ಬೀದರ್‌ |ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವು

Date:

  • ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವುಗೊಳಿಸುವ ವಿಶ್ವಾಸ
  • ಭಾಲ್ಕಿಯ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭರವಸೆ

ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಆದಿತ್ಯ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, “ಕಳೆದ ಮೂರು ತಿಂಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ತೆರವುಗೊಳಿಸುವ ಭರವಸೆ ನೀಡಿದ್ದೇನೆ. ಅದರಂತೆ ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೂಡ ಆಗಿದ್ದೇನೆ. ಡಿಸಿ, ಎಸ್ಪಿ ಮತ್ತು ಅಬಕಾರಿ ಅಧಿಕಾರಿಗಳ ತಂಡದೊಂದಿಗೆ ಇಲ್ಲಿಯ ಮದ್ಯದ ಅಂಗಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದೇನೆ” ಎಂದರು.

“ಕಾನೂನು ಪ್ರಕಾರ ಅಧಿಕೃತ ಆದೇಶ ಹೊರಡಿಸಿದ್ದು ಮುಂದಿನ ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವು ಆಗಲಿದೆ. ಹಿಂದಿನ ನಾಲ್ಕು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಕೂಡ ಬಿಜೆಪಿ ಮುಖಂಡರು ಮದ್ಯದ ಅಂಗಡಿ ತೆರವುಗೊಳಿಸುವ ಪ್ರಯತ್ನ ಮಾಡಲಿಲ್ಲ. ಕೇಂದ್ರದ ಸಚಿವ ಖೂಬಾ ಅವರು ಶಿವ ಜಯಂತಿ ಸಂದರ್ಭದಲ್ಲಿ ಮದ್ಯದ ಅಂಗಡಿ ತೆರವು ಮಾಡಿಸುವುದಾಗಿ ಹುಸಿ ಭರವಸೆ ನೀಡಿದರು. ಮದ್ಯದ ಅಂಗಡಿ ವಿಷಯವಾಗಿ ಬಿಜೆಪಿ ರಾಜಕೀಯ ಮಾಡಿತು ಹೊರತು ಎತ್ತಂಗಡಿ ಮಾಡುವ ಕೆಲಸ ಮಾಡಲಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ವಿರೋಧ ಪಕ್ಷದಲ್ಲಿದ್ದರೂ ಕೂಡ ಮದ್ಯದ ಅಂಗಡಿ ತೆರವಿಗಾಗಿ ವಿಧಾನ ಸಭೆ ಕಲಾಪದಲ್ಲಿ ಮಾತನಾಡಿದ್ದೇನೆ. ಇದೀಗ ನಾನು ಪುನಃ ನಾಲ್ಕನೇ ಬಾರಿಗೆ ಶಾಸಕ, ಸಚಿವನಾದ ಮೇಲೆ ಮದ್ಯದ ಅಂಗಡಿ ತೆರವುಗೊಳಿಸುವ ಕೆಲಸ ಮಾಡಿ ಜನರಿಗೆ ನೀಡಿರುವ ಭರವಸೆ ಈಡೇರಿಸುತ್ತಿದ್ದೇನೆ” ಎಂದರು.

“ಬೀದರ್ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಮುಂದಿನ ಒಂದೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಹೊಸದಾಗಿ ಆಡಳಿತ ತರಲು ಕಾರ್ಯಕರ್ತರು ಸನ್ನದ್ಧರಾಗಬೇಕು. ಸಹಕಾರ ಕ್ಷೇತ್ರದಲ್ಲಿ ನಮ್ಮ ಭಾಗದ ರೈತರ ಕೆಲಸಗಳು ಸುಗಮವಾಗಿ ಆಗಬೇಕಿದ್ದರೇ ಹೊಸ ಆಡಳಿತ ತರುವುದು ಅವಶ್ಯಕತೆ ಇದೆ. ಹಾಗಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪುರಸಭೆ ಸದಸ್ಯ ಬಸವರಾಜ ವಂಕೆ, ಪ್ರಮುಖರಾದ ಪ್ರವೀಣ ಹಣಮಶೆಟ್ಟಿ, ಅಶೋಕರಾವ ಸೋನಜಿ, ಡಾ.ರಾಜೇಂದ್ರ ಜಾಧವ, ಸತೀಶ ಪಾಟೀಲ್, ಅನಿಲ ಪಾಟೀಲ್, ವೈಜಿನಾಥ ತಗಾರೆ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...