ನಷ್ಟ ಆದಂತಹ ರೈತರ ಬೆಳೆಗಳಿಗೆ ಪರಿಹಾರಕ್ಕೆ ಒತ್ತಾಯ

Date:

ಕೋಲಾರ: ಇತ್ತಿಚೆಗೆ ಬಿದ್ದ ಬಾರಿ ಮಳೆಗೆ ನಷ್ಟವಾದ ರೈತರ ಬೆಳೆಗಳಿಗೆ ಕೂಡಲೇ ಪರಿಹಾರ ಕೊಡಬೇಕೆಂದು ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಒತ್ತಾಯಿಸಿದರು

ತಾಲೂಕಿನ ನರಸಾಪುರ ಗ್ರಾಮದಲ್ಲಿ ಮಳೆಯ ನೀರು ಹರಿದು ನಷ್ಟವಾಗಿರುವ ಕೃಷಿ ಜಮೀನುಗಳ ವೀಕ್ಷಣೆಗಾಗಿ ಭೇಟಿ ನೀಡಿ ಬೆಳೆಗಳ ಪರಿವೀಕ್ಷಣೆ ಮಾಡಿ ಮಾತನಾಡಿ ಕೆ.ಸಿ ವ್ಯಾಲಿ ಯೋಜನೆಯ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿಯಿಂದ 3 ವರ್ಷಗಳ ಹಿಂದೆ ಇದೇ ಸಮಸ್ಯೆ ಉಂಟಾಗಿ ಅನೇಕ ರೈತರು ನಷ್ಟ ಅನುಭವಿಸಿದರು ಮಳೆಯಿಂದ ಮಳೆಯ ನೀರು ಮತ್ತು ಕೆ.ಸಿ ವ್ಯಾಲಿ ನೀರು ಎರಡು ಜೋಡಣೆಯಾಗಿ ಹರಿದ ಪರಿಣಾಮ ರೈತರ ಜಮೀನುಗಳಿಗೆ ನೀರು ನುಗ್ಗಿ ಸುಮಾರು 200 ರಿಂದ 250 ಎಕರೆ ಕೃಷಿ ಭೂಮಿಯಲ್ಲಿ ಬೆಳೆದಂತ ತರಕಾರಿ ಬೆಳೆಗಳು ನಷ್ಟವಾಗಿದ್ದು, ರೈತರು ಲಕ್ಷಾಂತರ ರೂಗಳ ನಷ್ಟ ಅನುಭವಿಸಿದ್ದಾರೆ, ಕೆಸಿ ವ್ಯಾಲಿ ಯೋಜನೆಯ ಕಾಲುವೆ ನಿರ್ಮಾಣ ಸಂದರ್ಭದಲ್ಲಿ ಕಾಲುವೆಯ ಕಟ್ಟಡವನ್ನು ಎತ್ತರ ಮಾಡಿದ್ದರೆ ಹಾಗೂ ತಡೆಗೋಡೆಯನ್ನು ಸರಿಯಾಗಿ ನಿರ್ಮಾಣ ಮಾಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆರೋಪಿಸಿದರು

ರೈತರ ತೊಂದರೆಗಳಿಗೆ ಕೆ.ಸಿ ವ್ಯಾಲಿ ಅಧಿಕಾರಿಗಳೇ ನೇರ ಹೊಣೆಗಾರರಾಗಿದ್ದಾರೆ ಯೋಜನೆಯ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿಯಿಂದ ಅವಾಂತರ ಸೃಷ್ಟಿಯಾಗಿದೆ, ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಬಗ್ಗೆ ಕಾಳಜಿ ವಹಿಸಬೇಕಿತ್ತು ಅನಾಹುತವನ್ನು ತಪ್ಪಿಸಬಹುದಾಗಿತ್ತು, ನರಸಾಪುರ ದಿನ್ನೆಹೊಸಳ್ಳಿ ಡಾಂಬರು ರಸ್ತೆಯ ಮೇಲೆ ನೀರು ಹರಿದು ರಸ್ತೆ ಕಿತ್ತು ಹೋಗಿದೆ ಕೂಡಲೇ, ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ ಕೆ.ಸಿ ವ್ಯಾಲಿ ಯೋಜನೆಯ ಇಂಜಿನಿಯರ್ ಗಳು ಕಾಮಗಾರಿಯನ್ನು ಮಾಡುವ ಸಂದರ್ಭದಲ್ಲಿ ಸಣ್ಣ ಕಾಲುವೆಯನ್ನು ನಿರ್ಮಾಣ ಮಾಡಿಲ್ಲ ಅದರಿಂದಲೇ ರೈತರ ತೋಟಗಾರಿಕಾ ಬೆಳೆ ಮತ್ತು ಕೃಷಿ ಬೆಳೆಗಳ ಮೇಲೆ ಹರಿದು ನಷ್ಟ ಅನುಭವಿಸಿದ್ದಾರೆ ಮುಂದಿನ ದಿನಗಳಲ್ಲಿ ಆಗಬಹುದಾದಂತಹ ಸಮಸ್ಯೆಗಳ ಬಗ್ಗೆ ಗಮನದಲ್ಲಿಟ್ಟುಕೊಂಡು ಕಾಲುವೆ ಕಟ್ಟಡ ನಿರ್ಮಾಣ ಮಾಡಬೇಕು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ರೀತಿಯ ಮಳೆ ಹೆಚ್ಚಾಗಿ ಬಿದ್ದಾಗ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿದರು

ಸ್ಥಳದಲ್ಲಿ ಇದ್ದ ನರಸಾಪುರ ಕಂದಾಯ ವೃತ್ತದ ಕಂದಾಯ ನಿರೀಕ್ಷಕ ಲೋಕೇಶ್ ಮಾತನಾಡಿ ತೋಟಗಾರಿಕಾ ಮತ್ತು ಕೃಷಿ ಬೆಳಿಗಳಿಗೆ ಮಳೆ ನೀರು ಹರಿದಿದ್ದು ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಹಾಗೂ ಅವರನ್ನು ಸ್ಥಳ ವೀಕ್ಷಣೆಗೆ ಕರೆದುಕೊಂಡು ಬರುವ ಪ್ರಯತ್ನ ಮಾಡಲಾಗುತ್ತದೆ, ನೀರು ಹರಿದಿರುವಂತಹ ಹಾಗೂ ನಷ್ಟ ಉಂಟಾಗಿರುವಂತಹ ರೈತರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಮತ್ತು ತಮ್ಮ ಜಮೀನಿನ ಪಹಣಿಯನ್ನು ಗ್ರಾಮ ಆಡಳಿತ ಅಧಿಕಾರಿಗೆ ನೀಡಿದರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ವರದಿಯನ್ನು ಕಳುಹಿಸಿ ಪರಿಹಾರವನ್ನು ಕೊಡಿಸುವಂತಹ ಪ್ರಯತ್ನ ಮಾಡಲಾಗುತ್ತದೆ, ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಆಗದಂತೆ ನೋಡಿಕೊಳ್ಳಲು ಈ ಯೋಜನೆಯ ಅಧಿಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

ಈ ಸಂದರ್ಭದಲ್ಲಿ ನರಸಾಪುರ ಕಂದಾಯ ಗ್ರಾಮ ಆಡಳಿತ ಅಧಿಕಾರಿ ರಮ್ಯ, ಕೋಲಾರ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಳ್ಳಿ ರಮೇಶ್, ರೈತರಾದ ಶಶಿಕುಮಾರ್, ಮಂಜುನಾಥ್, ಶಿವಕುಮಾರ್, ರಾಮಚಂದ್ರ, ಚಿಕ್ಕ ಅಣ್ಣಗಿರಿಯಪ್ಪ, ಪೈಲ್ವಾನ್ ವೆಂಕಟೇಶ್, ಮುನಿರಾಜು ಪುರುಷೋತ್ತಮ್, ವೆಂಕಟೇಶ್, ಮಂಜುನಾಥ್ ಹಾಗೂ ರೈತರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...