ಚೇತನ್ ಅಹಿಂಸಾ ಬಂಧನ: ಲಿಂಗಾಯತ ಮಹಾಸಭೆ ಮೌನವೇಕೆ?

Date:

  • ಜಾಗತಿಕ ಲಿಂಗಾಯತ ಮಹಾಸಭೆಗೆ ಸ್ಪಷ್ಟ ರಾಜಕೀಯ ನಿಲುವು ಏಕಿಲ್ಲ?
  • ಇಲ್ಲದಿರುವುದರಿಂದಲೇ ಅದು ಬಲಾಢ್ಯ ಪಕ್ಷದ ಬಾಲಂಗೋಚಿಯಾಗಿದೆ

ಲಿಂಗಾಯತರ ಪ್ರಾತಿನಿಧಿಕ ಸಂಸ್ಥೆಯೆಂದು ಬೀಗುವ ಜಾಗತಿಕ ಲಿಂಗಾಯತ ಮಹಾಸಭೆಯು ತನ್ನದೇ ಸಮುದಾಯದ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರ ಬಂಧನ ಕುರಿತು ವಹಿಸಿರುವ ಮೌನದ ಕುರಿತು ಪ್ರಶ್ನೆಗಳೆದ್ದಿವೆ.

ಅಖಿಲ ಭಾರತ ವೀರಶೈವ ಮಹಾಸಭೆಯ ಧಾರ್ಮಿಕ ನಿಲುವು ನಿಚ್ಚಳವಿಲ್ಲದಿದ್ದರೂ, ಅದರ ರಾಜಕೀಯ ನಿಲುವು ಸ್ಪಷ್ಟವಾಗಿದೆ. ಆದರೆ ಜಾಗತಿಕ ಲಿಂಗಾಯತ ಮಹಾಸಭೆಗೆ ಒಂದು ಸ್ಪಷ್ಟವಾದ ರಾಜಕೀಯ ನಿಲುವೇ ಇಲ್ಲ. ಹಾಗಾಗಿಯೇ ಈ ಸಂಘಟನೆಯ ಕೆಲ ಮುಖಂಡರು ಸಾರ್ವಜನಿಕವಾಗಿಯೇ ಕೇಸರಿ ಶಾಲು ಧರಿಸಿ, ಬಿಜೆಪಿ ಟಿಕೆಟಿಗಾಗಿ ಸಂಘಪರಿವಾರಕ್ಕೆ ಕಾಲಿಟ್ಟಿದ್ದಾರೆ ಎಂದು ಲಿಂಗಾಯತ ಹೋರಾಟಗಾರ ಸಿದ್ದಪ್ಪ ಮೂಲಗೆ ಟೀಕಿಸಿದ್ದಾರೆ.

ಅದು ಯಾವುದೇ ಸಂಘಟನೆಯಾಗಿರಲಿ ಅದಕ್ಕೊಂದು ಸ್ಪಷ್ಟ ರಾಜಕೀಯ ನಿಲುವು ಇರಲಿಲ್ಲವೆಂದರೆ ಅದು ಬಲಾಢ್ಯ ಪಕ್ಷದ ಬಾಲಂಗೋಚಿಯಾಗಿದೆ ಎಂದರ್ಥ. ರಾಜಕೀಯ ನಿಲುವೇ ನಮ್ಮ ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಆರ್ಥಿಕ ನಿಲುವನ್ನು ನಿರ್ಧರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹನ್ನೆರಡನೆಯ ಶತಮಾನದಲ್ಲಿ ಸಮಾನತೆಯ ಕನಸು ಕಂಡಿದ್ದ ಬಸವಾದಿಗಳ ಹತ್ಯಾಕಾಂಡ ನಡೆದದ್ದು ಅವು ರಾಜಕೀಯ ಹತ್ಯೆಗಳಲ್ಲವೇ? ಎಂ ಎಂ ಕಲಬುರ್ಗಿಯವರದು ರಾಜಕೀಯ ಹತ್ಯೆಯಲ್ಲವೇ? ಲಿಂಗಾಯತರು ಧಾರ್ಮಿಕ ಅಲ್ಪಸಂಖ್ಯಾತರು. ಹಾಗಾಗಿ ಅವರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಬೇಕೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದ್ದು ರಾಜಕೀಯ ನಿರ್ಧಾರ ಆಗಿರಲಿಲ್ಲವೇ?

ಒಂದು ಚುನಾಯಿತ ಸರ್ಕಾರದ ಕ್ಯಾಬಿನೆಟ್ ನಿಂದ ಹೋಗಿರುವ ಅರ್ಜಿಯನ್ನು ಕನಿಷ್ಠ ಸಂಸತ್ತಿನಲ್ಲಿಟ್ಟು ಚರ್ಚೆಯೂ ನಡಸದೆ ಅರ್ಜಿಯನ್ನು ತಿರಸ್ಕರಿಸಿದ್ದು/ ಅರ್ಜಿಯನ್ನು ವಾಪಸ್ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದು ಅದು ಬಿಜೆಪಿಯ ರಾಜಕೀಯ ನಿಲುವು ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಬದುಕಿನ ಹಾಗೂ ದೇಶದ ಎಲ್ಲ ಆಗುಹೋಗುಗಳನ್ನು ನಿರ್ಧರಿಸುವುದು ರಾಜಕೀಯವೇ. ಈ ದೇಶದಲ್ಲಿ ಕೋಮುವಾದ ಬಾನೆತ್ತರಕ್ಕೆ ಬೆಳೆದದ್ದು, ಇಲ್ಲಿ ಬಡತನ ಹಾಸುಹೊಕ್ಕಾಗಿ ಹರಡಿದ್ದು, ಬಡಜನತೆಗೆ ಗುಣಮಟ್ಟದ ಶಿಕ್ಷಣ ಹಾಗೂ ಆರೋಗ್ಯ ಗಗನಕುಸುಮ ಆಗಿದ್ದರ ಹಿಂದೆ ನಿರ್ದಿಷ್ಟ ರಾಜಕಾರಣವಿದೆ. ಯುದ್ಧಕ್ಕೆ ಹೊರಟಾಗ ಶತ್ರುಗಳನ್ನು ಗುರುತಿಸಲು ಸೋತರೆ ನಾವು ಬೀಸಿದ ಕತ್ತಿಗೆ ನಾವೇ ಬಲಿಯಾಗುವ ಅಪಾಯವಿರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಚೇತನ್ ಅಹಿಂಸಾ ಅವರ ಬಿಡುಗಡೆಗೆ ವೈಯಕ್ತಿಕ ನೆಲೆಯಲ್ಲಿ ತಾವು ಎಲ್ಲ ಪ್ರಯತ್ನಗಳನ್ನು ನಡೆಸಿರುವುದಾಗಿ ಜಾಗತಿಕ ಲಿಂಗಾಯತ ಮಹಾಸಭೆಯ ಮುಂದಾಳುಗಳಲ್ಲಿ ಒಬ್ಬರಾದ ಜಿ.ಬಿ.ಪಾಟೀಲ್ ಅವರು ‘ಈ ದಿನ’ಕ್ಕೆ ತಿಳಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...