ಕೋಲಾರ: ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪ್ರಶಸ್ತಿ ಗಳಿಸುವುದು ಮುಖ್ಯವಲ್ಲ ಭಾಗವಹಿಸಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಪರಿಶ್ರಮ ಮತ್ತು ಉತ್ಸಾಹದಿಂದ ಪಾಲ್ಗೊಂಡು ಯಶಸ್ಸು ಗಳಿಸುವಂತಾಗಬೇಕು ಎಂದು ಕ್ಷೇತ್ರ ಶಿಕ್ಷಾಧಿಕಾರಿ ಹಾಗೂ ತಾಲೂಕು ಮಟ್ಟದ ಕ್ರೀಡಾ ಸಮಿತಿ ಅಧ್ಯಕ್ಷೆ ಮಧುಮಾಲತಿ ಪಡುವಣೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಮಿನಿ ಕ್ರೀಡಾಂಗಣದ ಬಾಸ್ಕೆಟ್ ಬಾಲ್ ಆಟದ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ 2025-26 ನೇ ಸಾಲಿನ 14 ಮತ್ತು17 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಫ್ರೌಢಶಾಲಾ ವಿಧ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಪ್ರತಿಯೊಬ್ಬರಿಗೂ ಗುರಿ ಮುಖ್ಯ ಎಲ್ಲರೂ ಸ್ಪರ್ಧಾತ್ಮಕ ಮನೋಭಾವದಿಂದ ಆಡಿದಾಗ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ.
ಪ್ರತಿಯೊಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ದಿಯಾಗುತ್ತದೆ ಕ್ರೀಡಾಕೂಟದಲ್ಲಿ ಯಶಸ್ಸು ಗಳಿಸಿದರೆ ವಿಧ್ಯಾಭ್ಯಾಸ ಮತ್ತು ಉದ್ಯೋಗ ಅಂತಹ ಮೀಸಲಾತಿಯ ಮೂಲಕ ಅವಕಾಶಗಳನ್ನು ಪಡೆಯಬಹುದಾಗಿದೆ ಹೋಬಳಿಯಿಂದ ತಾಲೂಕು ಜಿಲ್ಲೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣದ ಪರಿವೀಕ್ಷಕ ಹಾಗೂ ತಾಲೂಕು ಮಟ್ಟದ ಕ್ರೀಡಾ ಸಮಿತಿ ಕಾರ್ಯದರ್ಶಿ ಎಸ್ ಚೌಡಪ್ಪ ಸ್ವಾಗತಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಕ್ರೀಡಾಕೂಟವು ಮುಖ್ಯವಾಗುತ್ತದೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವಾಗ ತೀರ್ಪುಗಾರರ ತೀರ್ಪಿಗೆ ಎಲ್ಲರೂ ಒಪ್ಪಿ ಕಲಿಕೆಯಿಂದ ಸಿಗುವ ಶಿಕ್ಷಣ ಎಲ್ಲರಿಗೂ ಮಾದರಿಯಾಗಬೇಕು ಎಂದರು.
ಇದನ್ನು ಓದಿದ್ದೀರಾ..?ಮಿಟ್ಟೇಮರಿ ಪುವಾಡಮ್ಮ ಕೆರೆ ಕೋಡಿ:ಗ್ರಾಮ ಪಂಚಾಯತಿ ವತಿಯಿಂದ ಗಂಗೆ ಪೂಜೆ ಹಾಗೂ ಬಾಗಿನ ಸಮರ್ಪಣೆ
ಕ್ರೀಡಾಕೂಟದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ಸಿ ಕೇಂದ್ರ ರಾಧಮ್ಮ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಎಸ್ ಶಿವಕುಮಾರ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಮುರಳಿ ಮೋಹನ್, ತಾಲೂಕು ಅಧ್ಯಕ್ಷ ಆರ್.ನಾಗರಾಜ್, ವಿವಿಧ ಶಿಕ್ಷಣ ಸಂಘಟನೆಗಳ ಮುಖಂಡರಾದ ರಮೇಶ್ ಗೌಡ, ಎ.ಸದಾನಂದ, ಹೆಚ್ ಶಿವಕುಮಾರ್, ಸತೀಶ್ ಕುಮಾರ್, ಸಂತೋಷ್ ಕುಮಾರ್, ಮುನಿಸ್ವಾಮಿ, ನಾರಾಯಣಸ್ವಾಮಿ, ಅಂಜನೇಯ, ಜಾವೀದ್, ಶ್ರೀನಿವಾಸ್ ಮುಂತಾದವರು ಇದ್ದರು.





