ಬಿಜೆಪಿಯಿಂದ ಆದಿವಾಸಿಗಳ ಕಡೆಗಣನೆ: ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ: ಶೋಭನ್ ಬಾಬು

Date:

ಕೋಲಾರ: ದೇಶದಲ್ಲಿ ಆದಿವಾಸಿಗಳ ಅಭಿವೃದ್ಧಿ ಬಿಜೆಪಿ­ ಮತ್ತು ಅದರ ಪೋಷಕ ಸಂಘಟನೆ ಆರ್.ಎಸ್.ಎಸ್ ನಿಂದ ಸಾಧ್ಯವಿಲ್ಲ ಚುನಾವಣೆಯ ಸಂದರ್ಭದಲ್ಲಿ ಮಾತ್ರವೇ ಆದಿವಾಸಿಗಳು ನೆನಪಿಗೆ ಬರತ್ತಾರೆ ಹೊರತು ಅಧಿಕಾರದಲ್ಲಿ ಇದ್ದಾಗ ಬರಲ್ಲ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನು ಮಾಡಿದರು ಎಂಬುದು ದೇಶದ ಜನತೆಗೆ ಗೊತ್ತಿದೆ ಎಂದು ಎಐಸಿಸಿ ಆದಿವಾಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಶೋಭನ್ ಬಾಬು ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಕಾಂಗ್ರೆಸ್ ಎಸ್ಟಿ ಘಟಕದ ಸಂಘಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ನರೇಂದ್ರಮೋದಿ ಪ್ರಧಾನಿಯಾಗಿನಿಂದ ದಲಿತರ, ಬಡವರ, ಹಿಂದುಳಿದ ವರ್ಗಗಳ ಅಭಿವೃದ್ಧಿ ಕುಂಟಿತಗೊಳ್ಳುತ್ತಿದೆ ಬಿಜೆಪಿ ಅಭಿ­ವೃದ್ಧಿಯ ನಾಟಕವಾಡುತ್ತಿದೆ ಕರ್ನಾಟಕ ರಾಜ್ಯ­ದಲ್ಲಿ ಬಿಜೆಪಿ ಅಧಿಕಾರ­ದಲ್ಲಿದ್ದಾಗ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ಜೈಲು ಕಂಡಿದ್ದಾರೆ. ಇಂತಹ ಪಕ್ಷದಿಂದ ದೇಶದ ಮತ್ತು ಆದಿವಾಸಿಗಳ ಅಭಿವೃದ್ಧಿ ಹೇಗೆ ಸಾಧ್ಯ ಎಂದರು.

ಎಐಸಿಸಿ ಮಾರ್ಗದರ್ಶನದಲ್ಲಿ ಆದಿವಾಸಿಗಳ ಮಧ್ಯೆ ನಾಯಕತ್ವವನ್ನು ಬೆಳೆಸಬೇಕು ಅದಕ್ಕಾಗಿ ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದ ತನಕ ನಾಯಕರನ್ನು ಗುರುತಿಸಬೇಕು ವಿಶೇಷವಾಗಿ ಮಹಿಳೆಯರು ಯುವಕರಿಗೆ ಹೆಚ್ಚಿನ ಜವಾಬ್ದಾರಿ ಕೊಡಬೇಕಾಗಿದೆ ನಾಯಕರು ಮತ್ತು ಕಾರ್ಯಕರ್ತರು ಮಧ್ಯೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಏನು ಸಮಸ್ಯೆ ಇದ್ದರೂ ಗಮನಕ್ಕೆ ತನ್ನಿ ಎಂದ ಅವರು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಈ ಭಾಗದ ಮತದಾರರು ತಕ್ಕ ಪಾಠ ಕಲಿಸಬೇಕು ದೇಶಕ್ಕೆ ರಾಹುಲ್‌ ಗಾಂಧಿಯಂತಹ ಯುವ ಪ್ರಧಾನಿಯ ಅವಶ್ಯಕತೆ ಇದೆ. ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಉತ್ತಮ ಆಡಳಿತ­ಕ್ಕಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿ­ಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ದೇಶದಲ್ಲಿ ಬಿಜೆಪಿ ಪಕ್ಷವು ಆರ್.ಎಸ್.ಎಸ್ ಸಂಘದ ಮಾರ್ಗದರ್ಶನದಲ್ಲಿ ದೇಶವನ್ನು ಹಾಳು ಮಾಡಲು ಹೊರಟಿದೆ ರಾಮಾಯಣವನ್ನು ವಾಲ್ಮೀಕಿ ಬರೆದಿಲ್ಲ ಎಂದು ಹಸಿ ಸುಳ್ಳು ಜನರ ಮಧ್ಯೆ ಬಿತ್ತಲು ಹೊರಟಿದೆ ಇದನ್ನು ವಿರೋಧ ಮಾಡಿಲ್ಲ ಎಂದರೆ ಮುಂದೆ ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುವ ಕಾಲ ದೂರವಿಲ್ಲ ನಾವು ಎಲ್ಲರೂ ಹಿಂದೂಗಳಾಗಿದ್ದರೂ ಎಸ್ಟಿ ಸಮಾಜದ ೭% ಮೀಸಲಾತಿ ಜಾರಿ ಮಾಡಲಿಲ್ಲ ಆದರೆ ೨% ಜನಸಂಖ್ಯೆಗೆ ೧೦% ಮೀಸಲಾತಿ ಕೊಟ್ಟು ಬಿಜೆಪಿಯ ದ್ವಿಮುಖ ನೀತಿಯಾಗಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಗ್ಯಾರಂಟಿ ಕೊಡಲಾಗಿದೆ ಎಲ್ಲರಿಗೂ ಅವಕಾಶ ಕೊಟ್ಟಿದೆ ಬೇರೆ ರಾಜ್ಯದಲ್ಲಿ ಬಿಜೆಪಿ ಭರವಸೆ ಕೊಟ್ಟು ಜಾರಿ ಮಾಡಿಲ್ಲ ಎಂದರು.

ಇದನ್ನು ಓದಿದ್ದೀರಾ…? ಅರಿಕುಂಟೆ ಗ್ರಾಪಂ ಅಧಿಕಾರಿಗಳಿಗೆ 25 ಸಾವಿರ ದಂಡ

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಟಿ ಘಟಕದ ರಾಜ್ಯ ಅಧ್ಯಕ್ಷ ವಿಜಯ ನಾಯಕ್, ಪ್ರಧಾನ ಕಾರ್ಯದರ್ಶಿ ದಿನೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಫ್ಸರ್, ಮುಖಂಡರಾದ ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಅಡ್ಡಗಲ್ ನರೇಶ್, ಕರಡುಗುರ್ಕಿ ಗೋವಿಂದ, ಬೈರಂಡಹಳ್ಳಿ ನಾಗೇಶ್, ವೆಲಗಲಬುರೆ ವಿಜಿ, ಬೈರಕೂರು ರಾಮಾಂಜಿ, ಗಡ್ಡರೂ ಪ್ತಕಾಶ್, ವಕ್ಕಲೇರಿ ರಾಜು, ವಾಸು, ಹರಟಿ ಸಂಪತ್, ಪಿಳ್ಳಪ್ಪ, ಬೆಳ್ಳೂರು ಮುರಳಿ, ಶಾಂತ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...