ | ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಚುನಾವಣಾಧಿಕಾರಿ ಅನುಮತಿ ಕಡ್ಡಾಯ

Date:

  • ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ
  • ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ

ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ ಮುದ್ರಿಸುವ ಮೊದಲು ಆಯಾ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಅವರ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಹೇಳಿದರು.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಕೊಪ್ಪಳ ಸೇರಿದಂತೆ ನಾನಾ ಕಡೆ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಒಂದು ಪ್ರತಿ ಮತ್ತು ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಆರ್‌ಓಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಮಾತನಾಡಿ, ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ. ಕರಪತ್ರ, ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು. ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಅನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಅಮಿನ್ ಅತ್ತಾರ ವಿವರಿಸಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ನಾನಾ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...