ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿ ಚಿಕಿತ್ಸೆ ವಿಳಂಬದ ಮಾಡಿದ ಆರೋಪ

Date:

ಕೋಲಾರ: ಸೀಮೆಹಸು ಗುದ್ದಿ ಕೈ ಮೂಳೆ ಮುರಿದುಕೊಂಡಿದ್ದ ವೃದ್ಧರೊಬ್ಬರ ಶಸ್ತ್ರಚಿಕಿತ್ಸೆಗೆ ನಗರದ ಎಸ್ಎನ್‌ಆರ್‌ ಜಿಲ್ಲಾಸ್ಪತ್ರೆಯ ವೈದ್ಯರು ₹ 15 ಸಾವಿರ ಲಂಚ ಕೇಳಿ ವಿಳಂಬ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ರೀತಿ ಆರೋಪ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಲವಾರು ಬಾರಿ ಶೇರ್‌ ಆಗಿದೆ. ತಂದೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ವಾರ ಕಳೆದರೂ ಚಿಕಿತ್ಸೆ ದೊರೆತಿಲ್ಲ ಎಂದು ನಾಗೇಶ್ ಎಂಬುವರು ವಿದೇಶದಿಂದ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣಕ್ಕೆ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಚಿಕ್ಕಮುನಿಯಪ್ಪ ಎಂಬುವರು ಎಡಗೈನ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಮೊದಲು ಚಿಂತಾಮಣಿ ಆಸ್ಪತ್ರೆಯಲ್ಲಿ ತೋರಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಸಮೀಪದ ಕೋಲಾರ ಜಿಲ್ಲಾಸ್ಪತ್ರೆಗೆ ವೈದ್ಯರು ಶಿಫಾರಸು ಮಾಡಿದ್ದಾರೆ. ಅದರಂತೆ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಗೆ ದಾಖಲಾಗಿ ಆರು ದಿನ ಕಳೆದರೂ ವೈದ್ಯರು ಚಿಕ್ಕಮುನಿಯಪ್ಪ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿಲ್ಲ. ಬದಲಾಗಿ ವಿವಿಧ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ಕುಟುಂಬದವರು ರೋಸಿ ಹೋಗಿದ್ದಾರೆ.

ಚಿಕ್ಕಮುನಿಯಪ್ಪ ಅವರ ಪುತ್ರ ನಾಗೇಶ್‌ ಜರ್ಮನಿಯಲ್ಲಿದ್ದು, ಅಲ್ಲಿಂದಲೇ ಜಾಣತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ತಂದೆಗೆ 75 ವರ್ಷ ದಾಟಿದ್ದು, ಸೆ.17ರಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಆರು ದಿನ ಕಳೆದರೂ ಶಸ್ತ್ರಚಿಕಿತ್ಸೆ ಮಾಡಿಲ್ಲ. ತಾಯಿ ಜೊತೆಯಲ್ಲಿದ್ದು, ಸಂಬಂಧಿಕರು ಬಂದು ನೋಡಿಕೊಂಡು ಹೋಗುತ್ತಿ‌ದ್ದಾರೆ. ಹಣ ಕೊಟ್ಟಿಲ್ಲವೆಂದು ನನ್ನ ತಂದೆಗೆ ವೈದ್ಯರು ಚಿಕಿತ್ಸೆ ನೀಡಿಲ್ಲ, ಶಸ್ತ್ರಚಿಕಿತ್ಸೆ ನಡೆಸಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲೂ ದುಡ್ಡುಕೊಟ್ಟರೆ ಮಾತ್ರ ಕೆಲಸ ನಡೆಯುತ್ತದೆ, ಔಷಧಿ ಸಿಗುತ್ತದೆ, ಚೆನ್ನಾಗಿ ನೋಡಿಕೊಳ್ಳುತ್ತಾರೆ. ಪಕ್ಕದ ರೋಗಿಯೊಬ್ಬರು ಹಣ ನೀಡಿದ್ದಾರೆ ಎಂದು ಬೇಗನೇ ಶಸ್ತ್ರಚಿಕಿತ್ಸೆ ಮಾಡಿ ಕಳಿಸಿದ್ದಾರೆ’ ಎಂದು ದೂರಿದ್ದಾರೆ.

ರೋಗಿ ಬಳಿ ಯಾರೂ ಹಣ ಕೇಳಿಲ್ಲ

ವಿಡಿಯೊ ಜಾಲ ತಾಣದಲ್ಲಿ ಹರಿದಾಡುತ್ತಿದ್ದಂತೆ ಕೋಲಾರ ಜಿಲ್ಲಾಸ್ಪತ್ರೆ ವೈದ್ಯ ಡಾ.ಪ್ರದೀಪ್ ಎಂಬುವರು ಚಿಕ್ಕಮುನಿಯಪ್ಪ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಚಿಕ್ಕಮುನಿಯಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ನಾವು ಆಸ್ಪತ್ರೆಗೆ ಬಂದು 7 ದಿನ ಆಯಿತು. ನಿತ್ಯ ವೈದ್ಯರು ಬಂದು ಕೇಳುತ್ತಿದ್ದರು. ಆದರೆ, ಇವತ್ತು (ಮಂಗಳವಾರ) ಸರ್ಜರಿ ಮಾಡಿದ್ದಾರೆ. ಚಿಕಿತ್ಸೆ ಸಿಕ್ಕಿದ್ದು ತಡವಾಯಿತು’ ಎಂದು ಪತ್ನಿ ಲಕ್ಷ್ಮಮ್ಮ ಹೇಳಿದರು.

ನಾನು ಈ ಪ್ರಕರಣದ ಸಂಬಂಧ ವೈದ್ಯರಿಗೆ ನೋಟಿಸ್‌ ನೀಡಿ ವಿವರಣೆ ಕೋರಿದ್ದೆ. ವ್ಯಕ್ತಿಗೆ ವಯಸ್ಸಾಗಿದ್ದರಿಂದ ಕೆಲ ಪ್ರಕ್ರಿಯೆ ನಡೆಸಿ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಕೆಲ ಪರೀಕ್ಷೆ, ತಪಾಸಣೆಗೆ ಒಳಗಾಗಬೇಕಿತ್ತು. ವಿಳಂಬವಾಗಿದ್ದನ್ನೇ ಬೇರೆ ರೀತಿ ಅರ್ಥ ಮಾಡಿಕೊಂಡು ಆರೋಪ ಮಾಡಿದ್ದಾರೆ. ಸಂವಹನ ಕೊರತೆ ಉಂಟಾಗಿದೆ. ರೋಗಿ ಬಳಿ ಯಾವ ವೈದ್ಯರೂ ಹಣ ಕೇಳಿಲ್ಲ. ಈಗ ಎಲ್ಲವೂ ಸರಿ ಹೋಗಿದ್ದು, ವ್ಯಕ್ತಿಗೆ ಶಸ್ತ್ರಚಿಕಿತ್ಸೆಗೆ ಮಾಡಲಾಗಿದೆ ಎಂದು
ಜಿಲ್ಲಾ ಶಸ್ತ್ರಚಿಕಿತ್ಸಕ, ಕೋಲಾರ ಜಿಲ್ಲಾಸ್ಪತ್ರೆ ಡಾ.ಜಗದೀಶ್‌ ತಿಳಿಸಿದ್ದಾರೆ.

‘ವೈದ್ಯರಿಗೆ, ಅನಸ್ತೇಸಿಯಾ ನೀಡುವವರಿಗೆ, ಉಳಿದವರಿಗೆ ಎಲ್ಲಾ ಸೇರಿ ಒಟ್ಟು ₹ 15 ಸಾವಿರ ನೀಡಿದರೆ ಎಲ್ಲಾ ರೀತಿಯ ಚಿಕಿತ್ಸೆ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಿ ಕಳಿಸುತ್ತಾರೆ ಎಂಬುದು ಗೊತ್ತಾಯಿತು. ಕರ್ನಾಟಕದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇದೇ ರೀತಿ ನಡೆಯುತ್ತಿದೆಯೇ? ಎಲ್ಲಾ ಆಸ್ಪತ್ರೆಗಳಲ್ಲಿ ಲಂಚ ಕೊಡಬೇಕೇ? ದುಡ್ಡು ಕೊಟ್ಟರೆ ಮಾತ್ರ ಚೆನ್ನಾಗಿ ನೋಡಿಕೊಳ್ಳುತ್ತಾರೆಯೇ? ಬಡವರು ಯಾವ ಆಸ್ಪತ್ರೆಗೆ ಹೋಗಬೇಕು?ಶಾಸಕರು, ಸಂಸದರು ಏನು ಮಾಡುತ್ತಿದ್ದಾರೆ’ ಎಂದು ನಾಗೇಶ್‌ ಎಂಬುವರು ವಿಡಿಯೊ ಮೂಲಕ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಡಿಸ್ಕವರಿ ವಿಲೇಜ್‌ನಲ್ಲಿ ಪೌರಕಾರ್ಮಿಕರ ದಿನಾಚರಣೆ ಆಯೋಜಿಸಿದ ನಗರಸಭೆ

ಜರ್ಮನಿಯಿಂದ ವಿಡಿಯೊ ಮಾಡಿದ ಪುತ್ರ ತಂದೆ ಚಿಕ್ಕಮುನಿಯಪ್ಪ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲು ಕೋಲಾರ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿದ್ದಾರೆ ಎನ್ನಲಾದ ವಿಚಾರ ತಿಳಿದ ಅವರ ಪುತ್ರ ಜರ್ಮಿನಿಯ ಬರ್ಲಿನ್‌ನಿಂದ ವಿಡಿಯೊ ಮಾಡಿ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಫೇಸ್‌ಬುಕ್‌ನಲ್ಲಿ ಹಲವರು ಲೈಕ್‌, ಕಮೆಂಟ್‌ ಮೂಲಕ ಆಸ್ಪತ್ರೆಯ ಕ್ರಮವನ್ನು ಖಂಡಿಸಿದ್ದಾರೆ. ಈ ವಿಡಿಯೊ ಸಾವಿರಕ್ಕೂ ಅಧಿಕ ಶೇರ್‌ ಆಗಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...