ಕೋಲಾರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಯಾವುದೇ ಕಾರಣದಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರ ಬಂದು ಎರಡು ವರ್ಷಗಳಾಗಿದೆ ಅಂದಿನಿಂದಲೂ ಯೋಜನೆಗಳು ಜಾರಿಯಾಗಿದೆ ಇನ್ನೂ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದರೆ ಅಧಿಕಾರಿಗಳು ಸೇರಿದಂತೆ ಸಮಿತಿ ಅಧ್ಯಕ್ಷರು ಸದಸ್ಯರಿಗೆ ಅವಮಾನವಾದಂತೆ ಕೂಡಲೇ ಫಲಾನುಭವಿಗಳಿಗೆ ಉಳಿದ ಅವಧಿಯಲ್ಲಿ ತಲುಪುವಂತೆ ಮಾಡಬೇಕು ಎಂದರು
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನಮಟ್ಟವನ್ನು ಸುಧಾರಿಸುತ್ತಿವೆ. ಬೇರೆ ರಾಜ್ಯಗಳಲ್ಲಿ ಪ್ರಶಂಸೆಗೆ ಪಾತ್ರವಾಗಿವೆ ಇದೇ ಮಾದರಿಯಲ್ಲಿ ಸಹ ಬೇರೆ ರಾಜ್ಯಗಳಲ್ಲಿ ಜಾರಿ ಮಾಡಲು ಮುಂದಾಗಿದೆ ಯುವನಿಧಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲೇಜು, ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಮಾಹಿತಿ ನೀಡಲು ಶಿಬಿರಗಳನ್ನು ಆಯೋಜಿಸಬೇಕು ಪ್ರತಿಯೊಂದು ಪಡಿತರ ವಿತರಣಾ ಕೇಂದ್ರದಲ್ಲಿ ಕಡ್ಡಾಯವಾಗಿ ಸೂಚನಾ ಫಲಕ ಪ್ರದರ್ಶನ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸದಸ್ಯರು ಮಾತನಾಡಿ ಪಡಿತರ ಅಂಗಡಿಗಳು ಹಣ ಪಡೆಯುವುದು ಕಡಿಮೆ ಅಕ್ಕಿ ರಾಗಿ ವಿತರಣೆ ಸೇರಿದಂತೆ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಅಗೌರವ ತರುವ ನಿಟ್ಟಿನಲ್ಲಿ ದೂರುಗಳು ಬಂದಿವೆ ಕೂಡಲೇ ಅಂತಹವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಿದರು.
ಕೋಲಾರ ತಾಲೂಕಿನಲ್ಲಿ ಯೋಜನೆ ಪ್ರಾರಂಭದಿಂದ ಯುವನಿಧಿಯಲ್ಲಿ ಸುಮಾರು 1227 ಫಲಾನುಭವಿ ಗಳಿಗೆ 5.16 ಕೋಟಿ ಹಣ ಬಿಡುಗಡೆ ಮಾಡಲಾಗಿದೆ, ಗೃಹಲಕ್ಷ್ಮೀ ಯೋಜನೆಯಲ್ಲಿ 80234 ಫಲಾನುಭವಿಗಳಿಗೆ 340 ಕೋಟಿ, ಗೃಹ ಜ್ಯೋತಿಯಲ್ಲಿ 1.9 ಲಕ್ಷ ಫಲಾನುಭವಿಗಳಿಗೆ 83 ಕೋಟಿ ಶಕ್ತಿ ಯೋಜನೆಯಲ್ಲಿ ತಿಂಗಳಿಗೆ 13 ಲಕ್ಷ ಪ್ರಯಾಣಿಕರು ಸೌಲಭ್ಯ ಬಳಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದನ್ನು ಓದಿದ್ದೀರಾ..? ೧.೫೦ ಲಕ್ಷ ಬಹುಮಾನ ಗೆದ್ದು ಬೀಗಿದ ತಮಿಳುನಾಡು, ಲಕ್ನೋ, ಪುಣೆ ತಂಡಗಳು
ಸಭೆಯಲ್ಲಿ ತಾಪಂ ಇಒ ಮಂಜುನಾಥ್ ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸಮಿತಿ ಸದಸ್ಯರಾದ ನದಂಬಳ್ಳಿ ವಿಜಯಕುಮಾರ್, ನವೀನ್, ಭರತ್, ವಿನೋದ್, ಅಯೂಬ್ ಖಾನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು





