ಕ್ರಿಸ್‌ಮಸ್‌ ಸಂಭ್ರಮ: ಆಚರಣೆಗೆ ಸಕಲ ಸಿದ್ಧತೆ

Date:

ಬಾಗೇಪಲ್ಲಿ:-ವಿಶ್ವಕ್ಕೆ ಶಾಂತಿ, ಪ್ರೀತಿ, ವಿಶ್ವಾಸ, ಕರುಣೆ, ಪರೋಪಕಾರದ ಸಂದೇಶವ ಸಾರಿದ ಯೇಸುಕ್ರಿಸ್ತನ ಜನ್ಮ ದಿನವಾದ ಗುರುವಾರ ಕ್ರಿಸ್ಮಸ್ ಅನ್ನು ಸಡಗರ, ಸಂಭ್ರಮದಿಂದ ಆಚರಿಸಲು ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಚರ್ಚ್‌ಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ.

ಕ್ರಿಸ್ಮಸ್ ಹಬ್ಬದ ಸಡಗರವು ಪಟ್ಟಣವನ್ನು ಆವರಿಸುತ್ತಿದೆ. ಸುತ್ತಮುತ್ತಲಿನ ಚರ್ಚ್‌ಗಳು ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಕ್ರೈಸ್ತ ಧರ್ಮೀಯರೂ ಮಾತ್ರವಲ್ಲದೇ ಸಾರ್ವಜನಿಕರ ಮನಸೆಳೆಯುತ್ತಿದೆ.

ಬಾಗೇಪಲ್ಲಿನಲ್ಲಿ ಇರುವ ಕ್ಯಾಥೋಲಿಕ್ ಚರ್ಚ್, ನ್ಯಾಷನಲ್ ಕಾಲೇಜು ಮುಂಭಾಗದ ಹೊಸ ಜೀವನ ಚರ್ಚ
ಪಾತ ಬಾಗೇಪಲ್ಲಿ ರಸ್ತೆಯಲಗಲಿರುವ ಚರ್ಚ ಕೊಂಡರೆಡ್ಡಿ ಹಳ್ಳಿ ಚರ್ಚ ಹಾಗೂ ಇತರೆ
ಕ್ರೈಸ್ತರು ಹಬ್ಬದ ಆಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಹಬ್ಬದ ಆಗಮನಕ್ಕೆ ಕಾತರರಾಗಿದ್ದಾರೆ.

ಹಬ್ಬಕ್ಕೆ ಸ್ವಾಗತ ಬ್ಯಾನರ್‌ಗಳು, ಬಣ್ಣಬಣ್ಣದ ಬಾವುಟಗಳು ರಾರಾಜಿಸಲು ಸಿದ್ಧವಾಗಿವೆ. ಚರ್ಚ್ ಆವರಣದಲ್ಲಿ ಬಾಲ ಯೇಸುವನ್ನು ಸ್ವಾಗತಿಸುವ ಗೋದಲಿಗಳನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿದೆ. ಬಾಲ ಯೇಸುವಿನ ಹಾಗೂ ಮಾತೆ ಮೇರಿಯ ಬೊಂಬೆಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಕ್ರಿಸ್ಮಸ್ ಮರಕ್ಕೆ ಅಲಂಕಾರ ಮಾಡಲಾಗಿದೆ. ಕ್ರೈಸ್ತರು ತಮ್ಮ ಮನೆಗಳ ಮುಂದೆ ನಕ್ಷತ್ರ ದೀಪ, ಗೋದಲಿ ಸ್ಥಾಪಿಸಿ ಹಬ್ಬವನ್ನು ಸ್ವಾಗತಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ..? ಕೇಂದ್ರದ ವಿರುದ್ಧ ಹಳ್ಳಿಗಳಲ್ಲಿ‌ ಆಂದೋಲನ ನಡೆಯಲಿ: ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಕ್ರಿಸ್‌ಮಸ್‌ ಪ್ರಾರ್ಥನೆ ನಂತರ ಹಂಚಲು ಬೃಹತ್ ಕೇಕ್ ವ್ಯವಸ್ಥೆ ಮಾಡಲಾಗಿದೆ. ಬುಧವಾರ ತಡರಾತ್ರಿವರೆಗೆ ಸಂಜೆಯಿಂದ ಕ್ರೈಸ್ತ ಸಮುದಾಯದವರ ಮನೆಗಳಲ್ಲಿ ಭಜನೆಗಳನ್ನು ಹಾಡಲು ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಸಮುದಾಯದವರು ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...