ನೀರಿಗಾಗಿ ನಡೆಯು ತ್ತಿರುವ ಧರ್ಮ ಯುದ್ಧವಿದು. ನಾವು ಪಾಂಡವರ ಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ.

Date:

ಕೋಲಾರ : ಶಾಶ್ವತ ನೀರಾವರಿ ಹೋರಾಟ ಸಮಿತಿ ಯಿಂದ ಹೊಸದಾಗಿ ಜಂಟಿ ಕ್ರಿಯಾ ಸಮಿತಿ ರೂಪಿಸಿಕೊಂಡು ಚಿಕ್ಕ ಬಳ್ಳಾಪುರದ ಕೆಇಬಿ ಸಮುದಾಯ ಭವನದಲ್ಲಿ ಅ.2ರಂದು ಜಲಗ್ರಹ ಕ್ಕಾಗಿ ಹೋರಾಟ ಹಮ್ಮಿಕೊಳ್ಳ ಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆ‌ರ್. ಆಂಜನೇಯ ರೆಡ್ಡಿ ತಿಳಿಸಿದರು.

ನಗರದ ಪತ್ರಕರ್ತರ ಭವನ ದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ನ್ಯಾಯ ಮೂರ್ತಿ ಗೋಪಾಲಗೌಡ ನೇತೃತ್ವ ದಲ್ಲಿ ತೆಲಂಗಾಣ ಮಾದರಿಯಲ್ಲಿ ಜಂಟಿ ಕ್ರಿಯಾ ಸಮಿತಿ ರೂಪಿಸಿ ಕೊಂಡು ಹೋರಾಟಕ್ಕೆ ಇಳಿಯು ತ್ತಿದ್ದೇವೆ. ಸಹಕಾರ ನೀಡಿದರೆ ಸಾಲದು; ಹೋರಾಟಕ್ಕೆ ಧುಮುಕ ಬೇಕು. ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಿದೆ. ಕುಡಿಯುವ ನೀರು ಪಡೆಯಲು ದೊಡ್ಡ ಹೋರಾಟ ರೂಪಿಸಿ ಸರ್ಕಾರವನ್ನು ಬಗ್ಗಿಸ ಬೇಕಿದೆ ಎಂದರು.

ಮುಂದಿನ ಪೀಳಿಗೆಯ ಅಳಿವು ಉಳಿವಿನ ಪ್ರಶ್ನೆ ಇದು. ನೀರಿನ ಹಕ್ಕಿಗಾಗಿ ವಿದ್ಯಾರ್ಥಿಗಳು, ಯುವ ಸಮುದಾಯ, ಬುದ್ದಿಜೀವಿಗಳು, ಪ್ರಗತಿಪರರು ಹಾಗೂ ಎಲ್ಲಾ ಸಂಘ ಟನೆಗಳು ಹೋರಾಟಕ್ಕೆ ಬರಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟ ಎಂದು ಹೇಳಿದರು. ಎತ್ತಿನಹೊಳೆ ಯೋಜನೆಯಲ್ಲಿ ಮೋಸವಾಗುತ್ತಿದೆ, ಕೆ.ಸಿ.ವ್ಯಾಲಿ
ಮೂರನೇ ಹಂತದ ಶುದ್ದೀಕರಣ ನಡೆಯುತ್ತಿಲ್ಲ ಎಂಬ ನಮ್ಮ ಹೋರಾಟದ ಕಾರಣ ಸರ್ಕಾರ ನಮ್ಮನ್ನು ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ದೂರಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ 30 ವರ್ಷಗಳಿಂದ ನೀರಿನ ಹಾಹಾಕಾರ ಅನುಭವಿಸುತ್ತಿವೆ. ಹೋರಾಟಗಳೂ ನಡೆಯುತ್ತಿವೆ. ಶುದ್ಧ ನೀರು ಪೂರೈಸುವ ಕೆಲಸ ಸರ್ಕಾರದಿಂದ ಈವರೆಗೆ ಆಗಿಲ್ಲ. ಪೆನ್ನಾರ್ ಯೋಜನೆ ಮರೆತು ಹೋಗಿದೆ. ಕೆರೆಗಳ ಸ್ವರೂಪವೂ ಸರಿ ಇಲ್ಲ. ಮುಂದಿನ ಪೀಳಿಗೆಗೆ ನೀರಿನ ಭದ್ರತೆ ಇಲ್ಲವಾಗಿದೆ. ಆಳದಲ್ಲಿ ಸಿಗುತ್ತಿರುವ ನೀರು ವಿಷಯುಕ್ತವಾಗಿದೆ. ಆಹಾರ ವಿಷಮಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎತ್ತಿನಹೊಳೆ ಯೋಜನೆ ಯಿಂದ ನೀರು ಬರಲ್ಲ ಎಂದು ಗೊತ್ತಿದ್ದರೂ ಅನುದಾನ ಹೆಚ್ಚಿಸುತ್ತಲೇ ಇದ್ದಾರೆ. 30 ಸಾವಿರ ಕೋಟಿ ವೆಚ್ಚ ಮಾಡಿದ್ದಾರೆ. ಆದರೂ ಈ ಭಾಗದ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಪ್ಸರ್ ನೇಮಕ

ಸಂಚಾಲಕ ಹೊಳಲಿ ಪ್ರಕಾಶ್ ಮಾತನಾಡಿ, ನೀರಿಗಾಗಿ ನಡೆಯು ತ್ತಿರುವ ಧರ್ಮ ಯುದ್ಧವಿದು. ನಾವು ಪಾಂಡವರ ಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ. ನಮ್ಮ ಜಲಾಗ್ರಹ ಹೋರಾಟಕ್ಕೆ ಕೈಜೋಡಿ ಸದಿದ್ದರೆ ಕೌರವರ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದರು. ನಮ್ಮ ಹೋರಾಟಕ್ಕೆ ಬೆಂಬಲ ನೀಡದ ರಾಜಕಾರಣಿಗಳಿಗೆ ನೇಪಾಳದ ರೀತಿ ದಂಗೆ ಏಳಲು ಗ್ರಾಮದಲ್ಲಿ ಜನರನ್ನು ಸಂಘಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಕೃಷ್ಣ,ನೀರಾವರಿ ರಾಜೇಶ್, ಮಳ್ಳೂರು ಹರೀಶ್, ಗೋವರ್ದನ್, ಸಲಾಲುದ್ದೀನ್ ಬಾಬು, ರಾಮು ಶಿವಣ್ಣ, ಡಾ. ರಮೇಶ್, ಜಿ.ನಾರಾಯಣಸ್ವಾಮಿ, ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...