ಕೆಜಿಎಫ್: ಪಟ್ಟಣದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಶಾಲೆಯ 26ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಲಾಯಿತು.
ಶ್ರೀ ಭವಾನಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲಾಯಿತು.
ಶಾಲಾ ವಾರ್ಷಿಕೋತ್ಸವ ಪ್ರಯುಕ್ತವಾಗಿ ಪೋಷಕರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು, ಕ್ರೀಡಾಕೂಟದಲ್ಲಿ ವಿಜೇತರಾದ ಪೋಷಕರಿಗೆ ವೇದಿಕೆ ಮೇಲೆ ಬಹುಮಾನ ವಿತರಣೆ ಮಾಡಲಾಯಿತು.
ಪೌರ ಕಾರ್ಮಿಕರಿಗೆ ಸನ್ಮಾನ:
ಶ್ರೀ ಭವಾನಿ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ವಿಶೇಷವಾಗಿ ವಾರ್ಷಿಕೋತ್ಸವದಲ್ಲಿ ಬೇತಮಂಗಲ ಗ್ರಾಮವನ್ನು ಸ್ವಚ್ಚತೆ ಯಿಂದ ನಾಗರಿಕರನ್ನು ಕಾಪಾಡುವ ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಇದನ್ನು ಓದಿದ್ದೀರಾ..? ಹಾಲು ಡೇರಿ ಕಾರ್ಯದರ್ಶಿಗಳು, ಸಿಬ್ಬಂದಿಗಳ ಬೇಡಿಕೆ ಈಡೇರಿಕೆ
ಈ ಕಾರ್ಯಕ್ರಮದಲ್ಲಿ ಶಾಲೆಯ ಸ್ಥಾಪಕರಾದ ಕಮಲಮ್ಮ ಗೋಪಾಲ್ ರೆಡ್ಡಿ, ಶಾಲಾ ಕಾರ್ಯದರ್ಶಿ ದಾಮೋದರ್ ರೆಡ್ಡಿ , ಸಾಯಿ ಪಿಯು ಕಾಲೇಜಿನ ಪ್ರಾಂಶುಪಾಲೆ ತೇಜಸ್ವಿನಿ ಸತೀಶ್ ರೆಡ್ಡಿ, ಸ್ವಾತಿ ರಮೇಶ್, ನಿವೃತ್ತ ಶಿಕ್ಷಕ ಅಶ್ವತ್ಥಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಹರಿ, ಗ್ರಾಪಂ ಅಧ್ಯಕ್ಷ ವಿನು ಕಾರ್ತಿಕ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್, ನಿರ್ದೇಶಕ ಮಂಜುನಾಥ್, ಮುಖ್ಯ ಶಿಕ್ಷಕ ಸತ್ಯ ನಾರಾಯಣ ಮೂರ್ತಿ ಸೇರಿದಂತೆ ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





