ಬಾಗೇಪಲ್ಲಿ:ಕೇಂದ್ರ ಸರ್ಕಾರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾ ಮೋಸ ಎಂದು ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆರೋಪಿಸಿದರು.
ದೇಶದಲ್ಲಿ ನಡೆಯುತ್ತಿರುವ ಮತಕಳ್ಳತನ ಪ್ರಕರಣ ತಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಡಾ.ಅಂಬೇಡ್ಕರ್ ಪುಥಳಿ ಮುಂದೆ ಬುಧವಾರ ಪ್ರತಿಭಟನೆ ಮಾಡಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಸಹಿ ಮಾಡುವ ಮೂಲಕ ಸಹಿ
ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಜಾತಿ, ಧರ್ಮದ ಆಧಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದಿಲ್ಲ. ನಮ್ಮದು ಅಭಿವೃದ್ಧಿ ಕೇಂದ್ರಿಕೃತ, ಹಿಂದುಳಿದವರನ್ನು ಮುನ್ನಲೆಗೆ ತರುವ ಬದ್ಧತೆಯ ರಾಜಕಾರಣ. ಕರ್ನಾಟಕದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ- ಧರ್ಮದ ಆಧಾರದಲ್ಲಿ ಅಲ್ಲ. ಎಲ್ಲ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಗ್ಯಾರಂಟಿ ತಾಲ್ಲೂಕು ಸಮಿತಿ ಎಚ್.ಎಸ್. ನರೇಂದ್ರ ಮಾತನಾಡಿ, ‘ಬಿಜೆಪಿಯವರು ದೇಶದಾದ್ಯಂತ ನಡೆಸಿರುವ ಮತಗಳ್ಳತನ ಬಯಲಾಗಿದೆ. ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಮತಕಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಬೂತ್ಮಟ್ಟದ ಸದಸ್ಯರು ತಮಗೆ ವಹಿಸಿರುವ ವಾರ್ಡುಗಳಿಗೆ ತೆರಳಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಸಹಿ ಸಂಗ್ರಹಿಸಬೇಕು. ಪ್ರತಿ ಬೂತ್ಗಳಲ್ಲಿ ಕನಿಷ್ಠ 200ರಷ್ಟು ಮತದಾರರ ಸಹಿ ಸಂಗ್ರಹಿಸಬೇಕೆ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ 50,0000 ಸಾವಿರ ಸಹಿ ಅಭಿಯಾನ ಗುರಿ ಇದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಪೋಲಿಸ್ ಭದ್ರತೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಾಲೂರು ಕ್ಷೇತ್ರದ ಮರುಮತ ಎಣಿಕೆ
ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸ ರೆಡ್ಡಿ, ನಂಜುಂಡಪ್ಪ,
ಡಿ.ಎಸ್.ಎಸ್ ಮುಖಂಡರಾದ ಪೂಜಪ್ಪ ,ಕೋಟಪ್ಪ,ಗೂಳೂರು ಎಸ್.ಎಸ್.ರಮೇಶ್ ಬಾಬು,ಮಂಜುನಾಥ ರೆಡ್ಡಿ ಬೂರಗಮಡುಗು ಲಕ್ಷ್ಮೀನರಸಿಂಹಪ್ಪ ,ಸೋಮಶೇಖರ, ಕ್ರಿಕೆಟ್ ಮೂರ್ತಿ ಹಾಗೂ ಇತರೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.





