ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪುರಸಭೆಯ ಮಾಜಿ ಸದಸ್ಯ ಡಾ. ಎಂ.ಎಸ್.ನೂರ್ ಉಲ್ಲಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಕಲೀಮ್ ಉಲ್ಲಾ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಭಾಗ್ಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರ ಶಿಫಾರಸಿನ ಮೇರೆಗೆ ಪುರಸಭೆಯ ಮಾಜಿ ಸದಸ್ಯ ಡಾ. ಎಂ.ಎಸ್.ನೂರ್ ಉಲ್ಲಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಹೊಸ ಜವಾಬ್ದಾರಿ ನೀಡಲಾಗಿದೆ.
ಭಾಗ್ಯನಗರ ವಿಧಾನಸಭಾ ಕ್ಷೇತ್ರವು ಸಹಿತ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಪಕ್ಷದ ತತ್ವ ಸಿದ್ಧಾಂತಗಳ ಅನ್ವಯ ಪಕ್ಷದ ಹಿರಿಯ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶ ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.
ಇದನ್ನು ಓದಿದ್ದೀರಾ..? ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ
ನೂತನ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ನೂರ್ ಉಲ್ಲಾ ಮತ್ತು ಕಾಂಗ್ರೆಸ್ ಮುಖಂಡರು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರನ್ನು ಭೇಟೆ ಮಾಡಿ ಅಭಿನಂದಿಸಿದ್ದಾರೆ.





