ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ: ಕೊತ್ತೂರು ಮಂಜುನಾಥ್,

Date:

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ನಗರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸ‌ ಸಂಗ್ರಹಿಸುತ್ತಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶ ಶುದ್ಧ ಮಾಡುತ್ತಾರೆ. ಅವರು ಮಾಡುವಷ್ಟು ಶುದ್ಧವಾದ ಕೆಲಸ ಬೇರೆ ಯಾರೂ ಮಾಡಲ್ಲ ಎಂದರು.

ಪೌರಕಾರ್ಮಿಕರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ‌ಮಾಡಿಸಿಕೊಳ್ಳಬೇಕು. ನಗರಸಭೆಯಿಂದ ಆರೋಗ್ಯ ‌ಶಿಬಿರ ಹಮ್ಮಿಕೊಳ್ಳಬೇಕು‌ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಪೌರಕಾರ್ಮಿಕರ ಪರ ಇರುತ್ತೇವೆ. ಪೌರಕಾರ್ಮಿಕರನ್ನು ಕಾಯಂ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಕೂಡ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರೂ ಕಸವನ್ನು ರಸ್ತೆಯಲ್ಲಿ ಎಸೆಯಬಾರದು. ಮನೆಯ ಬಳಿ ಬರುವ ಗಾಡಿಗೆ‌ ನೀಡಬೇಕು. ಎಲ್ಲೆಂದರಲ್ಲಿ ‌ಕಸ‌ ಹಾಕುವವರ ಮೇಲೆ ಕಣ್ಣಿಡಲು ಒಂದು ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನೂರು ಜನ ನೂರು ರೀತಿ ಮಾತನಾಡುತ್ತಾರೆ. ಆದರೆ, ನಾನು ಅದಕ್ಕೆಲ್ಲಾ ‌ಕೇರ್ ಮಾಡಲ್ಲ. ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಕುಡಾದಿಂದ‌ ನಗರದಲ್ಲಿ ಎರಡು ಸರ್ಕಲ್ ಅಭಿವೃದ್ಧಿ ಮಾಡಲಾಗುವುದು. ಶ್ರೀನಿವಾಸಪುರದ ರಸ್ತೆಯ ಬಂಬೂ ಬಜಾರ್ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. ಎಪಿಎಂಸಿ ಬಳಿ ಮಾಲೂರು ರಸ್ತೆಯಲ್ಲಿ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. 4 ಕೋಟಿ ವೆಚ್ಚದಲ್ಲಿ ಕೋಡಿಕಣ್ಣೂರು ‌ಕೆರೆ‌ ಅಭಿವೃದ್ಧಿ ಮಾಡಲಾಗುವುದು.‌ ಕೋಲಾರಮ್ಮ ದೇಗುಲ ‌ಬಳಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಇಂದು ಪೌರಕಾರ್ಮಿಕರ ಹಬ್ಬ, ಅವರನ್ನು ಗೌರವವಾಗಿ ಕಾಣಬೇಕು. ವರ್ಷವಿಡೀ ಕೆಲಸ‌ ಮಾಡುವ ಅವರಿಗೆ‌ ಸಿಗುವುದೇ ಒಂದು ದಿನ. ನಾವೆಲ್ಲಾ ಹಬ್ಬ‌ ಮಾಡುವಾಗ ಅವರು ಕಸ ಎತ್ತುವುದರಲ್ಲಿ ನಿರತರಾಗಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತು ಒಂದು ದಿನವಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು ಎಂದು ಹೇಳಿದರು.

ಕೋಲಾರ ನಗರವನ್ನು ಸಚ್ಛ ನಗರ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಪ್ರಸ್ತಾಪ‌ ಇಟ್ಟರೆ ಕೇಂದ್ರ ‌ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯಿಂದ ನಾನು ಅಗತ್ಯ ಸೌಲಭ್ಯ ತಂದು ಕೊಡುತ್ತೇನೆ. ಪೌರಕಾರ್ಮಿಕರ ಏಳಿಗೆಗೆ ಸಾಕಷ್ಟು ಸವಲತ್ತುಗಳು ಇವೆ. ಅವುಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ತಮ್ಮದು ಎಂದರು.

ಪೌರಕಾರ್ಮಿಕರು ಇಲ್ಲ ಎಂದರೆ ನಗರ ನೈರ್ಮಲ್ಯ ಇರಲ್ಲ. ಅನಾರೋಗ್ಯ ಕಾಡುತ್ತದೆ. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮದು. ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ವಿಶೇಷ ಚಿಕಿತ್ಸೆ ಬೇಕಿದ್ದರೆ ನಾನು ಮಾತನಾಡಿ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.

ನಿವೃತ್ತ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ‌ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ನಗರಸಭೆ ಆಯುಕ್ತ‌ ನವೀನ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನು ಓದಿದ್ದೀರಾ..? ಗೋಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲಾಗಲು ಸತತ 228 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಲಿರುವ ಹಾಸನಿ

ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಪ್ರವೀಣ್ ಗೌಡ, ರಾಕೇಶ್, ಪ್ರಸಾದ್ ಬಾಬು, ಮಂಜುನಾಥ್, ನಗರಸಭೆ ಇನ್ನಿತರ ಸದಸ್ಯರು, ಸಿಬ್ಬಂದಿ,‌‌ ಅಧಿಕಾರಿ ಹಾಗೂ ಪೌರಕಾರ್ಮಿಕರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...