ಶ್ರೀನಿವಾಸಪುರ: ಸರ್ಕಾರ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಸಹ, ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ತಯಾರಿಕೆ ಮತ್ತು ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಪುರಸಭೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.
ಪಟ್ಟಣದ ಇಂದಿರಾ ನಗರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆ ಹಾಗೂ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸುಮಾರು 450 ಕೆಜಿಗೂ ಅಧಿಕ ತೂಕದ ನಿಷೇಧಿತ ಪ್ಲಾಸ್ಟಿಕ್ ಕವರ್ಗಳು, ತಟ್ಟೆಗಳು ಹಾಗೂ ಲೋಟಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪುರಸಭೆ ಅಧಿಕಾರಿಗಳು ಈ ಹಿಂದೆಯೇ ಹಲವು ಬಾರಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ಮಾಡಿ ಎಚ್ಚರಿಕೆ ನೀಡಿದ್ದರು.
ಇದನ್ನು ಓದಿದ್ದೀರಾ..? ಪೂರ್ವ ಕಾಲದಿಂದ ಉಳುಮೆ ಮಾಡುತ್ತಿದ್ದ ಜಮೀನಿಗೆ ಇತರರಿಂದ ಸರ್ವೆ ಕಾರ್ಯ:ಆರೋಪ
ಅಧಿಕಾರಿಗಳ ಎಚ್ಚರಿಕೆಯ ನಡುವೆಯೂ ಪ್ಲಾಸ್ಟಿಕ್ ಮಾರಾಟ ಮತ್ತು ಸಂಗ್ರಹಣೆ ಅವ್ಯಾಹತವಾಗಿ ಮುಂದುವರಿದ ಹಿನ್ನೆಲೆಯಲ್ಲಿ ಈ ದಾಳಿ ಸಂಘಟಿಸಲಾಗಿತ್ತು.”ಯಾವುದೇ ಕಾರಣಕ್ಕೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಮಾಡಬಾರದು. ಒಂದು ವೇಳೆ ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ವರ್ತಕರಿಗೆ ಹಾಗೂ ವ್ಯಾಪಾರಿಗಳಿಗೆ ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಪರಿಸರ ರಕ್ಷಣೆ ಮತ್ತು ಸರ್ಕಾರದ ಆದೇಶ ಪಾಲನೆಯ ದೃಷ್ಟಿಯಿಂದ ಪುರಸಭೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ
ಪ್ಲಾಸ್ಟಿಕ್ ತಯಾರಿಕಾ ಘಟಕದ ಮೇಲೆ ಪುರಸಭೆ ದಾಳಿ – 450 ಕೆಜಿ ಪ್ಲಾಸ್ಟಿಕ್ ವಶ
Date:
ಪೋಸ್ಟ್ ಹಂಚಿಕೊಳ್ಳಿ:




